ETV Bharat / state

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಈಟಿವಿ ಭಾರತ ಗ್ರೌಂಡ್​ ರಿಪೋರ್ಟ್​ - ಈಟಿವಿ ಭಾರತ ಗ್ರೌಂಡ್​ ರಿಪೋರ್ಟ್​

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಸ್ಥಳದಲ್ಲಿ 34 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಈ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಗ್ರೌಂಡ್​ ರಿಪೋರ್ಟ್​ ಇಲ್ಲಿದೆ ನೋಡಿ.

Chamundi hill
ಚಾಮುಂಡಿ ಬೆಟ್ಟ
author img

By

Published : Aug 26, 2021, 4:14 PM IST

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿ 34ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು, ತನಿಖೆ ಚುರುಕುಗೊಂಡಿದೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಪ್ರಕರಣದ ಕುರಿತಂತೆ ಮಾಹಿತಿ ನೀಡಿರುವ ಈಟಿವಿ ಭಾರತದ ಪ್ರತಿನಿಧಿ

ಮಂಗಳವಾರ ಸಂಜೆ ಚಾಮುಂಡಿ ಬೆಟ್ಟದ ತಪ್ಪಿನಲ್ಲಿರುವ ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಬೈಕ್​​​ನಲ್ಲಿ ತೆರಳಿದ್ದರು. ಈ ವೇಳೆ ಏಕಾಂತದಲ್ಲಿದ್ದಾಗ ಅಲ್ಲೇ ಮತ್ತೊಂದು ಕಡೆ ಮದ್ಯಪಾನ ಮಾಡುತ್ತಿದ್ದ 6 ಜನ ಯುವಕರ ಗುಂಪೊಂದು ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನ ವಿಡಿಯೋ ತೆಗೆದು ಹತ್ತಿರ ಹೋಗಿ ಇವರನ್ನು ಹಣಕ್ಕಾಗಿ ಬ್ಲಾಕ್​​ಮೇಲ್ ಮಾಡಿದ್ದಾರೆ. ಹಣ ಕೊಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ.

ಆದರೆ ಯುವಕನ ಬಳಿ ಹಣವಿಲ್ಲದ ಕಾರಣ ಆತನ ಮೇಲೆ ಹಲ್ಲೆ ಮಾಡಿ ಯುವತಿ ಮೇಲೆ ಧುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ಯುವಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಸದ್ಯ ಸಂತ್ರಸ್ತೆಯ ವೈದ್ಯಕೀಯ ವರದಿ ಬಂದ ನಂತರ ಹಾಗೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಸತ್ಯ ಹೊರ ಬೀಳುವ ಸಾಧ್ಯತೆ ಇದೆ.

ಓದಿ: Mysore Gangrape ಪ್ರಕರಣ: ಪೊಲೀಸರಿಗೆ 34 ಸಾಕ್ಷ್ಯಗಳು ದೊರೆತಿವೆ ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ಘಟನೆ ನಡೆದ ಸಮಯದಲ್ಲಿ ಆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೊಬೈಲ್ ನಂಬರ್​ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಈ ಭಾಗದಲ್ಲಿ ಪ್ರತಿನಿತ್ಯ ಯಾರು ಓಡಾಡುತ್ತಾರೆ ಮತ್ತು ಈ ಪ್ರದೇಶದಲ್ಲಿರುವ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ಅವರು ಮಹಿಳಾ ಆಯೋಗದ ಅಧ್ಯಕ್ಷೆರಿಗೆ ಒಂದೆರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಈ ಮಧ್ಯೆ ಘಟನೆ ನಡೆದ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದನ್ನೂ ಓದಿ: Mysuru Gangrape case: ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಜಿಪಿಗೆ ಪತ್ರ ಬರೆದ ರಾ.ಮಹಿಳಾ ಆಯೋಗ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿ 34ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು, ತನಿಖೆ ಚುರುಕುಗೊಂಡಿದೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಪ್ರಕರಣದ ಕುರಿತಂತೆ ಮಾಹಿತಿ ನೀಡಿರುವ ಈಟಿವಿ ಭಾರತದ ಪ್ರತಿನಿಧಿ

ಮಂಗಳವಾರ ಸಂಜೆ ಚಾಮುಂಡಿ ಬೆಟ್ಟದ ತಪ್ಪಿನಲ್ಲಿರುವ ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಬೈಕ್​​​ನಲ್ಲಿ ತೆರಳಿದ್ದರು. ಈ ವೇಳೆ ಏಕಾಂತದಲ್ಲಿದ್ದಾಗ ಅಲ್ಲೇ ಮತ್ತೊಂದು ಕಡೆ ಮದ್ಯಪಾನ ಮಾಡುತ್ತಿದ್ದ 6 ಜನ ಯುವಕರ ಗುಂಪೊಂದು ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನ ವಿಡಿಯೋ ತೆಗೆದು ಹತ್ತಿರ ಹೋಗಿ ಇವರನ್ನು ಹಣಕ್ಕಾಗಿ ಬ್ಲಾಕ್​​ಮೇಲ್ ಮಾಡಿದ್ದಾರೆ. ಹಣ ಕೊಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ.

ಆದರೆ ಯುವಕನ ಬಳಿ ಹಣವಿಲ್ಲದ ಕಾರಣ ಆತನ ಮೇಲೆ ಹಲ್ಲೆ ಮಾಡಿ ಯುವತಿ ಮೇಲೆ ಧುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ಯುವಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಸದ್ಯ ಸಂತ್ರಸ್ತೆಯ ವೈದ್ಯಕೀಯ ವರದಿ ಬಂದ ನಂತರ ಹಾಗೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಸತ್ಯ ಹೊರ ಬೀಳುವ ಸಾಧ್ಯತೆ ಇದೆ.

ಓದಿ: Mysore Gangrape ಪ್ರಕರಣ: ಪೊಲೀಸರಿಗೆ 34 ಸಾಕ್ಷ್ಯಗಳು ದೊರೆತಿವೆ ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ಘಟನೆ ನಡೆದ ಸಮಯದಲ್ಲಿ ಆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೊಬೈಲ್ ನಂಬರ್​ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಈ ಭಾಗದಲ್ಲಿ ಪ್ರತಿನಿತ್ಯ ಯಾರು ಓಡಾಡುತ್ತಾರೆ ಮತ್ತು ಈ ಪ್ರದೇಶದಲ್ಲಿರುವ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ಅವರು ಮಹಿಳಾ ಆಯೋಗದ ಅಧ್ಯಕ್ಷೆರಿಗೆ ಒಂದೆರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಈ ಮಧ್ಯೆ ಘಟನೆ ನಡೆದ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದನ್ನೂ ಓದಿ: Mysuru Gangrape case: ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿಜಿಪಿಗೆ ಪತ್ರ ಬರೆದ ರಾ.ಮಹಿಳಾ ಆಯೋಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.