ETV Bharat / state

ಮೈಸೂರಿನಲ್ಲಿ ಸಿದ್ಧವಾಗುತ್ತಿದೆ ಪ್ರಧಾನಿ ಒಪ್ಪಿದ ಶಂಕರಾಚಾರ್ಯರ ಪ್ರತಿಮೆ

author img

By

Published : Jun 12, 2021, 9:36 PM IST

Updated : Jun 16, 2021, 8:33 PM IST

ಶಂಕರಾಚಾರ್ಯರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ದೇಶದಾದ್ಯಂತ ಹಲವು ಶಿಲ್ಪ ಕಲಾವಿದರನ್ನು ಆಹ್ವಾನಿಸಲಾಗಿತ್ತು. ಅದರಲ್ಲಿ ಕರ್ನಾಟಕದ ನಾಲ್ಕು ಶಿಲ್ಪಿಗಳ ಹೆಸರನ್ನು ಸೂಚನೆ ಮಾಡಲಾಗಿತ್ತು. ಅಂತಿಮವಾಗಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಂಕರಾಚಾರ್ಯ ಪ್ರತಿಮೆ ಮಾಡುವ ಅವಕಾಶ ಒದಗಿ ಬಂದಿದೆ.

ಮೈಸೂರಿನಲ್ಲಿ ಸಿದ್ಧವಾಗುತ್ತಿದೆ ಪ್ರಧಾನಿ ಒಪ್ಪಿದ ಶಂಕರಾಚಾರ್ಯರ ಪ್ರತಿಮೆ
ಮೈಸೂರಿನಲ್ಲಿ ಸಿದ್ಧವಾಗುತ್ತಿದೆ ಪ್ರಧಾನಿ ಒಪ್ಪಿದ ಶಂಕರಾಚಾರ್ಯರ ಪ್ರತಿಮೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿದ ಶಂಕರಾಚಾರ್ಯರ ಪ್ರತಿಮೆಯ ತಯಾರಾಗುತ್ತಿದೆ. ಉತ್ತರಾಖಂಡದ ಕೇದಾರನಾಥ ಕ್ಷೇತ್ರದಲ್ಲಿ ಅದ್ವೈತ ತತ್ವ ಪ್ರತಿಪಾದಕ ಶಂಕರಚಾರ್ಯರು ಐಕ್ಯವಾದ ಸ್ಥಳದಲ್ಲಿ 'ಶ್ರೀ ಶಂಕರಾಚಾರ್ಯರ ಅಧ್ಯಯನ ಪೀಠ ಮತ್ತು ಮ್ಯೂಸಿಯಂ' ಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಶಂಕರಾಚಾರ್ಯರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ದೇಶದಾದ್ಯಂತ ಹಲವು ಶಿಲ್ಪ ಕಲಾವಿದರನ್ನು ಆಹ್ವಾನಿಸಲಾಗಿತ್ತು.

ಅದರಲ್ಲಿ ಕರ್ನಾಟಕದ ನಾಲ್ಕು ಶಿಲ್ಪಿಗಳ ಹೆಸರನ್ನು ಸೂಚಿಸಲಾಗಿತ್ತು. ಅಂತಿಮವಾಗಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಂಕರಾಚಾರ್ಯ ಪ್ರತಿಮೆ ಮಾಡುವ ಅವಕಾಶ ಒದಗಿ ಬಂದಿದೆ. 2020ರ ಸೆಪ್ಟೆಂಬರ್​​ನಲ್ಲಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ 2 ಅಡಿ ಎತ್ತರದ ಶಂಕರಾಚಾರ್ಯ ಮೂರ್ತಿ ಮಾದರಿಯನ್ನು ಪ್ರಧಾನಿ ಮೋದಿ ಅವರಿಗೆ ನೋಡಲು ಕಳುಹಿಸಿದ್ದರು. ಇದನ್ನು ನೋಡಿದ ಮೋದಿ ಅವರು ಶಂಕರಾಚಾರ್ಯರ ಅವರ ಪ್ರತಿಮೆ ಮಾಡಲು ತಮ್ಮ ಇಲಾಖೆ ಮೂಲಕ ಅರುಣ್ ಯೋಗಿರಾಜ್ ಅವರಿಗೆ ಸೂಚನೆ ಕೊಟ್ಟಿದ್ದಾರೆ.

ಶಂಕರಾಚಾರ್ಯರ 12 ಅಡಿ ಎತ್ತರದ ಪ್ರತಿಮೆ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್

ಇಲಾಖೆ ಸೂಚನೆಯಂತೆ ಕಾರ್ಯಾ ಆರಂಭಿಸಿದ ಅರುಣ್ ಯೋಗಿರಾಜ್ ಅವರು ಸರಸ್ವತಿಪುರಂನಲ್ಲಿರುವ ಶಿಲ್ಪಗಳ ಕೆತ್ತನೆ ಸ್ಥಳದಲ್ಲಿ, 12 ಅಡಿ ಎತ್ತರದ ಶಂಕರಾಚಾರ್ಯರು ಕುಳಿತಿರುವ ಬಂಗಿಯಲ್ಲಿ ಪ್ರತಿಮೆ ಸಿದ್ಧಗೊಳ್ಳುತ್ತಿದ್ದು, ಅಂತಿಮ ಕಾರ್ಯಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಪ್ರತಿಮೆ ಮಾಡಲು ಹಾಸನದ ಬೇಲೂರು, ಹಳೇಬೀಡಿನ ಶಿಲ್ಪಕಲೆಗೆ ಬಳಸಿರುವ ಕೃಷ್ಣಶಿಲೆ ಕಲ್ಲನ್ನು ಬಳಸಲಾಗಿದೆ. ಮಳೆ, ಬಿಸಿಲು, ಬೆಂಕಿ ನೀರಿನಿಂದ ಯಾವುದೇ ಹಾನಿಯಾಗುವುದಿಲ್ಲ.‌

ಪ್ರಧಾನಿ ಮೋದಿಯವರು ಪ್ರತಿಮೆ ನಿರ್ಮಿಸಲು ಅರುಣ್ ಯೋಗಿರಾಜ್ ಅವರಿಗೆ ಸೂಚನೆ ನೀಡಿದ್ದು, ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಜೂನ್ 18ರಂದು ಮೈಸೂರಿನಿಂದ ಶಂಕರಾಚಾರ್ಯರ ಪ್ರತಿಮೆ ಹೊರಡಲಿದೆ.

ಓದಿ: 'ಅಮೆರಿಕ ಸ್ವಾತಂತ್ರ್ಯ ಪ್ರತಿಮೆಗಿಂತಲೂ ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲಿದೆ'

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿದ ಶಂಕರಾಚಾರ್ಯರ ಪ್ರತಿಮೆಯ ತಯಾರಾಗುತ್ತಿದೆ. ಉತ್ತರಾಖಂಡದ ಕೇದಾರನಾಥ ಕ್ಷೇತ್ರದಲ್ಲಿ ಅದ್ವೈತ ತತ್ವ ಪ್ರತಿಪಾದಕ ಶಂಕರಚಾರ್ಯರು ಐಕ್ಯವಾದ ಸ್ಥಳದಲ್ಲಿ 'ಶ್ರೀ ಶಂಕರಾಚಾರ್ಯರ ಅಧ್ಯಯನ ಪೀಠ ಮತ್ತು ಮ್ಯೂಸಿಯಂ' ಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಶಂಕರಾಚಾರ್ಯರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ದೇಶದಾದ್ಯಂತ ಹಲವು ಶಿಲ್ಪ ಕಲಾವಿದರನ್ನು ಆಹ್ವಾನಿಸಲಾಗಿತ್ತು.

ಅದರಲ್ಲಿ ಕರ್ನಾಟಕದ ನಾಲ್ಕು ಶಿಲ್ಪಿಗಳ ಹೆಸರನ್ನು ಸೂಚಿಸಲಾಗಿತ್ತು. ಅಂತಿಮವಾಗಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಂಕರಾಚಾರ್ಯ ಪ್ರತಿಮೆ ಮಾಡುವ ಅವಕಾಶ ಒದಗಿ ಬಂದಿದೆ. 2020ರ ಸೆಪ್ಟೆಂಬರ್​​ನಲ್ಲಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ 2 ಅಡಿ ಎತ್ತರದ ಶಂಕರಾಚಾರ್ಯ ಮೂರ್ತಿ ಮಾದರಿಯನ್ನು ಪ್ರಧಾನಿ ಮೋದಿ ಅವರಿಗೆ ನೋಡಲು ಕಳುಹಿಸಿದ್ದರು. ಇದನ್ನು ನೋಡಿದ ಮೋದಿ ಅವರು ಶಂಕರಾಚಾರ್ಯರ ಅವರ ಪ್ರತಿಮೆ ಮಾಡಲು ತಮ್ಮ ಇಲಾಖೆ ಮೂಲಕ ಅರುಣ್ ಯೋಗಿರಾಜ್ ಅವರಿಗೆ ಸೂಚನೆ ಕೊಟ್ಟಿದ್ದಾರೆ.

ಶಂಕರಾಚಾರ್ಯರ 12 ಅಡಿ ಎತ್ತರದ ಪ್ರತಿಮೆ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್

ಇಲಾಖೆ ಸೂಚನೆಯಂತೆ ಕಾರ್ಯಾ ಆರಂಭಿಸಿದ ಅರುಣ್ ಯೋಗಿರಾಜ್ ಅವರು ಸರಸ್ವತಿಪುರಂನಲ್ಲಿರುವ ಶಿಲ್ಪಗಳ ಕೆತ್ತನೆ ಸ್ಥಳದಲ್ಲಿ, 12 ಅಡಿ ಎತ್ತರದ ಶಂಕರಾಚಾರ್ಯರು ಕುಳಿತಿರುವ ಬಂಗಿಯಲ್ಲಿ ಪ್ರತಿಮೆ ಸಿದ್ಧಗೊಳ್ಳುತ್ತಿದ್ದು, ಅಂತಿಮ ಕಾರ್ಯಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಪ್ರತಿಮೆ ಮಾಡಲು ಹಾಸನದ ಬೇಲೂರು, ಹಳೇಬೀಡಿನ ಶಿಲ್ಪಕಲೆಗೆ ಬಳಸಿರುವ ಕೃಷ್ಣಶಿಲೆ ಕಲ್ಲನ್ನು ಬಳಸಲಾಗಿದೆ. ಮಳೆ, ಬಿಸಿಲು, ಬೆಂಕಿ ನೀರಿನಿಂದ ಯಾವುದೇ ಹಾನಿಯಾಗುವುದಿಲ್ಲ.‌

ಪ್ರಧಾನಿ ಮೋದಿಯವರು ಪ್ರತಿಮೆ ನಿರ್ಮಿಸಲು ಅರುಣ್ ಯೋಗಿರಾಜ್ ಅವರಿಗೆ ಸೂಚನೆ ನೀಡಿದ್ದು, ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಜೂನ್ 18ರಂದು ಮೈಸೂರಿನಿಂದ ಶಂಕರಾಚಾರ್ಯರ ಪ್ರತಿಮೆ ಹೊರಡಲಿದೆ.

ಓದಿ: 'ಅಮೆರಿಕ ಸ್ವಾತಂತ್ರ್ಯ ಪ್ರತಿಮೆಗಿಂತಲೂ ಏಕತಾ ಪ್ರತಿಮೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲಿದೆ'

Last Updated : Jun 16, 2021, 8:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.