ETV Bharat / state

ಗ್ರಾಮ ಪಂಚಾಯಿತಿ ಚುನಾವಣೆ: ಮೈಸೂರು ಕಾಂಗ್ರೆಸ್​ ಶಾಸಕರಿಂದ ಸಭೆ

author img

By

Published : Dec 5, 2020, 1:12 PM IST

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದು, ಇದೀಗ ಮೈಸೂರು ಶಾಸಕರು ಸಭೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ತೆಗೆದುಕೊಳ್ಳಬೇಕಾದ ಅಂಶಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ.

Mysuru MLAs gathered in wake of local body election
ಮೈಸೂರು ಕಾಂಗ್ರೆಸ್​ ಶಾಸಕರಿಂದ ಸಭೆ

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೈಸೂರಿನ ಕಾಂಗ್ರೆಸ್ ಶಾಸಕರು ಸಭೆ ನಡೆಸಿದರು. ಜಲದರ್ಶಿನಿ‌ ಸರ್ಕಾರಿ ಅತಿಥಿ ಗೃಹದಲ್ಲಿ ಮಾಜಿ‌‌ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ಎಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ‌ ಶಾಸಕ ಕಳಲೆ ಎನ್.ಕೇಶವಮೂರ್ತಿ ಹಾಗೂ ಪಕ್ಷದ ಮುಖಂಡರು ಸಭೆ ನಡೆಸಿದರು.

ಈಗಾಗಲೇ ಬಿಜೆಪಿ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿರುಸಿನ ಪ್ರಚಾರ ಆರಂಭಿಸಿದೆ. ಜೆಡಿಎಸ್ ಕೂಡ ಪ್ರಚಾರ ತಂತ್ರದಲ್ಲಿ ಮುನ್ನೆಲೆಗೆ ಬಂದಿದೆ. ಈ ನಡುವೆ ಜೆಡಿಎಸ್ ಹಾಗೂ ಬಿಜೆಪಿ ತಂತ್ರದ ವಿರುದ್ಧ ಪಕ್ಷವನ್ನು ಸಂಘಟಿಸಲು ಈ ಚುನಾವಣೆ ಪ್ರಮುಖವಾಗಿರುವುದರಿಂದ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೈಸೂರಿನ ಕಾಂಗ್ರೆಸ್ ಶಾಸಕರು ಸಭೆ ನಡೆಸಿದರು. ಜಲದರ್ಶಿನಿ‌ ಸರ್ಕಾರಿ ಅತಿಥಿ ಗೃಹದಲ್ಲಿ ಮಾಜಿ‌‌ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ಎಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ‌ ಶಾಸಕ ಕಳಲೆ ಎನ್.ಕೇಶವಮೂರ್ತಿ ಹಾಗೂ ಪಕ್ಷದ ಮುಖಂಡರು ಸಭೆ ನಡೆಸಿದರು.

ಈಗಾಗಲೇ ಬಿಜೆಪಿ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿರುಸಿನ ಪ್ರಚಾರ ಆರಂಭಿಸಿದೆ. ಜೆಡಿಎಸ್ ಕೂಡ ಪ್ರಚಾರ ತಂತ್ರದಲ್ಲಿ ಮುನ್ನೆಲೆಗೆ ಬಂದಿದೆ. ಈ ನಡುವೆ ಜೆಡಿಎಸ್ ಹಾಗೂ ಬಿಜೆಪಿ ತಂತ್ರದ ವಿರುದ್ಧ ಪಕ್ಷವನ್ನು ಸಂಘಟಿಸಲು ಈ ಚುನಾವಣೆ ಪ್ರಮುಖವಾಗಿರುವುದರಿಂದ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.