ETV Bharat / state

ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ: ಡಾ ಕೆ.ವಿ.ರಾಜೇಂದ್ರ ಸ್ಪಷ್ಟನೆ

author img

By

Published : Nov 30, 2022, 9:38 PM IST

ಯಾವುದೇ ಅರ್ಹ ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ. ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗಬೇಡಿ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಡಾ ಕೆ ವಿ ರಾಜೇಂದ್ರ ಸ್ಪಷ್ಟನೆ ನೀಡಿದರು.

Mysore District Collector Dr KV Rajendra
ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ

ಮೈಸೂರು: ಯಾವುದೇ ಅರ್ಹ ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ. ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಡಾ.ಕೆ.ವಿ.ರಾಜೇಂದ್ರ ಸ್ಪಷ್ಟನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಎಂಬುದು ನಿರಂತರವಾದ ಪ್ರಕ್ರಿಯೆ. ಬಿ.ಎಲ್.ಒ ಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸುತ್ತಾರೆ ಎಂದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೈಸೂರು ಜಿಲ್ಲೆಯಲ್ಲಿ ಕಾನೂನು ಬದ್ದವಾಗಿ ಪುನರಾವರ್ತನೆಗೊಂಡ ಪ್ರಕರಣಗಳಲ್ಲಿ ಮತದಾರರನ್ನು ಕೈಬಿಡುವ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ನಿಗದಿತ ನಮೂನೆ-7 ನ್ನು ಪಡೆದುಕೊಂಡ ನಂತರ ಸ್ಥಳ ಪರಿಶೀಲನೆಯ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ವರದಿಯ ನಂತರ ಮತದಾರರನ್ನು ಕೈಬಿಡಲಾಗಿದ್ದು, ಇದು ಪಾರದರ್ಶಕವಾಗಿದೆ.

ಈ ಬಾರಿ ಮತದಾರರ ಪಟ್ಟಿಯಲ್ಲಿ ಒಂದೇ ರೀತಿಯ ಭಾವಚಿತ್ರ ಹಾಗೂ ವಿವರಗಳನ್ನೊಳಗೊಂಡ ಮತದಾರರನ್ನು ಪರಿಶೀಲಿಸಿ ಕೈಬಿಡಲಾದ ಕಾರಣ ಹೆಚ್ಚಿನ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಮರಣ ಹೊಂದಿದವರು, ಸ್ಥಳಾಂತರ, ಪುನರಾವರ್ತನೆ, ಒಂದೇ ರೀತಿಯ ಭಾವಚಿತ್ರಗಳನ್ನು ಹೊಂದಿರುವ ಕಾರಣಗಳನ್ನು ಪರಿಶೀಲಿಸಲಾಗುತ್ತದೆ. ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮರಣ ಹೊಂದಿದ ಕಾರಣದಿಂದ, 20,440, ಮತದಾರರು ಸ್ಥಳಾಂತರ ಹೊಂದಿದ ಕಾರಣದಿಂದ 16,933, ಪುನರಾವರ್ತನೆ ಕಾರಣದಿಂದ 2227 ಹಾಗೂ ಒಂದೇ ರೀತಿಯ ಭಾವಚಿತ್ರ ಹೊಂದಿದ ಕಾರಣದಿಂದ 80,930 ಪ್ರಕರಣಗಳು ಸೇರಿದಂತೆ ಒಟ್ಟು 120786 ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದರು.

ರಾಜಕೀಯ ಪಕ್ಷಗಳ ಬೂತ್ ಲೆವೆಲ್ ಏಜೆಂಟ್‌ಗಳು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗಿದ್ದರೆ ಅಂತಹವರ ಮಾಹಿತಿಯನ್ನು ಬಿ.ಎಲ್.ಒ ಗಳಿಗೆ, ಎ.ಆರ್.ಒ ಗಳಿಗೆ, ತಹಶಿಲ್ದಾರರಿಗೆ ಹಾಗೂ ನನಗೂ ಸಹ ಮಾಹಿತಿ ನೀಡಬಹುದಾಗಿದೆ. ಉದ್ದೇಶಪೂರ್ವಕವಾಗಿ ಹೆಸರು ತೆಗೆದು ಹಾಕಿರುವುದು ಕಂಡು ಬಂದರೆ ತನಿಖೆ ನಡೆಸಿ ಕಾರಣವಾದಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತಮ್ಮ ಹೆಸರುಗಳು ಬೇರೆ ಬೂತ್‌ಗಳಿಗೆ ಬದಲಾವಣೆ ಆಗಿದ್ದರೆ ಪಾರಂ ನಂ 8 ರಲ್ಲಿ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ. ಯಾರದ್ದಾದರೂ ಹೆಸರು ಬಿಟ್ಟು ಹೋಗಿದ್ದರೆ ಪಾರಂ ನಂ 6 ರಲ್ಲಿ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಬಹುದಾಗಿದೆ. ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಇ.ವಿ.ಎಂ ಮಿಷನ್‌ಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕೇವಲ ಮೈಸೂರು ಜಿಲ್ಲೆಗೆ ಮಾತ್ರ ಇ.ವಿ.ಎಂ.ಮಷಿನ್‌ಗಳು ಬಂದಿಲ್ಲ. ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲಾ ಜಿಲ್ಲೆಗಳಿಗೂ ಹೊಸ ಇ.ವಿ.ಎಂ. ಮಷಿನ್‌ಗಳು ಸರಬರಾಜು ಆಗುತ್ತಿವೆ. ಅದೇ ರೀತಿ ಮೈಸೂರು ಜಿಲ್ಲೆಗೂ ಬಂದಿವೆ. ಅನಾವಶ್ಯಕ ಗೊಂದಲ ಬೇಡ. ಯಾವುದೇ ಗೊಂದಲಗಳಿದ್ದರೆ ಚುನಾವಣೆ ಶಾಖೆ, ಅಪರ ಜಿಲ್ಲಾಧಿಕಾರಿಗಳು ಅಥವಾ ನನ್ನನ್ನು ಯಾವುದೇ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ ಮಾತನಾಡಿ, ರಾಜ್ಯದಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಪೋಟೋ ಸಿಮಿಲರ್ ಎಂಟ್ರಿ ಇರುವ 1,73,943 ಪ್ರಕರಣಗಳಿದ್ದವು. ಇವುಗಳನ್ನು ಪರಿಶೀಲನೆ ಮಾಡಿ ಪೋಟೋ ಸಿಮಿಲರ್ ಎಂಟ್ರಿ ಕಾರಣದಿಂದ ಕರುಡು ಮತದಾರರ ಪಟ್ಟಿಯಿಂದ 80,930 ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಮಿಕಾಂತರೆಡ್ಡಿ, ಚುನಾವಣಾ ತಹಶೀಲ್ದಾರ್ ರಾಮ್ ಪ್ರಸಾದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:'ಮುಂದಿನ ಮುಖ್ಯಮಂತ್ರಿ' ಎಂದು ಬರೆದಿದ್ದ 75 ಕೆಜಿ ಕೇಕ್​​ ಕತ್ತರಿಸಿದ ಸಿದ್ದರಾಮಯ್ಯ

ಮೈಸೂರು: ಯಾವುದೇ ಅರ್ಹ ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ. ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಡಾ.ಕೆ.ವಿ.ರಾಜೇಂದ್ರ ಸ್ಪಷ್ಟನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಎಂಬುದು ನಿರಂತರವಾದ ಪ್ರಕ್ರಿಯೆ. ಬಿ.ಎಲ್.ಒ ಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸುತ್ತಾರೆ ಎಂದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೈಸೂರು ಜಿಲ್ಲೆಯಲ್ಲಿ ಕಾನೂನು ಬದ್ದವಾಗಿ ಪುನರಾವರ್ತನೆಗೊಂಡ ಪ್ರಕರಣಗಳಲ್ಲಿ ಮತದಾರರನ್ನು ಕೈಬಿಡುವ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ನಿಗದಿತ ನಮೂನೆ-7 ನ್ನು ಪಡೆದುಕೊಂಡ ನಂತರ ಸ್ಥಳ ಪರಿಶೀಲನೆಯ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ವರದಿಯ ನಂತರ ಮತದಾರರನ್ನು ಕೈಬಿಡಲಾಗಿದ್ದು, ಇದು ಪಾರದರ್ಶಕವಾಗಿದೆ.

ಈ ಬಾರಿ ಮತದಾರರ ಪಟ್ಟಿಯಲ್ಲಿ ಒಂದೇ ರೀತಿಯ ಭಾವಚಿತ್ರ ಹಾಗೂ ವಿವರಗಳನ್ನೊಳಗೊಂಡ ಮತದಾರರನ್ನು ಪರಿಶೀಲಿಸಿ ಕೈಬಿಡಲಾದ ಕಾರಣ ಹೆಚ್ಚಿನ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಮರಣ ಹೊಂದಿದವರು, ಸ್ಥಳಾಂತರ, ಪುನರಾವರ್ತನೆ, ಒಂದೇ ರೀತಿಯ ಭಾವಚಿತ್ರಗಳನ್ನು ಹೊಂದಿರುವ ಕಾರಣಗಳನ್ನು ಪರಿಶೀಲಿಸಲಾಗುತ್ತದೆ. ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮರಣ ಹೊಂದಿದ ಕಾರಣದಿಂದ, 20,440, ಮತದಾರರು ಸ್ಥಳಾಂತರ ಹೊಂದಿದ ಕಾರಣದಿಂದ 16,933, ಪುನರಾವರ್ತನೆ ಕಾರಣದಿಂದ 2227 ಹಾಗೂ ಒಂದೇ ರೀತಿಯ ಭಾವಚಿತ್ರ ಹೊಂದಿದ ಕಾರಣದಿಂದ 80,930 ಪ್ರಕರಣಗಳು ಸೇರಿದಂತೆ ಒಟ್ಟು 120786 ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದರು.

ರಾಜಕೀಯ ಪಕ್ಷಗಳ ಬೂತ್ ಲೆವೆಲ್ ಏಜೆಂಟ್‌ಗಳು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗಿದ್ದರೆ ಅಂತಹವರ ಮಾಹಿತಿಯನ್ನು ಬಿ.ಎಲ್.ಒ ಗಳಿಗೆ, ಎ.ಆರ್.ಒ ಗಳಿಗೆ, ತಹಶಿಲ್ದಾರರಿಗೆ ಹಾಗೂ ನನಗೂ ಸಹ ಮಾಹಿತಿ ನೀಡಬಹುದಾಗಿದೆ. ಉದ್ದೇಶಪೂರ್ವಕವಾಗಿ ಹೆಸರು ತೆಗೆದು ಹಾಕಿರುವುದು ಕಂಡು ಬಂದರೆ ತನಿಖೆ ನಡೆಸಿ ಕಾರಣವಾದಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತಮ್ಮ ಹೆಸರುಗಳು ಬೇರೆ ಬೂತ್‌ಗಳಿಗೆ ಬದಲಾವಣೆ ಆಗಿದ್ದರೆ ಪಾರಂ ನಂ 8 ರಲ್ಲಿ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ. ಯಾರದ್ದಾದರೂ ಹೆಸರು ಬಿಟ್ಟು ಹೋಗಿದ್ದರೆ ಪಾರಂ ನಂ 6 ರಲ್ಲಿ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಬಹುದಾಗಿದೆ. ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಇ.ವಿ.ಎಂ ಮಿಷನ್‌ಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕೇವಲ ಮೈಸೂರು ಜಿಲ್ಲೆಗೆ ಮಾತ್ರ ಇ.ವಿ.ಎಂ.ಮಷಿನ್‌ಗಳು ಬಂದಿಲ್ಲ. ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲಾ ಜಿಲ್ಲೆಗಳಿಗೂ ಹೊಸ ಇ.ವಿ.ಎಂ. ಮಷಿನ್‌ಗಳು ಸರಬರಾಜು ಆಗುತ್ತಿವೆ. ಅದೇ ರೀತಿ ಮೈಸೂರು ಜಿಲ್ಲೆಗೂ ಬಂದಿವೆ. ಅನಾವಶ್ಯಕ ಗೊಂದಲ ಬೇಡ. ಯಾವುದೇ ಗೊಂದಲಗಳಿದ್ದರೆ ಚುನಾವಣೆ ಶಾಖೆ, ಅಪರ ಜಿಲ್ಲಾಧಿಕಾರಿಗಳು ಅಥವಾ ನನ್ನನ್ನು ಯಾವುದೇ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ ಮಾತನಾಡಿ, ರಾಜ್ಯದಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಪೋಟೋ ಸಿಮಿಲರ್ ಎಂಟ್ರಿ ಇರುವ 1,73,943 ಪ್ರಕರಣಗಳಿದ್ದವು. ಇವುಗಳನ್ನು ಪರಿಶೀಲನೆ ಮಾಡಿ ಪೋಟೋ ಸಿಮಿಲರ್ ಎಂಟ್ರಿ ಕಾರಣದಿಂದ ಕರುಡು ಮತದಾರರ ಪಟ್ಟಿಯಿಂದ 80,930 ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಮಿಕಾಂತರೆಡ್ಡಿ, ಚುನಾವಣಾ ತಹಶೀಲ್ದಾರ್ ರಾಮ್ ಪ್ರಸಾದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:'ಮುಂದಿನ ಮುಖ್ಯಮಂತ್ರಿ' ಎಂದು ಬರೆದಿದ್ದ 75 ಕೆಜಿ ಕೇಕ್​​ ಕತ್ತರಿಸಿದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.