ETV Bharat / state

ಆಷಾಢ ಶುಕ್ರವಾರ ದಿನ ಚಾಮುಂಡಿಬೆಟ್ಟಕ್ಕೆ ನೋ ವೆಹಿಕಲ್.. ದೇವಸ್ಥಾನಕ್ಕೆ ಕೆಎಸ್​ಆರ್​ಟಿಸಿಯಿಂದ ಉಚಿತ ಬಸ್​ ವ್ಯವಸ್ಥೆ

author img

By

Published : Jun 21, 2023, 7:06 PM IST

Updated : Jun 21, 2023, 7:20 PM IST

ಭಕ್ತರ ವಾಹನಗಳ ಪಾರ್ಕಿಂಗ್​ಗೆ ಲಲಿತಮಹಲ್​ ಮೈದಾನದಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

Chamundi Hill Temple
ಚಾಮುಂಡಿ ಬೆಟ್ಟ ದೇವಸ್ಥಾನ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಜೂ.23 ರಿಂದ ಜುಲೈ 14 ರ ವರೆಗೆ ಆಷಾಢ ಶುಕ್ರವಾರ ದಿನಗಳಂದು ಹಾಗೂ ಜುಲೈ 10 ರ ವರ್ಧಂತಿ ದಿನದಂದು ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಸುಗಮ ಸಂಚಾರದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು. ಹಾಗೂ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಉಚಿತ ಕೆಎಸ್​ಆರ್​ಟಿಸಿ ಬಸ್‌ಗಳಲ್ಲಿ ದೇವಸ್ಥಾನಕ್ಕೆ ತೆರಳಬೇಕು ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಳಗಿನ ಜಾವ 3 ರಿಂದ ರಾತ್ರಿ 10ರ ವರೆಗೆ ಉಚಿತ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ. ಆಷಾಢ ಶುಕ್ರವಾರದ ದಿನಗಳಂದು ಮತ್ತು ವರ್ಧಂತಿ ದಿನದಂದು ತಾವರೆಕಟ್ಟೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್‌ವ್ಯಾಲಿ ರಸ್ತೆ ಮೂಲಕ ಚಾಮುಂಡಿಬೆಟ್ಟಕ್ಕೆ ಹೋಗುವ (ಶಿಷ್ಟಾಚಾರವಿರುವ ಗಣ್ಯರು ಮತ್ತು ಅತಿಗಣ್ಯರ ವಾಹನಗಳು ಮತ್ತು ಸಾರಿಗೆ ಸಂಸ್ಥೆಯ ವಾಹನಗಳನ್ನು ಹೊರತುಪಡಿಸಿ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ಸಂಚಾರ ಪೊಲೀಸರು ನೀಡುವ ಸೂಚನೆ ಅನುಸಾರ ಕ್ರಮಬದ್ಧವಾಗಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಪ್ರತ್ಯೇಕವಾಗಿ ನಿಲುಗಡೆ ಮಾಡಬೇಕು. ಲಲಿತಾದ್ರಿಪುರದ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ವಾಹನಗಳನ್ನು ಲಲಿತಾದ್ರಿಪುರದ ರಸ್ತೆ ಮೂಲಕ ಲಲಿತಮಹಲ್ ಮೈದಾನ ತಲುಪಿ ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು. ಉತ್ತನಹಳ್ಳಿ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ನಂಜನಗೂಡು ರಸ್ತೆ ಮೂಲಕ ಎಂ.ಎಲ್. ಸೋಮಸುಂದರಂ ವೃತ್ತ-ಮಹಾರಾಣಾ ಪ್ರತಾಪ ಸಿಂಹ ವೃತ್ತ -ಸಂಗೊಳ್ಳಿ ರಾಯಣ್ಣ ವೃತ್ತ -ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.

ವಾಹನಗಳನ್ನು ನಿಲುಗಡೆ ಮಾಡಿದ ಸ್ಥಳದಿಂದ ಚಾಮುಂಡಿಬೆಟ್ಟಕ್ಕೆ ಹೋಗಲು ಹಾಗೂ ಮತ್ತೆ ಹಿಂದಿರುಗಲು ನಗರ ಸಾರಿಗೆ ಬಸ್ಸುಗಳ ವ್ಯವಸ್ಥೆಯಿದೆ. ದೇವಸ್ಥಾನದಲ್ಲಿ ಉಚಿತ ಪ್ರಸಾದ ವಿನಿಯೋಗದ ವಾಹನಗಳಿಗೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ಬಸ್ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಿದ್ದು ಪ್ರಸಾದ ವಿನಿಯೋಗದ ವಾಹನಗಳಿಗೆ ಜಿಲ್ಲಾಡಳಿತದಿಂದ ನೀಡುವ ಪಾಸ್ ಕಡ್ಡಾಯವಾಗಿರುತ್ತದೆ. ಸದರಿ ವಾಹನಗಳು ನಿಗಧಿಪಡಿಸಿದ ಸಮಯದಲ್ಲಿಯೇ ಪ್ರಸಾದ ವಿನಿಯೋಗ ಮಾಡಬೇಕು. ಮುಂಚಿತವಾಗಿ ಅಥವಾ ತಡವಾಗಿ ಬಂದ ಪ್ರಸಾದ ವಿನಿಯೋಗದ ವಾಹನಗಳಿಗೆ ಪ್ರವೇಶ ನೀಡಲಾಗುವುದಿಲ್ಲ.

ದೇವಸ್ಥಾನಕ್ಕೆ ಆಗಮಿಸುವ ಶಿಷ್ಟಾಚಾರವಿರುವ ಗಣ್ಯ ಮತ್ತು ಅತಿಗಣ್ಯರ ವಾಹನಗಳಿಗೆ ಚಾಮುಂಡಿ ಬೆಟ್ಟದಲ್ಲಿ ಮಲ್ಟಿಲೆವಲ್ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಲ್ಟಿಲೆವಲ್ ಪಾರ್ಕಿಂಗ್ ಬಳಿಯಿಂದ ದೇವಸ್ಥಾನದವರೆಗೆ ಎಲ್ಲಾ ಮಾದರಿಯ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರತಿ ಆಷಾಢ ಶುಕ್ರವಾರದ ಹಿಂದಿನ ದಿನ ಅಂದರೆ ಗುರುವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದ ಹಿಂದಿನ ದಿನದ ರಾತ್ರಿ 10 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಮಾದರಿಯ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಚಾಮುಂಡಿ ಬೆಟ್ಟದಲ್ಲಿರುವ ನಿವಾಸಿಗಳು ತಮ್ಮ ವಾಹನಗಳ ಪ್ರವೇಶಕ್ಕೆ ಅಗತ್ಯ ದಾಖಲಾತಿಗಳಾದ ಡಿ.ಎಲ್, ವಾಹನದ ದಾಖಲಾತಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಗಳ ಜೆರಾಕ್ಸ್ ಪ್ರತಿಗಳನ್ನು ತಾವರೆಕಟ್ಟೆ ಪ್ರವೇಶ ದ್ವಾರದ ಬಳಿ ಪೊಲೀಸರಿಗೆ ತೋರಿಸಿ ಪ್ರವೇಶ ಪಡೆಯಬಹುದು. ಚಾಮುಂಡಿಬೆಟ್ಟಕ್ಕೆ ಕರ್ತವ್ಯದ ನಿಮಿತ್ತ ಆಗಮಿಸುವ ಸರ್ಕಾರಿ ವಾಹನಗಳು ಮತ್ತು ಪೊಲೀಸ್ ವಾಹನಗಳಿಗೆ ಚಾಮುಂಡಿಬೆಟ್ಟದ ಪಾರ್ಕಿಂಗ್-2 ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಿದ್ದು, ವಾಹನಗಳು ಕಡ್ಡಾಯವಾಗಿ ಸದರಿ ಸ್ಥಳದಲ್ಲಿಯೇ ನಿಲುಗಡೆ ಮಾಡುವುದು. ನಗರ ಬಸ್ ನಿಲ್ದಾಣದಿಂದ ಜನರನ್ನು ಕರೆತರುವ ಕೆಎಸ್​ಆರ್​ಟಿಸಿ ರೂಟ್ ಬಸ್ಸುಗಳು ಸಂಗೊಳ್ಳಿ ರಾಯಣ್ಣ ವೃತ್ತ- ಲಲಿತ ಮಹಲ್ ಹೆಲಿಪ್ಯಾಡ್ ವೈ ಜಂಕ್ಷನ್ ಬಳಿ ಬಲ ತಿರುವು ಪಡೆದು ನಂತರ ಲಲಿತಾದ್ರಿಪುರ ರಸ್ತೆಯಲ್ಲಿ ಐವಾಕ್ ರಸ್ತೆ ಮುಖಾಂತರ ಚಾಮುಂಡಿಬೆಟ್ಟಕ್ಕೆ ಹೋಗಬೇಕು.

ಬೆಟ್ಟದ ಪಾದದಿಂದ ಮೆಟ್ಟಿಲು ಮುಖಾಂತರ ದೇವಸ್ಥಾನಕ್ಕೆ ಕಾಲು ನಡಿಗೆಯಲ್ಲಿ ಹೋಗುವ ಭಕ್ತರು ವಾಹನಗಳನ್ನು ಪಿಂಜರಪೋಲ್ ಮುಂಭಾಗದಲ್ಲಿ ಇರುವ ಮೈದಾನದಲ್ಲಿ ಹಾಗೂ ಪೊಲೀಸರು ಸೂಚಿಸುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ದೇವಸ್ಥಾನಕ್ಕೆ ಹೋಗಬೇಕು. ದೇವಸ್ಥಾನದಲ್ಲಿ ಪ್ರತ್ಯೇಕ ಹೆಲ್ಪ್ ಡೆಸ್ಕ್, ವಿದ್ಯುತ್ ದೀಪಗಳ ವ್ಯವಸ್ಥೆ, ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿರುತ್ತದೆ. ಮತ್ತು ಲಲಿತ ಮಹಲ್ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಭದ್ರತಾ ವ್ಯವಸ್ಥೆ, ತಾತ್ಕಾಲಿಕ ಬಸ್ ನಿಲ್ದಾಣ, ಶೌಚಾಲಯ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಭಕ್ತರು ಯಾವುದೇ ಭೀತಿ ಇಲ್ಲದೇ ವಾಹನಗಳನ್ನು ನಿಲುಗಡೆಗೊಳಿಸಿ ದೇವರ ದರ್ಶನ ಪಡೆಯಬಹುದು ಎಂದು ನಗರದ ಪೊಲೀಸ್ ಆಯುಕ್ತ ರಮೇಶ್ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Chamundi hill: ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ ಆಚರಣೆ: ದೇವಸ್ಥಾನದ ಪ್ರಧಾನ ಆರ್ಚಕ ಶಶಿಧರ್ ದೀಕ್ಷಿತ್ ಹೇಳಿದ್ದೇನು..?

ಮೈಸೂರು: ಚಾಮುಂಡಿಬೆಟ್ಟದಲ್ಲಿ ಜೂ.23 ರಿಂದ ಜುಲೈ 14 ರ ವರೆಗೆ ಆಷಾಢ ಶುಕ್ರವಾರ ದಿನಗಳಂದು ಹಾಗೂ ಜುಲೈ 10 ರ ವರ್ಧಂತಿ ದಿನದಂದು ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಸುಗಮ ಸಂಚಾರದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು. ಹಾಗೂ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಉಚಿತ ಕೆಎಸ್​ಆರ್​ಟಿಸಿ ಬಸ್‌ಗಳಲ್ಲಿ ದೇವಸ್ಥಾನಕ್ಕೆ ತೆರಳಬೇಕು ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಳಗಿನ ಜಾವ 3 ರಿಂದ ರಾತ್ರಿ 10ರ ವರೆಗೆ ಉಚಿತ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ. ಆಷಾಢ ಶುಕ್ರವಾರದ ದಿನಗಳಂದು ಮತ್ತು ವರ್ಧಂತಿ ದಿನದಂದು ತಾವರೆಕಟ್ಟೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್‌ವ್ಯಾಲಿ ರಸ್ತೆ ಮೂಲಕ ಚಾಮುಂಡಿಬೆಟ್ಟಕ್ಕೆ ಹೋಗುವ (ಶಿಷ್ಟಾಚಾರವಿರುವ ಗಣ್ಯರು ಮತ್ತು ಅತಿಗಣ್ಯರ ವಾಹನಗಳು ಮತ್ತು ಸಾರಿಗೆ ಸಂಸ್ಥೆಯ ವಾಹನಗಳನ್ನು ಹೊರತುಪಡಿಸಿ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ಸಂಚಾರ ಪೊಲೀಸರು ನೀಡುವ ಸೂಚನೆ ಅನುಸಾರ ಕ್ರಮಬದ್ಧವಾಗಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಪ್ರತ್ಯೇಕವಾಗಿ ನಿಲುಗಡೆ ಮಾಡಬೇಕು. ಲಲಿತಾದ್ರಿಪುರದ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ವಾಹನಗಳನ್ನು ಲಲಿತಾದ್ರಿಪುರದ ರಸ್ತೆ ಮೂಲಕ ಲಲಿತಮಹಲ್ ಮೈದಾನ ತಲುಪಿ ಲಲಿತಮಹಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು. ಉತ್ತನಹಳ್ಳಿ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ನಂಜನಗೂಡು ರಸ್ತೆ ಮೂಲಕ ಎಂ.ಎಲ್. ಸೋಮಸುಂದರಂ ವೃತ್ತ-ಮಹಾರಾಣಾ ಪ್ರತಾಪ ಸಿಂಹ ವೃತ್ತ -ಸಂಗೊಳ್ಳಿ ರಾಯಣ್ಣ ವೃತ್ತ -ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.

ವಾಹನಗಳನ್ನು ನಿಲುಗಡೆ ಮಾಡಿದ ಸ್ಥಳದಿಂದ ಚಾಮುಂಡಿಬೆಟ್ಟಕ್ಕೆ ಹೋಗಲು ಹಾಗೂ ಮತ್ತೆ ಹಿಂದಿರುಗಲು ನಗರ ಸಾರಿಗೆ ಬಸ್ಸುಗಳ ವ್ಯವಸ್ಥೆಯಿದೆ. ದೇವಸ್ಥಾನದಲ್ಲಿ ಉಚಿತ ಪ್ರಸಾದ ವಿನಿಯೋಗದ ವಾಹನಗಳಿಗೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ಬಸ್ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಿದ್ದು ಪ್ರಸಾದ ವಿನಿಯೋಗದ ವಾಹನಗಳಿಗೆ ಜಿಲ್ಲಾಡಳಿತದಿಂದ ನೀಡುವ ಪಾಸ್ ಕಡ್ಡಾಯವಾಗಿರುತ್ತದೆ. ಸದರಿ ವಾಹನಗಳು ನಿಗಧಿಪಡಿಸಿದ ಸಮಯದಲ್ಲಿಯೇ ಪ್ರಸಾದ ವಿನಿಯೋಗ ಮಾಡಬೇಕು. ಮುಂಚಿತವಾಗಿ ಅಥವಾ ತಡವಾಗಿ ಬಂದ ಪ್ರಸಾದ ವಿನಿಯೋಗದ ವಾಹನಗಳಿಗೆ ಪ್ರವೇಶ ನೀಡಲಾಗುವುದಿಲ್ಲ.

ದೇವಸ್ಥಾನಕ್ಕೆ ಆಗಮಿಸುವ ಶಿಷ್ಟಾಚಾರವಿರುವ ಗಣ್ಯ ಮತ್ತು ಅತಿಗಣ್ಯರ ವಾಹನಗಳಿಗೆ ಚಾಮುಂಡಿ ಬೆಟ್ಟದಲ್ಲಿ ಮಲ್ಟಿಲೆವಲ್ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಲ್ಟಿಲೆವಲ್ ಪಾರ್ಕಿಂಗ್ ಬಳಿಯಿಂದ ದೇವಸ್ಥಾನದವರೆಗೆ ಎಲ್ಲಾ ಮಾದರಿಯ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರತಿ ಆಷಾಢ ಶುಕ್ರವಾರದ ಹಿಂದಿನ ದಿನ ಅಂದರೆ ಗುರುವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದ ಹಿಂದಿನ ದಿನದ ರಾತ್ರಿ 10 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಮಾದರಿಯ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಚಾಮುಂಡಿ ಬೆಟ್ಟದಲ್ಲಿರುವ ನಿವಾಸಿಗಳು ತಮ್ಮ ವಾಹನಗಳ ಪ್ರವೇಶಕ್ಕೆ ಅಗತ್ಯ ದಾಖಲಾತಿಗಳಾದ ಡಿ.ಎಲ್, ವಾಹನದ ದಾಖಲಾತಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಗಳ ಜೆರಾಕ್ಸ್ ಪ್ರತಿಗಳನ್ನು ತಾವರೆಕಟ್ಟೆ ಪ್ರವೇಶ ದ್ವಾರದ ಬಳಿ ಪೊಲೀಸರಿಗೆ ತೋರಿಸಿ ಪ್ರವೇಶ ಪಡೆಯಬಹುದು. ಚಾಮುಂಡಿಬೆಟ್ಟಕ್ಕೆ ಕರ್ತವ್ಯದ ನಿಮಿತ್ತ ಆಗಮಿಸುವ ಸರ್ಕಾರಿ ವಾಹನಗಳು ಮತ್ತು ಪೊಲೀಸ್ ವಾಹನಗಳಿಗೆ ಚಾಮುಂಡಿಬೆಟ್ಟದ ಪಾರ್ಕಿಂಗ್-2 ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಿದ್ದು, ವಾಹನಗಳು ಕಡ್ಡಾಯವಾಗಿ ಸದರಿ ಸ್ಥಳದಲ್ಲಿಯೇ ನಿಲುಗಡೆ ಮಾಡುವುದು. ನಗರ ಬಸ್ ನಿಲ್ದಾಣದಿಂದ ಜನರನ್ನು ಕರೆತರುವ ಕೆಎಸ್​ಆರ್​ಟಿಸಿ ರೂಟ್ ಬಸ್ಸುಗಳು ಸಂಗೊಳ್ಳಿ ರಾಯಣ್ಣ ವೃತ್ತ- ಲಲಿತ ಮಹಲ್ ಹೆಲಿಪ್ಯಾಡ್ ವೈ ಜಂಕ್ಷನ್ ಬಳಿ ಬಲ ತಿರುವು ಪಡೆದು ನಂತರ ಲಲಿತಾದ್ರಿಪುರ ರಸ್ತೆಯಲ್ಲಿ ಐವಾಕ್ ರಸ್ತೆ ಮುಖಾಂತರ ಚಾಮುಂಡಿಬೆಟ್ಟಕ್ಕೆ ಹೋಗಬೇಕು.

ಬೆಟ್ಟದ ಪಾದದಿಂದ ಮೆಟ್ಟಿಲು ಮುಖಾಂತರ ದೇವಸ್ಥಾನಕ್ಕೆ ಕಾಲು ನಡಿಗೆಯಲ್ಲಿ ಹೋಗುವ ಭಕ್ತರು ವಾಹನಗಳನ್ನು ಪಿಂಜರಪೋಲ್ ಮುಂಭಾಗದಲ್ಲಿ ಇರುವ ಮೈದಾನದಲ್ಲಿ ಹಾಗೂ ಪೊಲೀಸರು ಸೂಚಿಸುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ದೇವಸ್ಥಾನಕ್ಕೆ ಹೋಗಬೇಕು. ದೇವಸ್ಥಾನದಲ್ಲಿ ಪ್ರತ್ಯೇಕ ಹೆಲ್ಪ್ ಡೆಸ್ಕ್, ವಿದ್ಯುತ್ ದೀಪಗಳ ವ್ಯವಸ್ಥೆ, ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿರುತ್ತದೆ. ಮತ್ತು ಲಲಿತ ಮಹಲ್ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಭದ್ರತಾ ವ್ಯವಸ್ಥೆ, ತಾತ್ಕಾಲಿಕ ಬಸ್ ನಿಲ್ದಾಣ, ಶೌಚಾಲಯ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಭಕ್ತರು ಯಾವುದೇ ಭೀತಿ ಇಲ್ಲದೇ ವಾಹನಗಳನ್ನು ನಿಲುಗಡೆಗೊಳಿಸಿ ದೇವರ ದರ್ಶನ ಪಡೆಯಬಹುದು ಎಂದು ನಗರದ ಪೊಲೀಸ್ ಆಯುಕ್ತ ರಮೇಶ್ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Chamundi hill: ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ ಆಚರಣೆ: ದೇವಸ್ಥಾನದ ಪ್ರಧಾನ ಆರ್ಚಕ ಶಶಿಧರ್ ದೀಕ್ಷಿತ್ ಹೇಳಿದ್ದೇನು..?

Last Updated : Jun 21, 2023, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.