ETV Bharat / state

ಮೈಸೂರು ದಸರಾ ದೀಪಾಲಂಕಾರ ಅವಧಿ ವಿಸ್ತರಣೆ: ಹಲವು ರಸ್ತೆಗಳಲ್ಲಿ ಏಕಮುಖ ಸಂಚಾರ

author img

By ETV Bharat Karnataka Team

Published : Oct 26, 2023, 10:14 PM IST

ದಸರಾ ಮಹೋತ್ಸವ ದೀಪಾಲಂಕಾರವನ್ನು ನ.4 ರವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಏಕಮುಖ ವಾಹನ ಸಂಚಾರ ಹಾಗೂ ಕೆಲವೆಡೆ ಸಂಚಾರ ನಿಷೇಧಿಸಲಾಗಿದೆ.

ಮೈಸೂರು ದೀಪಾಲಂಕಾರ
ಮೈಸೂರು ದೀಪಾಲಂಕಾರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರ ಅವಧಿಯನ್ನು ನ.4 ರವರೆಗೆ ವಿಸ್ತರಿಸಲಾಗಿದೆ. ಅ. 25 ರಿಂದ ನ. 4 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿ ವಾಹನ ಸಂಚಾರದಟ್ಟನೆ ಅಧಿಕವಾಗುವುದರಿಂದ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ: ( ಆ್ಯಂಟಿ ಕ್ಲಾಕ್‌ವೈಸ್) ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್) - ಕುಸ್ತಿ ಅಖಾಡ ಜಂಕ್ಷನ್​- ಬಿ.ಎನ್.ರಸ್ತೆ - ಜಯಚಾಮರಾಜ ಒಡೆಯರ್​ ವೃತ್ತ (ಹಾರ್ಡಿಂಜ್ ವೃತ್ತ)- ಆಲ್ಬರ್ಟ್ ವಿಕ್ಟರ್ ರಸ್ತೆ - ಚಾಮರಾಜ ಒಡೆಯರ್​ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ) - ಕೆ.ಆರ್​.ವೃತ್ತ ನ್ಯೂ ಸಯ್ಯಾಜಿರಾವ್ ರಸ್ತೆ ಕಾರ್ಪೋರೇಷನ್ ವೃತ್ತ- ಬಸವೇಶ್ವರ ವೃತ್ತ- ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್), (ಪುರಂದರ ರಸ್ತೆಯನ್ನು ಒಳಗೊಂಡಂತೆ) ಈ ರಸ್ತೆಗಳಲ್ಲಿ ಅರಮನೆಯನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಈ ರಸ್ತೆಗಳಲ್ಲಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. (ಬಸವೇಶ್ವರ ವೃತ್ತದಿಂದ ಪೂರ್ವಕ್ಕೆ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದ ವರೆಗಿನ ರಸ್ತೆ ಹೊರತುಪಡಿಸಿ)

ಕೆ.ಆರ್​.ವೃತ್ತ-ಆಯುರ್ವೇದಿಕ್ ವೃತ್ತ-ನೆಹರು ವೃತ್ತ ಚಾಮರಾಜ ಒಡೆಯರ್​ ವೃತ್ತ - ಕೆ.ಆರ್​. ವೃತ್ತ- ನ್ಯೂ ಸಯ್ಯಾಜಿರಾವ್ ರಸ್ತೆ- ಬಾಬಾ ಜಂಕ್ಷನ್ -ಆಯುರ್ವೇದಿಕ್ ವೃತ್ತ - ಇಶ್ವಿನ್ ರಸ್ತೆ ನೆಹರು ವೃತ್ತ ಅಶೋಕ ರಸ್ತೆ - ಮಹಾವೀರ ವೃತ್ತ ಚಾಮರಾಜ ಒಡೆಯರ್​ ವೃತ್ತ - ಕೆ.ಆರ್​.ವೃತ್ತ ಈ ರಸ್ತೆಗಳ ಮಧ್ಯೆ ಇರುವ ಪ್ರದೇಶವನ್ನು ಮಧ್ಯಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಗಡಿಯಾರದ ಮುಳ್ಳು ಸುತ್ತುವ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ.

ಅಶೋಕ ರಸ್ತೆ-ದಾವೂದ್ಖಾನ್ ರಸ್ತೆ ಜಂಕ್ಷನ್​ನಿಂದ ನೆಹರು ವೃತ್ತದವರೆಗೆ: ಅಶೋಕ ರಸ್ತೆಯಲ್ಲಿ ದಾವೂದ್ಖಾನ್ ರಸ್ತೆ ಜಂಕ್ಷನ್‌ನಿಂದ (ಗಾಂಧಿ ಮೆಡಿಕಲ್ಸ್) ನೆಹರು ಸರ್ಕಲ್​ವರೆಗೆ ದಕ್ಷಿಣಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. - ಅಶೋಕ ರಸ್ತೆಯಲ್ಲಿ ನೆಹರು ಸರ್ಕಲ್​ನಿಂದ ದಾವೂದ್ಖಾನ್ ರಸ್ತೆ ಜಂಕ್ಷನ್​ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಮೈಸೂರು ದೀಪಾಲಂಕಾರ
ಮೈಸೂರು ದೀಪಾಲಂಕಾರ

ಬನುಮಯ್ಯ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆ ಜಂಕ್ಷನ್​ನಿಂದ ಬನುಮಯ್ಯ ಚೌಕದವರೆಗೆ: ಚಾಮರಾಜ ಜೋಡಿ ರಸ್ತೆಯಿಂದ ಬನುಮಯ್ಯ ಚೌಕದವರೆಗೆ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬನುಮಯ್ಯ ಚೌಕದಿಂದ ಚಾಮರಾಜ ಜೋಡಿ ರಸ್ತೆವರೆಗೆ ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆ ಜಂಕ್ಷನ್​ವರೆಗೆ: ಎನ್.ಮಾಧವರಾವ್​ವೃತ್ತದಿಂದ (ಅಗ್ರಹಾರ ವೃತ್ತ) ಉತ್ತರಕ್ಕೆ ತ್ಯಾಗರಾಜ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆಯವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಚಾಮರಾಜ ಜೋಡಿ ರಸ್ತೆಯಿಂದ ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತದವರೆಗೆ (ಅಗ್ರಹಾರ ವೃತ್ತ) ದಕ್ಷಿಣಕ್ಕೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಲೋಕರಂಜನ್ ರಸ್ತೆಯಲ್ಲಿ ಎಸ್.ಅಂಗಣ್ಣ ವೃತ್ತದಿಂದ ಪೂರ್ವಕ್ಕೆ ಸರ್ಕಸ್ ಮೈದಾನದ ಜಂಕ್ಷನ್‌ವರೆಗೆ: ಸರ್ಕಸ್​ ಮೈದಾನದ ಜಂಕ್ಷನ್​ನಿಂದ ಪೂರ್ವದಿಂದ ಪಶ್ಚಿಮಕ್ಕೆ ಜಯಚಾಮರಾಜ ಒಡೆಯರ್​ ವೃತ್ತದವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎಸ್.ಅಂಗಣ್ಣ ವೃತ್ತದಿಂದ (ಚಿರಾಗ್ ಜಂಕ್ಷನ್) ಪೂರ್ವಕ್ಕೆ ಸರ್ಕಸ್ ಮೈದಾನದವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ ಅಶೋಕ ರಸ್ತೆ ಜಂಕ್ಷನ್​ವರೆಗೆ: ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ ಅಶೋಕ ರಸ್ತೆ ಜಂಕ್ಷನ್​ವೆರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ದಿನಾಂಕ 25.10.2023 ರಿಂದ 04.11.2023 ರವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಲಿಕವಾಗಿ ರದ್ದುಗೊಳಿಸಿ, ಅಶೋಕ ರಸ್ತೆಯಿಂದ ಬಿ.ಎನ್.ರಸ್ತೆ ಜಂಕ್ಷನ್‌ವರೆಗೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮೃಗಾಲಯ ರಸ್ತೆಯಲ್ಲಿ ಎಸ್.ಲಿಂಗಣ್ಣ ವೃತ್ತದಿಂದ ಎ.ಕೆ.ಇರಾನಿ ವೃತ್ತದವರೆಗೆ: ಎಸ್.ಅಂಗಣ್ಣ ವೃತ್ತದಿಂದ ಎ.ಕೆ.ಇರಾನಿ ವೃತ್ತದವರೆಗೆ (ಮಿರ್ಜಾ ವೃತ್ತ) ದಕ್ಷಿಣದಿಂದ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಿರುತ್ತದೆ. ಎ.ಕೆ.ಇರಾನಿ ವೃತ್ತದಿಂದ (ಮಿರ್ಜಾ ವೃತ್ತ)ಎಸ್.ಅಂಗಣ್ಣ ವೃತ್ತದವರೆಗೆ (ಚಿರಾಗ್ ಜಂಕ್ಷನ್) ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವಾಹನ ನಿಲುಗಡೆ ನಿಷೇಧಿತ ಪ್ರದೇಶಗಳು: ಮೈಸೂರು ಅರಮನೆಯ ಸುತ್ತಲಿನ ರಸ್ತೆಗಳಾದ ಬಿ.ಎನ್.ರಸ್ತೆ, ಎ.ವಿ.ರಸ್ತೆ, ಸಯ್ಯಾಜಿರಾವ್ ರಸ್ತೆ, ಪುರಂದರ ರಸ್ತೆಗಳಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ, ರಮಾವಿಲಾಸ ರಸ್ತೆಯಲ್ಲಿ ಮೂಡಾ ಜಂಕ್ಷನ್​ನಿಂದ ಬನುಮಯ್ಯ ಕಾಲೇಜು ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ (ಕೆಎಸ್ಆರ್​ಟಿಸಿ) ಸಾರಿಗೆ ಬಸ್​ಗಳನ್ನು ಹೊರತುಪಡಿಸಿ) ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಸಯ್ಯಾಜಿರಾವ್ ರಸ್ತೆಯಲ್ಲಿ ಬಸವೇಶ್ವರ ವೃತ್ತದಿಂದ ಅಗ್ರಹಾರ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಎಂ.ಜಿ ರಸ್ತೆಯಲ್ಲಿ ಅಗ್ರಹಾರ ವೃತ್ತದಿಂದ ಸಿದ್ದಪ್ಪ ಚೌಕದವರೆಗೆ ರಸ್ತೆಯ ಎಡ ಬದಿಯಲ್ಲಿ, ಎಂ.ಜಿ ರಸ್ತೆಯಲ್ಲಿ ಅಗ್ರಹಾರ ವೃತ್ತದಿಂದ ಹಳೆ ಜೆ.ಎಸ್.ಎಸ್ ಆಸ್ಪತ್ರೆ ಜಂಕ್ಷನ್​ವರೆಗೆ ರಸ್ತೆಯ ಎಡ ಬದಿಗಳಲ್ಲಿ, ಜೆ.ಎಲ್.ಬಿ ರಸ್ತೆಯಲ್ಲಿ ಶ್ರೀನಿವಾಸ ವೃತ್ತದಿಂದ ಎಲೆ ತೋಟ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ರಾಮಸ್ವಾಮಿ ವೃತ್ತದಿಂದ ಸರಸ್ವತಿಪುರಂ ಅಗ್ನಿಶಾಮಕ ಠಾಣೆ ಜಂಕ್ಷನ್​ವೆರೆಗಿನ ರಸ್ತೆಯ ಎರಡೂ ಬದಿಗಳಲ್ಲಿ, ಅಶೋಕ ರಸ್ತೆಯಲ್ಲಿ ಮಿಲಾದ್ ಪಾರ್ಕ್ ಜಂಕ್ಷನ್​ನಿಂದ ಹರ್ಷ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಗಾಂಧಿ ಚೌಕದ ಸುತ್ತಲಿನಲ್ಲಿ ರಸ್ತೆ ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಓಲ್ಡ್ ಬ್ಯಾಂಕ್ ರಸ್ತೆಯಲ್ಲಿ ಗಾಂಧಿ ಚೌಕದಿಂದ ಸಯ್ಯಾಜಿರಾವ್ ರಸ್ತೆ ಜಂಕ್ಷನ್‌ವ​ರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಚಂದ್ರಗುಪ್ತ ರಸ್ತೆಯಲ್ಲಿ ಅಶೋಕ ರಸ್ತೆ ಜಂಕ್ಷನ್​ನಿಂದ ಬಿ.ಎನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ನೆಹರು ವೃತ್ತದಿಂದ ನೇಮಿನಾಥ ಸ್ಟೀಲ್ ಜಂಕ್ಷನ್‌ವರೆಗೆ (ಮಿನಿ ವಿಧಾನಸೌಧ ರಸ್ತೆ) ರಸ್ತೆಯ ಎರಡೂ ಬದಿಗಳಲ್ಲಿ, ಬಿ.ಎನ್ ರಸ್ತೆಯಲ್ಲಿ ಹೈದರಾಲಿ ಖಾನ್ ವೃತ್ತದಿಂದ (ಪ್ರೈವೆಟ್​ ಸರ್ಕಲ್) ಸೆಂಟ್ರಲ್ ಮಾಲ್ (ಛತ್ರಿ ಮರ) ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಸರ್ಕಾರಿ ಭವನದ ರಸ್ತೆಯಲ್ಲಿ ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್​ನಿಂದ ದಕ್ಷಿಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ (ಹಾರ್ಡಿಂಜ್ ವೃತ್ತ) ರಸ್ತೆಯ ಎರಡೂ ಬದಿಗಳಲ್ಲಿ, ಲೋಕರಂಜನ್ ರಸ್ತೆಯಲ್ಲಿ ಸರ್ಕಸ್ ಗ್ರೌಂಡ್ ಜಂಕ್ಷನ್​ನಿಂದ ಜಯಚಾಮರಾಜೇಂದ್ರ ಒಡೆಯರ್​ ವೃತ್ತದವರೆಗೆ (ಹಾರ್ಡಿಂಜ್ ವೃತ್ತ) ರಸ್ತೆಯ ಎರಡೂ ಬದಿಗಳಲ್ಲಿ, ಹರಿಕೃಷ್ಣ ವೃತ್ತದಿಂದ (ಡಿ.ಪಿ.ಓ) ಹಳೆ ಬಿ.ಜೆ.ಪಿ.ಕಛೇರಿ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ವಸ್ತು ಪ್ರದರ್ಶನ ಮೈದಾನದ ಮೇನ್ ಗೇಟ್ ಜಂಕ್ಷನ್​ನಿಂದ ಮೃಗಾಲಯ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇಟ್ಟಿಗೆ ಗೂಡಿನ 5ನೇ ಕ್ರಾಸ್ ರಸ್ತೆಯಲ್ಲಿ ಮೃಗಾಲಯದ ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರದರ್ಶನ ಮೈದಾನದ ಪೂರ್ವ ದ್ವಾರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಾನಸ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್​ನಿಂದ ಲೋಕರಂಜನ್ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಲೆಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ (ಛತ್ರಿ ಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಸರಾ ದಿನಗಳಲ್ಲಿ ಮೈಸೂರು ಅರಮನೆ, ಮೃಗಾಲಯಕ್ಕೆ ಲಕ್ಷಾಂತರ ಪ್ರವಾಸಿಗರ ಭೇಟಿ, ಆದಾಯ ಹೆಚ್ಚಳ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರ ಅವಧಿಯನ್ನು ನ.4 ರವರೆಗೆ ವಿಸ್ತರಿಸಲಾಗಿದೆ. ಅ. 25 ರಿಂದ ನ. 4 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿ ವಾಹನ ಸಂಚಾರದಟ್ಟನೆ ಅಧಿಕವಾಗುವುದರಿಂದ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ: ( ಆ್ಯಂಟಿ ಕ್ಲಾಕ್‌ವೈಸ್) ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್) - ಕುಸ್ತಿ ಅಖಾಡ ಜಂಕ್ಷನ್​- ಬಿ.ಎನ್.ರಸ್ತೆ - ಜಯಚಾಮರಾಜ ಒಡೆಯರ್​ ವೃತ್ತ (ಹಾರ್ಡಿಂಜ್ ವೃತ್ತ)- ಆಲ್ಬರ್ಟ್ ವಿಕ್ಟರ್ ರಸ್ತೆ - ಚಾಮರಾಜ ಒಡೆಯರ್​ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ) - ಕೆ.ಆರ್​.ವೃತ್ತ ನ್ಯೂ ಸಯ್ಯಾಜಿರಾವ್ ರಸ್ತೆ ಕಾರ್ಪೋರೇಷನ್ ವೃತ್ತ- ಬಸವೇಶ್ವರ ವೃತ್ತ- ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್), (ಪುರಂದರ ರಸ್ತೆಯನ್ನು ಒಳಗೊಂಡಂತೆ) ಈ ರಸ್ತೆಗಳಲ್ಲಿ ಅರಮನೆಯನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಈ ರಸ್ತೆಗಳಲ್ಲಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. (ಬಸವೇಶ್ವರ ವೃತ್ತದಿಂದ ಪೂರ್ವಕ್ಕೆ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದ ವರೆಗಿನ ರಸ್ತೆ ಹೊರತುಪಡಿಸಿ)

ಕೆ.ಆರ್​.ವೃತ್ತ-ಆಯುರ್ವೇದಿಕ್ ವೃತ್ತ-ನೆಹರು ವೃತ್ತ ಚಾಮರಾಜ ಒಡೆಯರ್​ ವೃತ್ತ - ಕೆ.ಆರ್​. ವೃತ್ತ- ನ್ಯೂ ಸಯ್ಯಾಜಿರಾವ್ ರಸ್ತೆ- ಬಾಬಾ ಜಂಕ್ಷನ್ -ಆಯುರ್ವೇದಿಕ್ ವೃತ್ತ - ಇಶ್ವಿನ್ ರಸ್ತೆ ನೆಹರು ವೃತ್ತ ಅಶೋಕ ರಸ್ತೆ - ಮಹಾವೀರ ವೃತ್ತ ಚಾಮರಾಜ ಒಡೆಯರ್​ ವೃತ್ತ - ಕೆ.ಆರ್​.ವೃತ್ತ ಈ ರಸ್ತೆಗಳ ಮಧ್ಯೆ ಇರುವ ಪ್ರದೇಶವನ್ನು ಮಧ್ಯಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಗಡಿಯಾರದ ಮುಳ್ಳು ಸುತ್ತುವ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ.

ಅಶೋಕ ರಸ್ತೆ-ದಾವೂದ್ಖಾನ್ ರಸ್ತೆ ಜಂಕ್ಷನ್​ನಿಂದ ನೆಹರು ವೃತ್ತದವರೆಗೆ: ಅಶೋಕ ರಸ್ತೆಯಲ್ಲಿ ದಾವೂದ್ಖಾನ್ ರಸ್ತೆ ಜಂಕ್ಷನ್‌ನಿಂದ (ಗಾಂಧಿ ಮೆಡಿಕಲ್ಸ್) ನೆಹರು ಸರ್ಕಲ್​ವರೆಗೆ ದಕ್ಷಿಣಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. - ಅಶೋಕ ರಸ್ತೆಯಲ್ಲಿ ನೆಹರು ಸರ್ಕಲ್​ನಿಂದ ದಾವೂದ್ಖಾನ್ ರಸ್ತೆ ಜಂಕ್ಷನ್​ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಮೈಸೂರು ದೀಪಾಲಂಕಾರ
ಮೈಸೂರು ದೀಪಾಲಂಕಾರ

ಬನುಮಯ್ಯ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆ ಜಂಕ್ಷನ್​ನಿಂದ ಬನುಮಯ್ಯ ಚೌಕದವರೆಗೆ: ಚಾಮರಾಜ ಜೋಡಿ ರಸ್ತೆಯಿಂದ ಬನುಮಯ್ಯ ಚೌಕದವರೆಗೆ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬನುಮಯ್ಯ ಚೌಕದಿಂದ ಚಾಮರಾಜ ಜೋಡಿ ರಸ್ತೆವರೆಗೆ ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆ ಜಂಕ್ಷನ್​ವರೆಗೆ: ಎನ್.ಮಾಧವರಾವ್​ವೃತ್ತದಿಂದ (ಅಗ್ರಹಾರ ವೃತ್ತ) ಉತ್ತರಕ್ಕೆ ತ್ಯಾಗರಾಜ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆಯವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಚಾಮರಾಜ ಜೋಡಿ ರಸ್ತೆಯಿಂದ ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತದವರೆಗೆ (ಅಗ್ರಹಾರ ವೃತ್ತ) ದಕ್ಷಿಣಕ್ಕೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಲೋಕರಂಜನ್ ರಸ್ತೆಯಲ್ಲಿ ಎಸ್.ಅಂಗಣ್ಣ ವೃತ್ತದಿಂದ ಪೂರ್ವಕ್ಕೆ ಸರ್ಕಸ್ ಮೈದಾನದ ಜಂಕ್ಷನ್‌ವರೆಗೆ: ಸರ್ಕಸ್​ ಮೈದಾನದ ಜಂಕ್ಷನ್​ನಿಂದ ಪೂರ್ವದಿಂದ ಪಶ್ಚಿಮಕ್ಕೆ ಜಯಚಾಮರಾಜ ಒಡೆಯರ್​ ವೃತ್ತದವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎಸ್.ಅಂಗಣ್ಣ ವೃತ್ತದಿಂದ (ಚಿರಾಗ್ ಜಂಕ್ಷನ್) ಪೂರ್ವಕ್ಕೆ ಸರ್ಕಸ್ ಮೈದಾನದವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ ಅಶೋಕ ರಸ್ತೆ ಜಂಕ್ಷನ್​ವರೆಗೆ: ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ ಅಶೋಕ ರಸ್ತೆ ಜಂಕ್ಷನ್​ವೆರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ದಿನಾಂಕ 25.10.2023 ರಿಂದ 04.11.2023 ರವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಲಿಕವಾಗಿ ರದ್ದುಗೊಳಿಸಿ, ಅಶೋಕ ರಸ್ತೆಯಿಂದ ಬಿ.ಎನ್.ರಸ್ತೆ ಜಂಕ್ಷನ್‌ವರೆಗೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮೃಗಾಲಯ ರಸ್ತೆಯಲ್ಲಿ ಎಸ್.ಲಿಂಗಣ್ಣ ವೃತ್ತದಿಂದ ಎ.ಕೆ.ಇರಾನಿ ವೃತ್ತದವರೆಗೆ: ಎಸ್.ಅಂಗಣ್ಣ ವೃತ್ತದಿಂದ ಎ.ಕೆ.ಇರಾನಿ ವೃತ್ತದವರೆಗೆ (ಮಿರ್ಜಾ ವೃತ್ತ) ದಕ್ಷಿಣದಿಂದ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಿರುತ್ತದೆ. ಎ.ಕೆ.ಇರಾನಿ ವೃತ್ತದಿಂದ (ಮಿರ್ಜಾ ವೃತ್ತ)ಎಸ್.ಅಂಗಣ್ಣ ವೃತ್ತದವರೆಗೆ (ಚಿರಾಗ್ ಜಂಕ್ಷನ್) ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವಾಹನ ನಿಲುಗಡೆ ನಿಷೇಧಿತ ಪ್ರದೇಶಗಳು: ಮೈಸೂರು ಅರಮನೆಯ ಸುತ್ತಲಿನ ರಸ್ತೆಗಳಾದ ಬಿ.ಎನ್.ರಸ್ತೆ, ಎ.ವಿ.ರಸ್ತೆ, ಸಯ್ಯಾಜಿರಾವ್ ರಸ್ತೆ, ಪುರಂದರ ರಸ್ತೆಗಳಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ, ರಮಾವಿಲಾಸ ರಸ್ತೆಯಲ್ಲಿ ಮೂಡಾ ಜಂಕ್ಷನ್​ನಿಂದ ಬನುಮಯ್ಯ ಕಾಲೇಜು ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ (ಕೆಎಸ್ಆರ್​ಟಿಸಿ) ಸಾರಿಗೆ ಬಸ್​ಗಳನ್ನು ಹೊರತುಪಡಿಸಿ) ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಸಯ್ಯಾಜಿರಾವ್ ರಸ್ತೆಯಲ್ಲಿ ಬಸವೇಶ್ವರ ವೃತ್ತದಿಂದ ಅಗ್ರಹಾರ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಎಂ.ಜಿ ರಸ್ತೆಯಲ್ಲಿ ಅಗ್ರಹಾರ ವೃತ್ತದಿಂದ ಸಿದ್ದಪ್ಪ ಚೌಕದವರೆಗೆ ರಸ್ತೆಯ ಎಡ ಬದಿಯಲ್ಲಿ, ಎಂ.ಜಿ ರಸ್ತೆಯಲ್ಲಿ ಅಗ್ರಹಾರ ವೃತ್ತದಿಂದ ಹಳೆ ಜೆ.ಎಸ್.ಎಸ್ ಆಸ್ಪತ್ರೆ ಜಂಕ್ಷನ್​ವರೆಗೆ ರಸ್ತೆಯ ಎಡ ಬದಿಗಳಲ್ಲಿ, ಜೆ.ಎಲ್.ಬಿ ರಸ್ತೆಯಲ್ಲಿ ಶ್ರೀನಿವಾಸ ವೃತ್ತದಿಂದ ಎಲೆ ತೋಟ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ರಾಮಸ್ವಾಮಿ ವೃತ್ತದಿಂದ ಸರಸ್ವತಿಪುರಂ ಅಗ್ನಿಶಾಮಕ ಠಾಣೆ ಜಂಕ್ಷನ್​ವೆರೆಗಿನ ರಸ್ತೆಯ ಎರಡೂ ಬದಿಗಳಲ್ಲಿ, ಅಶೋಕ ರಸ್ತೆಯಲ್ಲಿ ಮಿಲಾದ್ ಪಾರ್ಕ್ ಜಂಕ್ಷನ್​ನಿಂದ ಹರ್ಷ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಗಾಂಧಿ ಚೌಕದ ಸುತ್ತಲಿನಲ್ಲಿ ರಸ್ತೆ ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಓಲ್ಡ್ ಬ್ಯಾಂಕ್ ರಸ್ತೆಯಲ್ಲಿ ಗಾಂಧಿ ಚೌಕದಿಂದ ಸಯ್ಯಾಜಿರಾವ್ ರಸ್ತೆ ಜಂಕ್ಷನ್‌ವ​ರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಚಂದ್ರಗುಪ್ತ ರಸ್ತೆಯಲ್ಲಿ ಅಶೋಕ ರಸ್ತೆ ಜಂಕ್ಷನ್​ನಿಂದ ಬಿ.ಎನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ನೆಹರು ವೃತ್ತದಿಂದ ನೇಮಿನಾಥ ಸ್ಟೀಲ್ ಜಂಕ್ಷನ್‌ವರೆಗೆ (ಮಿನಿ ವಿಧಾನಸೌಧ ರಸ್ತೆ) ರಸ್ತೆಯ ಎರಡೂ ಬದಿಗಳಲ್ಲಿ, ಬಿ.ಎನ್ ರಸ್ತೆಯಲ್ಲಿ ಹೈದರಾಲಿ ಖಾನ್ ವೃತ್ತದಿಂದ (ಪ್ರೈವೆಟ್​ ಸರ್ಕಲ್) ಸೆಂಟ್ರಲ್ ಮಾಲ್ (ಛತ್ರಿ ಮರ) ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಸರ್ಕಾರಿ ಭವನದ ರಸ್ತೆಯಲ್ಲಿ ಸರ್ಕಾರಿ ಭವನದ ದಕ್ಷಿಣ ದ್ವಾರದ ಜಂಕ್ಷನ್​ನಿಂದ ದಕ್ಷಿಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ (ಹಾರ್ಡಿಂಜ್ ವೃತ್ತ) ರಸ್ತೆಯ ಎರಡೂ ಬದಿಗಳಲ್ಲಿ, ಲೋಕರಂಜನ್ ರಸ್ತೆಯಲ್ಲಿ ಸರ್ಕಸ್ ಗ್ರೌಂಡ್ ಜಂಕ್ಷನ್​ನಿಂದ ಜಯಚಾಮರಾಜೇಂದ್ರ ಒಡೆಯರ್​ ವೃತ್ತದವರೆಗೆ (ಹಾರ್ಡಿಂಜ್ ವೃತ್ತ) ರಸ್ತೆಯ ಎರಡೂ ಬದಿಗಳಲ್ಲಿ, ಹರಿಕೃಷ್ಣ ವೃತ್ತದಿಂದ (ಡಿ.ಪಿ.ಓ) ಹಳೆ ಬಿ.ಜೆ.ಪಿ.ಕಛೇರಿ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ವಸ್ತು ಪ್ರದರ್ಶನ ಮೈದಾನದ ಮೇನ್ ಗೇಟ್ ಜಂಕ್ಷನ್​ನಿಂದ ಮೃಗಾಲಯ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇಟ್ಟಿಗೆ ಗೂಡಿನ 5ನೇ ಕ್ರಾಸ್ ರಸ್ತೆಯಲ್ಲಿ ಮೃಗಾಲಯದ ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರದರ್ಶನ ಮೈದಾನದ ಪೂರ್ವ ದ್ವಾರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಾನಸ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್​ನಿಂದ ಲೋಕರಂಜನ್ ರಸ್ತೆ ಜಂಕ್ಷನ್​ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಲೆಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್​ನಿಂದ (ಛತ್ರಿ ಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಸರಾ ದಿನಗಳಲ್ಲಿ ಮೈಸೂರು ಅರಮನೆ, ಮೃಗಾಲಯಕ್ಕೆ ಲಕ್ಷಾಂತರ ಪ್ರವಾಸಿಗರ ಭೇಟಿ, ಆದಾಯ ಹೆಚ್ಚಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.