ETV Bharat / state

ಮಹಿಷ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ: ಮೈಸೂರಲ್ಲಿ ನಿಷೇಧಾಜ್ಞೆ ಜಾರಿ

author img

By

Published : Sep 27, 2019, 10:38 AM IST

ಪ್ರಗತಿಪರರು ಮಹಿಷ ದಸರಾ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಕೆಲಸ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ಪುರಭವನದ ವ್ಯಾಪ್ತಿಯಲ್ಲಿ ಸೆಕ್ಷನ್​ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಹಿಷಾ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ

ಮೈಸೂರು: ಪ್ರಗತಿಪರರು ಮಹಿಷಾ ದಸರಾ ಆಚರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಪುರಭವನದ ವ್ಯಾಪ್ತಿಯಲ್ಲಿ ಸೆಕ್ಷನ್​ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಹಿಷ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ

ಇಂದು ಕೆಲ ಪ್ರಗತಿಪರ ಸಂಘಟನೆಯವರು ಮಹಿಷ ದಸರಾವನ್ನು ಚಾಮುಂಡಿ ಬೆಟ್ಟದ ಮಹಿಷಾಸುರ ವಿಗ್ರಹದ ಎದುರು ಆಚರಿಸಲು ನಿರ್ಧರಿಸಿದ್ದಾರೆ. ಆದರೆ ಈ ಮಹಿಷ ದಸರಾಗೆ ಬಹುತೇಕ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟ ಹಾಗೂ ನಗರದ ಪುರ ಭವನದ ಬಳಿ 500 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ12 ಗಂಟೆವರಗೆ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಸಭೆ ಸಮಾರಂಭ ಮೆರವಣಿಗೆ ಹಾಗೂ ಇತರೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಪೊಲೀಸರು ಸೂಚಿಸಿದ್ದಾರೆ.

ನಿನ್ನೆ ಸಂಜೆ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆಯ ಬಳಿ ವೇದಿಕೆ ನಿರ್ಮಿಸಲು ಮುಂದಾಗಿದ್ದ ಪ್ರಗತಿಪರರನ್ನು ಸಂಸದ ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡಿದ್ದರು. ಈ ಮಧ್ಯೆ ಇಂದು ಪ್ರಗತಿಪರರು ಮಹಿಷ ದಸರಾವನ್ನು ಆಶೋಕಪುರಂನಲ್ಲಿ ನಡೆಸಲು ನಿರ್ಧರಿಸಿದ್ದು, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು: ಪ್ರಗತಿಪರರು ಮಹಿಷಾ ದಸರಾ ಆಚರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಪುರಭವನದ ವ್ಯಾಪ್ತಿಯಲ್ಲಿ ಸೆಕ್ಷನ್​ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಹಿಷ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ

ಇಂದು ಕೆಲ ಪ್ರಗತಿಪರ ಸಂಘಟನೆಯವರು ಮಹಿಷ ದಸರಾವನ್ನು ಚಾಮುಂಡಿ ಬೆಟ್ಟದ ಮಹಿಷಾಸುರ ವಿಗ್ರಹದ ಎದುರು ಆಚರಿಸಲು ನಿರ್ಧರಿಸಿದ್ದಾರೆ. ಆದರೆ ಈ ಮಹಿಷ ದಸರಾಗೆ ಬಹುತೇಕ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟ ಹಾಗೂ ನಗರದ ಪುರ ಭವನದ ಬಳಿ 500 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ12 ಗಂಟೆವರಗೆ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಸಭೆ ಸಮಾರಂಭ ಮೆರವಣಿಗೆ ಹಾಗೂ ಇತರೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಪೊಲೀಸರು ಸೂಚಿಸಿದ್ದಾರೆ.

ನಿನ್ನೆ ಸಂಜೆ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆಯ ಬಳಿ ವೇದಿಕೆ ನಿರ್ಮಿಸಲು ಮುಂದಾಗಿದ್ದ ಪ್ರಗತಿಪರರನ್ನು ಸಂಸದ ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡಿದ್ದರು. ಈ ಮಧ್ಯೆ ಇಂದು ಪ್ರಗತಿಪರರು ಮಹಿಷ ದಸರಾವನ್ನು ಆಶೋಕಪುರಂನಲ್ಲಿ ನಡೆಸಲು ನಿರ್ಧರಿಸಿದ್ದು, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

Intro:ಮೈಸೂರು: ಪ್ರಗತಿಪರು ಮಹಿಷಾ ದಸರಾ ಆಚರಣೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ಪುರ ಭವನದ ವ್ಯಾಪ್ತಿಯಲ್ಲಿ ೧೪೪ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Body:

ಇಂದು ಪ್ರಗತಿಪರರು ಕೆಲವು ಸಂಘಟನೆಯವರು ಮಹಿಷಾ ದಸರಾವನ್ನು ಚಾಮುಂಡಿ ಬೆಟ್ಟದ ಮಹಿಷಾಸುರ ವಿಗ್ರಹದ ಎದರು ಆಚರಿಸಲು ನಿರ್ಧರಿಸಿದ್ದರು. ಆದರೆ ಈ ಮಹಿಷಾ ದಸರಾಗೆ ಬಹುತೇಕ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ನಗರದ ಪುರ ಭವನದ ಬಳಿ ೫೦೦ ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯ ರಾತ್ರಿ ೧೨ ಗಂಟೆ ವರಗೆ ೧೪೪ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು ಯಾವುದೇ ಸಭೆ ಸಮಾರಂಭ ಮೆರವಣಿಗೆ ಹಾಗೂ ಇತರ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದಂತೆ ಏರಲಾಗಿದೆ. ಈ ಮಧ್ಯೆ ನೆನ್ನೆ ಸಂಜೆ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆಯ ಬಳಿ ವೇದಿಕೆ ನಿರ್ಮಿಸಲು ಮುಂದಾದ ಪ್ರಗತಿಪರರನ್ನು ಸಂಸದ ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡ ಘಟನೆ ಸಹ ನಡೆಯಿತು.
ಈ ಮಧ್ಯೆ ಇಂದು ಪ್ರಗತಿಪರರು ಮಹಿಷಾ ದಸರಾವನ್ನು ಆಶೋಕಪುರಂ ನಲ್ಲಿ ನಡೆಸಲು ನಿರ್ಧರಿಸಿದ್ದು ನಂತರ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆ ನಡೆಸಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.