ಮೈಸೂರು: ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿ ಲಕ್ಷಗಟ್ಟಲೆ ಬೆಲೆ ಬಾಳುವ ಆಭರಣಗಳು ಸೇರಿದಂತೆ ಬೈಕ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸತ್ಯನಗರ ನಿವಾಸಿ ಸೈಯದ್ ಉಮ್ಮರ್(39) ಬಂಧಿತ ಆರೋಪಿ. ವಿದ್ಯಾರಣ್ಯಪುರಂ ಪೊಲೀಸರು ಜೆಪಿ ನಗರದ ಲಿಂಕ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಬೈಕ್ ಮೇಲೆ ಬರುತ್ತಿದ್ದ ಆರೋಪಿ ಉಮ್ಮರ್ನನ್ನು ತಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆಗ ವಿವಿಧ ಠಾಣೆಗಳಲ್ಲಿ ಸರಗಳ್ಳತನ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.
ಬಂಧಿತನಿಂದ 9.32 ಲಕ್ಷ ರೂ. ಮೌಲ್ಯದ 233 ಗ್ರಾಂ ತೂಕದ 7 ಚಿನ್ನದ ಮಾಂಗಲ್ಯ ಸರಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.