ETV Bharat / state

ಮೈಸೂರಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ

author img

By

Published : May 28, 2022, 9:35 AM IST

ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್​ನಲ್ಲಿ ನಡೆದಿದೆ. ಪರಸಪ್ಪ ಕೊನ್ನೂರು ನೇಣಿಗೆ ಶರಣಾದ ಕಾನ್ಸ್​ಟೇಬಲ್.

ಮೈಸೂರು
ಮೈಸೂರು

ಮೈಸೂರು: ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್​ಬಾದ್ ಠಾಣಾ ವ್ಯಾಪ್ತಿಯ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಸಪ್ಪ ಕೊನ್ನೂರು (27) ಆತ್ಮಹತ್ಯೆ ಮಾಡಿಕೊಂಡವರು.

2016ನೇ ಬ್ಯಾಚ್​ನಲ್ಲಿ ಆಯ್ಕೆಯಾಗಿದ್ದ ಪರಸಪ್ಪ, ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ನಜರ್​ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಚ್ಚು ಬೀಸಿದ ಮೂವರಿಗೆ 7 ವರ್ಷ ಜೈಲುಶಿಕ್ಷೆ: ರೌಡಿಗಳಿಗೆ ಎಚ್ಚರಿಕೆಯ ಗಂಟೆ

ಮೈಸೂರು: ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್​ಬಾದ್ ಠಾಣಾ ವ್ಯಾಪ್ತಿಯ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಸಪ್ಪ ಕೊನ್ನೂರು (27) ಆತ್ಮಹತ್ಯೆ ಮಾಡಿಕೊಂಡವರು.

2016ನೇ ಬ್ಯಾಚ್​ನಲ್ಲಿ ಆಯ್ಕೆಯಾಗಿದ್ದ ಪರಸಪ್ಪ, ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ನಜರ್​ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಚ್ಚು ಬೀಸಿದ ಮೂವರಿಗೆ 7 ವರ್ಷ ಜೈಲುಶಿಕ್ಷೆ: ರೌಡಿಗಳಿಗೆ ಎಚ್ಚರಿಕೆಯ ಗಂಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.