ETV Bharat / state

ಮಕ್ಕಳಾಗಲಿಲ್ಲವೆಂದು ನೊಂದು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್​ಸ್ಟೇಬಲ್

author img

By

Published : Dec 11, 2020, 1:28 PM IST

ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಹೆಡ್ ಕಾನ್​ಸ್ಟೇಬಲ್ ನೇಣಿಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.

head constablecommits suicide in mysore
ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್​ಸ್ಟೇಬಲ್

ಮೈಸೂರು: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ಹೆಡ್ ಕಾನ್ಸ್​​ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ಹೆಡ್‌ಕಾನ್ಸ್​​ಟೇಬಲ್ ಮಹೇಶ್ (39) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿದ್ಯಾರಣ್ಯಪುರಂ ನಿವಾಸಿಯಾಗಿದ್ದು ತನಗೆ ಮಕ್ಕಳಾಗಲಿಲ್ಲವೆಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ವಿವರ:

ಮಹೇಶ್​ ತಂದೆ ಪೊಲೀಸ್​ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಅನುಕಂಪದ ಆಧಾರದ ಮೇಲೆ ತಂದೆಯ ಸರ್ಕಾರಿ ಕೆಲಸ ಮಗನಿಗೆ​ ಸಿಕ್ಕಿತ್ತು. ಆದರೆ ಮಹೇಶ್​​ಗೆ ಮಕ್ಕಳಾಗದ ಕಾರಣ ಈ ವಿಷಯಕ್ಕೆ ಯಾವಾಗಲೂ ಕೊರಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಮಹೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ಹೆಡ್ ಕಾನ್ಸ್​​ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ಹೆಡ್‌ಕಾನ್ಸ್​​ಟೇಬಲ್ ಮಹೇಶ್ (39) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿದ್ಯಾರಣ್ಯಪುರಂ ನಿವಾಸಿಯಾಗಿದ್ದು ತನಗೆ ಮಕ್ಕಳಾಗಲಿಲ್ಲವೆಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ವಿವರ:

ಮಹೇಶ್​ ತಂದೆ ಪೊಲೀಸ್​ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಅನುಕಂಪದ ಆಧಾರದ ಮೇಲೆ ತಂದೆಯ ಸರ್ಕಾರಿ ಕೆಲಸ ಮಗನಿಗೆ​ ಸಿಕ್ಕಿತ್ತು. ಆದರೆ ಮಹೇಶ್​​ಗೆ ಮಕ್ಕಳಾಗದ ಕಾರಣ ಈ ವಿಷಯಕ್ಕೆ ಯಾವಾಗಲೂ ಕೊರಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಮಹೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.