ಮೈಸೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷ(ಆಪ್)ಕ್ಕೆ ಕೆಲ ಬಿಜೆಪಿಯೇತರ ರಾಜಕೀಯ ಮುಖಂಡರು ಶುಭಕೋರಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ವಿರುದ್ಧ ಅವಕಾಶ ಸಿಕ್ಕಾಗಲೆಲ್ಲ ಬಹುಭಾಷಾ ನಟ ಪ್ರಕಾಶ್ ರೈ(ಪ್ರಕಾಶ್ರಾಜ್) ವಾಗ್ದಾಳಿ, ಟೀಕೆ ಮಾಡುತ್ತಿದ್ದಾರೆ. ಇದೀಗ ದೆಹಲಿ ಚುನಾವಣೆ ಹಿನ್ನೆಲೆಯಲ್ಲೂ ಅವರು ಟ್ವೀಟ್ ಮೂಲಕ ಕಾಲೆಳೆದಿದ್ದಾರೆ. ಮಂಗಳೂರು ಗೋಲಿಬಾರ್ ಪ್ರಕರಣ ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಗೋಲಿಬಾರ್ ಮಾಡೋರಿಗೆ ಜನ ಪೊರಕೇಲಿ ಹೊಡೆದ್ರು..SHOCK ಹೊಡೀತಾ?? ಎಂದು ಬರೆದುಕೊಂಡಿದ್ದಾರೆ.