ETV Bharat / state

ದಲ್ಲಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ: ಪ್ರತಾಪ್​ ಸಿಂಹ ಪ್ರಶ್ನೆ

author img

By

Published : Sep 27, 2020, 12:20 PM IST

ಕೃಷಿ ಮಸೂದೆ ತಿದ್ದುಪಡಿ ಬಗ್ಗೆ ದೇಶಾದ್ಯಂತ ರೈತರು ಪ್ರತಿಭಟನೆಗೆ ಇಳಿದಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಆಡಳಿತ ಪಕ್ಷದ ಮುಖಂಡರೂ ಕೂಡ ಕಾಯ್ದೆ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಯತ್ನ ನಡೆಸುತ್ತಿದ್ದಾರೆ.

Pratha Simha outrage against Congress
ಪ್ರತಾಪ್​ ಸಿಂಹ

ಮೈಸೂರು: ಸೂಪರ್ ಮಾರ್ಕೆಟ್​ ವ್ಯವಸ್ಥೆಯನ್ನು ನಾಡಿಗೆ ಪರಿಚಯಿಸಿದ್ದು ಯಾರು ಎಂಬುದರ ಬಗ್ಗೆ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಿರುವ ಪ್ರತಿಪಕ್ಷಗಳು ಮನನ ಮಾಡಿಕೊಳ್ಳಲಿ ಎಂದು ಸಂಸದ ಪ್ರತಾಪ್​ ಸಿಂಹ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ ಆಗುವ ಅನುಕೂಲದ ಬಗ್ಗೆ ನಾವು ಯೋಚನೆ ಮಾಡುತ್ತೇವೆ. ಬಂದ್ ಮಾಡುವವರು ಬಂದ್​​ನ ಲಾಭದ ಬಗ್ಗೆ ಯೋಚನೆ ಮಾಡುತ್ತಾರೆ. ದಲ್ಲಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ.? ದಲ್ಲಾಳಿಗೆ ಲಾಭ ಹೆಚ್ಚಿಸುವಂತಿದ್ದ ಕಾಯ್ದೆ ತಿದ್ದುಪಡಿ ಮಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ ನಡೆಗೆ ಸಂಸದ ಪ್ರತಾಪ್​ ಸಿಂಹ ಕಿಡಿ

ಎಪಿಎಂಸಿ ಚುನಾವಣೆ ಲಕ್ಷಾಂತರ ಖರ್ಚು ಮಾಡಿ ಏಕೆ ನಡೆಸುತ್ತಾರೆ? ಲಾಭವಿಲ್ಲದೆ ಈ ರೀತಿ ಚುನಾವಣೆ ನಡೆಸಲು ಸಾಧ್ಯವೇ? ರೈತರಿಂದಲೇ ಸೆಸ್​ ಸುಲಿಗೆ ಮಾಡಿ ಲಾಭ ಮಾಡ್ತಿರೋದು ದಲ್ಲಾಳಿಗಳು. ಈ ಬಂದ್​​ನಲ್ಲಿ ರೈತರು ಭಾಗಿಯಾಗ್ತಿಲ್ಲ. ಆದ್ರೆ, ರೈತರ ಹೆಸರಿನ ಸಂಘಟನೆಗಳು ಭಾಗಿಯಾಗ್ತಿವೆ‌. ಈ ಬಂದ್‍ನಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.

ಸಂಸದ ತೇಜಸ್ವಿ ಸೂರ್ಯ ಬಿಜೆಪಿ ರಾಷ್ಟ್ರಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕರ್ನಾಟಕ್ಕ ಸಿಕ್ಕ ಅತಿದೊಡ್ಡ ಮನ್ನಣೆಯಾಗಿದೆ. ಬಿಜೆಪಿ ಕರ್ನಾಟಕದ ವಿಚಾರದಲ್ಲಿ ಹೆಚ್ಚು ಪ್ರೀತಿ ಹೊಂದಿದೆ. ಅದಕ್ಕಾಗಿ ರಾಷ್ಟ್ರೀಯ ಸಂಘಟನೆಯಲ್ಲಿ ಮೂವರಿಗೆ ಅವಕಾಶ ಸಿಕ್ಕಿದೆ‌ ಎಂದು ಇದೇ ವೇಳೆ ತಿಳಿಸಿದರು.

ಮೈಸೂರು: ಸೂಪರ್ ಮಾರ್ಕೆಟ್​ ವ್ಯವಸ್ಥೆಯನ್ನು ನಾಡಿಗೆ ಪರಿಚಯಿಸಿದ್ದು ಯಾರು ಎಂಬುದರ ಬಗ್ಗೆ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಿರುವ ಪ್ರತಿಪಕ್ಷಗಳು ಮನನ ಮಾಡಿಕೊಳ್ಳಲಿ ಎಂದು ಸಂಸದ ಪ್ರತಾಪ್​ ಸಿಂಹ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ ಆಗುವ ಅನುಕೂಲದ ಬಗ್ಗೆ ನಾವು ಯೋಚನೆ ಮಾಡುತ್ತೇವೆ. ಬಂದ್ ಮಾಡುವವರು ಬಂದ್​​ನ ಲಾಭದ ಬಗ್ಗೆ ಯೋಚನೆ ಮಾಡುತ್ತಾರೆ. ದಲ್ಲಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ.? ದಲ್ಲಾಳಿಗೆ ಲಾಭ ಹೆಚ್ಚಿಸುವಂತಿದ್ದ ಕಾಯ್ದೆ ತಿದ್ದುಪಡಿ ಮಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ ನಡೆಗೆ ಸಂಸದ ಪ್ರತಾಪ್​ ಸಿಂಹ ಕಿಡಿ

ಎಪಿಎಂಸಿ ಚುನಾವಣೆ ಲಕ್ಷಾಂತರ ಖರ್ಚು ಮಾಡಿ ಏಕೆ ನಡೆಸುತ್ತಾರೆ? ಲಾಭವಿಲ್ಲದೆ ಈ ರೀತಿ ಚುನಾವಣೆ ನಡೆಸಲು ಸಾಧ್ಯವೇ? ರೈತರಿಂದಲೇ ಸೆಸ್​ ಸುಲಿಗೆ ಮಾಡಿ ಲಾಭ ಮಾಡ್ತಿರೋದು ದಲ್ಲಾಳಿಗಳು. ಈ ಬಂದ್​​ನಲ್ಲಿ ರೈತರು ಭಾಗಿಯಾಗ್ತಿಲ್ಲ. ಆದ್ರೆ, ರೈತರ ಹೆಸರಿನ ಸಂಘಟನೆಗಳು ಭಾಗಿಯಾಗ್ತಿವೆ‌. ಈ ಬಂದ್‍ನಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.

ಸಂಸದ ತೇಜಸ್ವಿ ಸೂರ್ಯ ಬಿಜೆಪಿ ರಾಷ್ಟ್ರಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕರ್ನಾಟಕ್ಕ ಸಿಕ್ಕ ಅತಿದೊಡ್ಡ ಮನ್ನಣೆಯಾಗಿದೆ. ಬಿಜೆಪಿ ಕರ್ನಾಟಕದ ವಿಚಾರದಲ್ಲಿ ಹೆಚ್ಚು ಪ್ರೀತಿ ಹೊಂದಿದೆ. ಅದಕ್ಕಾಗಿ ರಾಷ್ಟ್ರೀಯ ಸಂಘಟನೆಯಲ್ಲಿ ಮೂವರಿಗೆ ಅವಕಾಶ ಸಿಕ್ಕಿದೆ‌ ಎಂದು ಇದೇ ವೇಳೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.