ETV Bharat / state

ಗರ್ಭಿಣಿ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತಳನ್ನ ಅಶ್ವಿನಿ ಎಂದು ಗುರುತಿಸಲಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

author img

By

Published : Mar 21, 2022, 3:28 PM IST

ಗರ್ಭಿಣಿ ಅನುಮಾನಾಸ್ಪದ ಸಾವು
ಗರ್ಭಿಣಿ ಅನುಮಾನಾಸ್ಪದ ಸಾವು

ಮೈಸೂರು: ನಗರದ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದೆ. ಮೃತಳನ್ನು ವಿಜಯನಗರದ ನಿವಾಸಿ ಅಶ್ವಿನಿ(23) ಎಂದು ಗುರುತಿಸಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ
ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ

ಮೈಸೂರು ತಾಲೂಕಿನ ಮೈದನಹಳ್ಳಿ ನಿವಾಸಿ ಪ್ರಮೋದ್ ಹಾಗೂ ವಿಜಯನಗರ ನಿವಾಸಿ ಅಶ್ವಿನಿ ಇಬ್ಬರು ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ 2021 ಜೂನ್ 13 ರಂದು ವಿವಾಹವಾಗಿದ್ದರು. ಏಳು ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ, ಕೆಲ ದಿನಗಳ ಹಿಂದೆ ಗಂಡನ ಜೊತೆ ಮುನಿಸಿಕೊಂಡು ತವರು ಮ‌ನೆಗೆ ಬಂದಿದ್ದಳು.

ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ
ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ

ಭಾನುವಾರ ಮಧ್ಯಾಹ್ನ ವಿಜಯನಗರದಲ್ಲಿರುವ ಪತ್ನಿ ಮನೆ ಬಳಿ ಬಂದ ಪ್ರಮೋದ್, ಅಶ್ವಿನಿ ಜೊತೆ ಮಾತನಾಡಬೇಕು ಎಂದು ಬೈಕ್​​ನಲ್ಲಿ ಕರೆದುಕೊಂಡು ಹೋಗಿದ್ದಾನೆ. ರಾತ್ರಿಯಾದರೂ ಮಗಳು ಬಾರದೇ ಇದ್ದಾಗ, ಮಗಳಿಗೆ ತಂದೆ ಹಲವು ಬಾರಿ ಫೋನ್​ ಮಾಡಿದ್ದು, ಆದರೆ ಅಶ್ವಿನಿ ರಿಸೀವ್ ಮಾಡಿಲ್ಲ. ನಂತರ ಪ್ರಮೋದ್​ಗೂ ಕೂಡಾ ಕಾಲ್ ಮಾಡಿದಾಗಲೂ ಆತ ಕೂಡ ರಿಸೀವ್ ಮಾಡಿಲ್ಲವಂತೆ.

ಇಂದು ಬೆಳಗ್ಗೆ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೋಷಕರು ಮಗಳ ಶವ ನೋಡಿ, ಇದನ್ನು ಆಕೆಯ ಗಂಡನೆ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ‌ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಪೋಷಕರು ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೈಸೂರು: ನಗರದ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದೆ. ಮೃತಳನ್ನು ವಿಜಯನಗರದ ನಿವಾಸಿ ಅಶ್ವಿನಿ(23) ಎಂದು ಗುರುತಿಸಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ
ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ

ಮೈಸೂರು ತಾಲೂಕಿನ ಮೈದನಹಳ್ಳಿ ನಿವಾಸಿ ಪ್ರಮೋದ್ ಹಾಗೂ ವಿಜಯನಗರ ನಿವಾಸಿ ಅಶ್ವಿನಿ ಇಬ್ಬರು ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ 2021 ಜೂನ್ 13 ರಂದು ವಿವಾಹವಾಗಿದ್ದರು. ಏಳು ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ, ಕೆಲ ದಿನಗಳ ಹಿಂದೆ ಗಂಡನ ಜೊತೆ ಮುನಿಸಿಕೊಂಡು ತವರು ಮ‌ನೆಗೆ ಬಂದಿದ್ದಳು.

ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ
ಪ್ರೀತಿಸಿ ಮದುವೆಯಾಗಿದ್ದ ಪ್ರಮೋದ್​ ಮತ್ತು ಅಶ್ವಿನಿ

ಭಾನುವಾರ ಮಧ್ಯಾಹ್ನ ವಿಜಯನಗರದಲ್ಲಿರುವ ಪತ್ನಿ ಮನೆ ಬಳಿ ಬಂದ ಪ್ರಮೋದ್, ಅಶ್ವಿನಿ ಜೊತೆ ಮಾತನಾಡಬೇಕು ಎಂದು ಬೈಕ್​​ನಲ್ಲಿ ಕರೆದುಕೊಂಡು ಹೋಗಿದ್ದಾನೆ. ರಾತ್ರಿಯಾದರೂ ಮಗಳು ಬಾರದೇ ಇದ್ದಾಗ, ಮಗಳಿಗೆ ತಂದೆ ಹಲವು ಬಾರಿ ಫೋನ್​ ಮಾಡಿದ್ದು, ಆದರೆ ಅಶ್ವಿನಿ ರಿಸೀವ್ ಮಾಡಿಲ್ಲ. ನಂತರ ಪ್ರಮೋದ್​ಗೂ ಕೂಡಾ ಕಾಲ್ ಮಾಡಿದಾಗಲೂ ಆತ ಕೂಡ ರಿಸೀವ್ ಮಾಡಿಲ್ಲವಂತೆ.

ಇಂದು ಬೆಳಗ್ಗೆ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೋಷಕರು ಮಗಳ ಶವ ನೋಡಿ, ಇದನ್ನು ಆಕೆಯ ಗಂಡನೆ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ‌ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಪೋಷಕರು ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.