ETV Bharat / state

ಮತಗಟ್ಟೆಗೆ ಮೊಬೈಲ್​​ ತರುವಂತಿಲ್ಲ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು, ಮತದಾರರು ಮತಗಟ್ಟೆಗೆ ಮೊಬೈಲ್​​ ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್​.ಜಿ.ಶಂಕರ್​ ತಿಳಿಸಿದ್ದಾರೆ.

author img

By

Published : Dec 2, 2019, 7:55 PM IST

Prohibition of mobile in voting booth
ಮತಗಟ್ಟೆಗೆ ಮೊಬೈಲ್​​ ತರುವಂತಿಲ್ಲ

ಮೈಸೂರು: ಹುಣಸೂರು ಉಪ ಚುನಾವಣೆಗೆ ವ್ಯಾಪಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು , ಮತದಾರರು ಮತದಾನದ ಸಂದರ್ಭದಲ್ಲಿ ಮತಗಟ್ಟೆಗೆ ಮೊಬೈಲ್ ತರುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಕೊನೆಗೊಳ್ಳಲಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಡಿಸೆಂಬರ್ 5 ರ ಮಧ್ಯ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯಬಾರದೆಂದು ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

ಮತದಾನದ ದಿನ ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೂ ಮತಗಟ್ಟೆಯನ್ನು ಪೂಜೆ ಮಾಡುವಂತಿಲ್ಲ ಎಂದ ಜಿಲ್ಲಾಧಿಕಾರಿಗಳು, ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು ಸಹ ಯಾವುದೇ ರೀತಿಯ ಚುನಾವಣೆಗೆ ಸಂಬಂಧಿಸಿದ ಸುದ್ದಿಯನ್ನು ಪ್ರಸಾರ ಮಾಡುವಂತಿಲ್ಲ ಎಂದು ತಿಳಿಸಿದರು.

ಮತದಾನ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಮೈಸೂರು: ಹುಣಸೂರು ಉಪ ಚುನಾವಣೆಗೆ ವ್ಯಾಪಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು , ಮತದಾರರು ಮತದಾನದ ಸಂದರ್ಭದಲ್ಲಿ ಮತಗಟ್ಟೆಗೆ ಮೊಬೈಲ್ ತರುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಕೊನೆಗೊಳ್ಳಲಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಡಿಸೆಂಬರ್ 5 ರ ಮಧ್ಯ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯಬಾರದೆಂದು ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

ಮತದಾನದ ದಿನ ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೂ ಮತಗಟ್ಟೆಯನ್ನು ಪೂಜೆ ಮಾಡುವಂತಿಲ್ಲ ಎಂದ ಜಿಲ್ಲಾಧಿಕಾರಿಗಳು, ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು ಸಹ ಯಾವುದೇ ರೀತಿಯ ಚುನಾವಣೆಗೆ ಸಂಬಂಧಿಸಿದ ಸುದ್ದಿಯನ್ನು ಪ್ರಸಾರ ಮಾಡುವಂತಿಲ್ಲ ಎಂದು ತಿಳಿಸಿದರು.

ಮತದಾನ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Intro:ಮೈಸೂರು: ಹುಣಸೂರು ಉಪ ಚುನಾವಣೆಗೆ ವ್ಯಾಪಕ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು , ಮತದಾರರು ಮತದಾನದ ಸಂದರ್ಭದಲ್ಲಿ ಮತಗಟ್ಟೆಗೆ ಮೊಬೈಲ್ ತರುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.Body:




ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠ ರಿಷ್ಯಂತ್ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಡಿಸೆಂಬರ್ ೫ ರಂದು ನಡೆಯಲ್ಲಿರುವ ಉಪ ಚುನಾವಣೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದ್ದು , ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಕೊನೆಗೊಳ್ಳಲಿದೆ, ನಂತರ ಕ್ಷೇತ್ರಕ್ಕೆ ಸಂಬಂಧ ಪಡದ ವ್ಯಕ್ತಿಗಳು ಕ್ಷೇತ್ರ ಬಿಟ್ಟು ಹೊರಗೆ ಹೋಗಬೇಕು. ಮಂಗಳವಾರ ಸಂಜೆ ೬ ಗಂಟೆಯಿಂದ ಡಿಸೆಂಬರ್ ೫ ರ ಮಧ್ಯೆ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು , ಅಹಿತಕರ ಘಟನೆ ನಡೆಯಬಾರದೆಂದು ವ್ಯಾಪಕ ಬಂದುಬಸ್ತ್ ಮಾಡಲಾಗಿದ್ದು ತಾಲೂಕಿಗೆ ಸಂಬಂಧಪಟ್ಟ ಯಾವ ಒಬ್ಬ ಅಧಿಕಾರಿಯನ್ನು ಚುನಾವಣೆಗೆ ನೇಮಿಸಲಾಗಿಲ್ಲ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಮತದಾನ ನಡೆಯುವ ದಿನ ತಾಲ್ಲೂಕಿನಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದ್ದು , ಒಟ್ಟು ೯೫ ಎಫ್.ಐ.ಆರ್ ಗಳು ಆಗಿದ್ದು ಅದರಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ, ೮೬ ಇತರೆ ೯ ಪ್ರಕರಣಗಳಿವೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಡಿಸಿಸಿ ಬ್ಯಾಂಕ್ ಗೆ ಸೇರಿದ ೨ ಕೋಟಿ ಹಣದ ಬಗ್ಗೆ ಆದಾಯ ತೆರಿಗೆ ಇಲಾಖೆಯವರು ತನಿಖೆ ನಡೆಸಿ ಆ ಹಣವನ್ನು ಪುನಃ ಬ್ಯಾಂಕಿಗೆ ನೀಡಲಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಮತದಾನದ ದಿನ ಮತಗಟ್ಟೆಗೆ ಮತಚಲಾಯಿಸುವಾಗ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಅಭ್ಯರ್ಥಿಗಳ ಪರವಾಗಿ ಯಾರು ಮತಗಟ್ಟೆಯನ್ನು ಪೂಜೆ ಮಾಡುವಂತಿಲ್ಲ ಎಂದ ಜಿಲ್ಲಾಧಿಕಾರಿಗಳು ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡ ೪೮ ಗಂಟೆ ಅವಧಿಯಲ್ಲಿ ಮಾಧ್ಯಮಗಳು ಯಾವುದೇ ರೀತಿಯ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಯನ್ನು ಪ್ರಸಾರ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದು , ಮತದಾನ ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ನಡೆಯಲಿದ್ದು ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದರು.



ವ್ಯಾಪಕ ಭದ್ರತೆ : ಜಿಲ್ಲಾ ಪೋಲಿಸ್ ವರಿಷ್ಠ


ಮತದಾನಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು , ಚುನಾವಣೆಯ ದಿನ ೪ ಕೇಂದ್ರ ಪಡೆ, ೬ ಕೆ.ಎಸ್.ಆರ್.ಪಿ ಪಡೆ ಹಾಗೂ ೯೦೦ ಪೋಲಿಸರು ಸೇರಿದಂತೆ ೧,೫೦೦ ಕ್ಕೂ ಅಧಿಕ ಸಿಬ್ಬಂದಿಗಳನ್ನು ಹುಣಸೂರು ಉಪ ಚುನಾವಣೆಗೆ ನಿಯೋಜನೆ ಮಾಡಲಾಗಿದ್ದು ಸ್ಥಳೀಯ ಪೋಲಿಸ್ ಅಧಿಕಾರಿಗಳು ಸೇರಿದಂತೆ ಪೇದೆಗಳನ್ನು ಸಹ ಈ ಬಾರಿ ಚುನಾವಣೆಗೆ ಬಳಸಿಕೊಳ್ಳಲಿದ್ದು , ಬದಲಾಗಿ ಬೇರೆ ತಾಲೂಕಿನಿಂದ ಪೋಲಿಸರನ್ನು ಕರೆತರಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದು , ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.