ETV Bharat / state

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ - ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಜೆಎನ್​ಯುನಲ್ಲಿ ನಡೆದ ಘಟನೆ ಖಂಡಿಸಿ ಎಐಡಿಎಸ್ಒ, ಎಸ್ಎಫ್​ಐ ಸೇರಿದಂತೆ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
Protest in Mysore condemning JNU incident
author img

By

Published : Jan 6, 2020, 3:09 PM IST

ಮೈಸೂರು: ಜೆಎನ್​ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ನಡೆದ ಹಲ್ಲೆ ಖಂಡಿಸಿ ಎಐಡಿಎಸ್ಒ, ಎಸ್ಎಫ್​ಐ ಸೇರಿದಂತೆ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಜೆಎನ್​ಯು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್​ಯು ವಿಶ್ವವಿದ್ಯಾಯಲದಲ್ಲಿ ಹೊರಗಿನಿಂದ ಬಂದ ಕಿಡಿಗೇಡಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದ್ದಾರೆ. ಕ್ಯಾಂಪಸ್​ನಲ್ಲಿರುವ ಹಾಸ್ಟೆಲ್​ಗಳಿಗೆ ಮತ್ತು ವಿದ್ಯಾರ್ಥಿಗಳು ಸೇರುವ ಸ್ಥಳಗಳಲ್ಲಿ ಸಿಕ್ಕ ಸಿಕ್ಕವರನ್ನು ಅದರಲ್ಲೂ ಜೆಎನ್​ಯು ಶುಲ್ಕ ಹೆಚ್ಚಳ ವಿರೋಧಿಸುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮನಬಂದಂತೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಈ ಘಟನೆಯಲ್ಲಿ ಜೆಎನ್​ಯು, ಎಸ್​ಯು ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಶಿಕ್ಷಕರ ಮೇಲೂ ದಾಳಿ‌ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿರುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು: ಜೆಎನ್​ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ನಡೆದ ಹಲ್ಲೆ ಖಂಡಿಸಿ ಎಐಡಿಎಸ್ಒ, ಎಸ್ಎಫ್​ಐ ಸೇರಿದಂತೆ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್​ಯು ಘಟನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಜೆಎನ್​ಯು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್​ಯು ವಿಶ್ವವಿದ್ಯಾಯಲದಲ್ಲಿ ಹೊರಗಿನಿಂದ ಬಂದ ಕಿಡಿಗೇಡಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆನಡೆಸಿದ್ದಾರೆ. ಕ್ಯಾಂಪಸ್​ನಲ್ಲಿರುವ ಹಾಸ್ಟೆಲ್​ಗಳಿಗೆ ಮತ್ತು ವಿದ್ಯಾರ್ಥಿಗಳು ಸೇರುವ ಸ್ಥಳಗಳಲ್ಲಿ ಸಿಕ್ಕ ಸಿಕ್ಕವರನ್ನು ಅದರಲ್ಲೂ ಜೆಎನ್​ಯು ಶುಲ್ಕ ಹೆಚ್ಚಳ ವಿರೋಧಿಸುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮನಬಂದಂತೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಈ ಘಟನೆಯಲ್ಲಿ ಜೆಎನ್​ಯು, ಎಸ್​ಯು ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಶಿಕ್ಷಕರ ಮೇಲೂ ದಾಳಿ‌ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿರುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Intro:ಜೆಎನ್ ಯು ಘಟನೆ ಖಂಡಿಸಿ ಪ್ರತಿಭಟನೆ


Body:ಜೆ ಎನ್ ಯು ನಲ್ಲಿ ಎಬಿಪಿ ಎಬಿವಿಪಿ ಗೂಂಡಾಗಿರಿ: ಎಐಡಿಎಸ್‌ಒ ಆರೋಪಿಸಿ ಪ್ರತಿಭಟನೆ
ಮೈಸೂರು: ಜೆಎನ್ ಯು ವಿವಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಎಬಿಎಪಿ ಗೂಂಡಾಗಿರಿ ನಡೆಸಿದೆ ಎಂದು ಆರೋಪಿಸಿ ಎಐಡಿಎಸ್ ಒ, ಎಸ್ ಎಫ್ ಐ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಬಿವಿಪಿ‌ ಗುಂಡಗಳು ಮತ್ತು ಹೊರಗಿನಿಂದ ಬಂದ ಕಿಡಿಗೇಡಿಗಳು ಕಬ್ಬಿಣದ ರಾಡ್ ಮತ್ತು ಲಾಠಿಗಳನ್ನು ಹಿಡಿದು ಕ್ಯಾಂಪಸ್ ತಂದಿರುವ ಹಾಸ್ಟೆಲ್ಗಳಿಗೆ ಮತ್ತು ವಿದ್ಯಾರ್ಥಿಗಳು ಸೇರುವ ಸ್ಥಳಗಳಿಗೆ ಸಿಕ್ಕಸಿಕ್ಕವರನ್ನು ಅದರಲ್ಲೂ ಜೆ ಎನ್ ಯು ಶುಲ್ಕ ಹೆಚ್ಚಳ ವಿರೋಧಿಸುತ್ತಿರುವ ವಿದ್ಯಾರ್ಥಿಗಳಾದ ಗುರಿಯಾಗಿಸಿಕೊಂಡು ಮನಬಂದಂತೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.
ಜೆಎನ್ ಯು ಎಸ್ ಯು ಅಧ್ಯಕ್ಷೆ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಶಿಕ್ಷಕರಲ್ಲಿ ದಾಳಿ‌ ನಡೆಸಿದ್ದಾರೆ. ಗೂಂಡಾಗಿರಿಯಿಂದ ನಡೆದುಕೊಳ್ಳುತ್ತಿರುವವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.


Conclusion:ಪ್ರತಿಭಟನೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.