ETV Bharat / state

ಕಮಿಷನ್ ಕರ್ನಾಟಕ ಮಾಡಿರುವುದೇ ಬಿಜೆಪಿಯ ಸಾಧನೆ: ಆರ್.ಧ್ರುವನಾರಾಯಣ್

author img

By

Published : Jul 27, 2022, 1:15 PM IST

ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ- ಕರ್ನಾಟಕವನ್ನು ಕಮಿಷನ್​ ರಾಜ್ಯವಾಗಿ ಮಾಡಿದ್ದೇ ಸರ್ಕಾರದ ಸಾಧನೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ್ ಟೀಕೆ

KN_MYS_01_27_07_2022_ DRUVANARAYAN BYTE_7208092
ಆರ್.ಧ್ರುವನಾರಾಯಣ್

ಮೈಸೂರು: ಕರ್ನಾಟಕವನ್ನು ಕಮಿಷನ್ ಕರ್ನಾಟಕ ಹಾಗೂ ಕಮ್ಯುನಲ್ ಕರ್ನಾಟಕ ಮಾಡಿದ್ದೇ ಬಿಜೆಪಿಯ ಒಂದು ವರ್ಷದ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಟೀಕಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇಶದಲ್ಲೇ ನಂಬರ್ ಒನ್ ಭ್ರಷ್ಟ ಸರ್ಕಾರ ಆಗಿದ್ದು, ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದಲ್ಲಿ ಜನಪರ ಸರ್ಕಾರ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು, ಒಂದು ವರ್ಷದಲ್ಲಿ ರಾಜ್ಯವನ್ನು ಲೂಟಿ ಮಾಡಿದ್ದು, ರಾಜ್ಯದಲ್ಲಿ ಕೋಮು ವಿಷ ಬೀಜವನ್ನು ಬಿತ್ತಿರುವುದು ಬಸವರಾಜ ಬೊಮ್ಮಾಯಿ ಅವರ ಸಾಧನೆಯಾಗಿದೆ. ಅವರ ಕಾಲದಲ್ಲಿ ಪಿಎಸ್​ಐ ಹಗರಣ, ಉಪನ್ಯಾಸಕರ ನೇಮಕಾತಿಯಲ್ಲಿ ಹಗರಣ, ಬಳಕೆಯಾಗದ ಅನುದಾನ, ಅಭಿವೃದ್ಧಿ ಕುಂಠಿತ, ಕೇಂದ್ರ ಸರ್ಕಾರದಿಂದ ಸರಿಯಾದ ಸಮಯಕ್ಕೆ ಬಾರದ ಅನುದಾನದ ಹಣ, ಮಳೆ ಪರಿಹಾರ ನೀಡುವಲ್ಲಿ ವಿಫಲ. ಕ್ರಿಮಿನಲ್​ಗಳ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದಿದ್ದು, ಸಂಘ-ಪರಿವಾರಗಳಿಗೆ ಸರ್ಕಾರಿ ಭೂಮಿಯನ್ನು ನೀಡಿದ್ದು ಹಾಗೂ ಸರ್ಕಾರದ ವಿರುದ್ಧ ಮಾತನಾಡುವವರ ವಿರುದ್ಧ ಕೇಸ್ ಹಾಕಿದ್ದು ಇದೇ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕವನ್ನು ಮಾಡುವ ಬದಲು ಕಮಿಷನ್ ಸರ್ಕಾರವನ್ನು ಹಾಗೂ ಕಮ್ಯುನಲ್ ಕರ್ನಾಟಕವನ್ನು ಮಾಡಿದ್ದೇ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆಯಾಗಿದ್ದು, ಇದನ್ನು ಹೇಳಲು ಜನೋತ್ಸವ ಕಾರ್ಯಕ್ರಮ ಏಕೆ ಬೇಕಿತ್ತು ಎಂದು ಧ್ರುವನಾರಾಯಣ್ ಟೀಕಿಸಿದರು.

ಕೋಮುಗಲಭೆ ಹೆಚ್ಚಾಗಿದೆ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಾಗಿದ್ದು, ಇದಕ್ಕೆ ಪುತ್ತೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಕೊಲೆ ಪ್ರಕರಣವೇ ಸಾಕ್ಷಿಯಾಗಿದೆ. ಇಂತಹ ಪ್ರಕರಣಗಳ ಸಂಖ್ಯೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾಗಿವೆ. ಈ ರೀತಿಯ ಘಟನೆಗಳು ನಡೆಯಬಾರದು. ಈ ಘಟನೆಯ ಹಿಂದೆ ಯಾರೇ ಇದ್ದರು ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಾತ್ಯಾತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿದ್ದು, ಯಾವುದೇ ಒಂದು ಧರ್ಮ ಅಥವಾ ಜಾತಿಯ ಪರವಾಗಿ ಮಾತನಾಡುವ ಪ್ರಶ್ನೆಯೇ ಇಲ್ಲ. ಪ್ರವೀಣ್ ಹತ್ಯೆಯ ಘಟನೆಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.

ಶಾಸಕ ಜಮೀರ್ ಪ್ರಕರಣದಲ್ಲಿ ಜಾತಿ ವಿಚಾರ ತಂದಿರುವುದು ಸರಿಯಲ್ಲ. ಈ ರೀತಿ ಆಗಬಾರದು, ಮುಂದೆ ಈ ರೀತಿ ಮಾಡದಂತೆ ಜಮೀರ್​ಗೆ ವರಿಷ್ಠರಿಂದ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ ನಡುವೆ ಯಾವುದೇ ವೈಮನಸ್ಸು ಇಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಮಾಜಿ ಸಂಸದರು ಉತ್ತರಿಸಿದರು.

ಇದನ್ನೂ ಓದಿ: Praveen Nettaru murder case.. ಹಂತಕರ ಶೀಘ್ರ ಬಂಧನ- ಸಿಎಂ ಬೊಮ್ಮಾಯಿ

ಮೈಸೂರು: ಕರ್ನಾಟಕವನ್ನು ಕಮಿಷನ್ ಕರ್ನಾಟಕ ಹಾಗೂ ಕಮ್ಯುನಲ್ ಕರ್ನಾಟಕ ಮಾಡಿದ್ದೇ ಬಿಜೆಪಿಯ ಒಂದು ವರ್ಷದ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಟೀಕಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇಶದಲ್ಲೇ ನಂಬರ್ ಒನ್ ಭ್ರಷ್ಟ ಸರ್ಕಾರ ಆಗಿದ್ದು, ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದಲ್ಲಿ ಜನಪರ ಸರ್ಕಾರ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು, ಒಂದು ವರ್ಷದಲ್ಲಿ ರಾಜ್ಯವನ್ನು ಲೂಟಿ ಮಾಡಿದ್ದು, ರಾಜ್ಯದಲ್ಲಿ ಕೋಮು ವಿಷ ಬೀಜವನ್ನು ಬಿತ್ತಿರುವುದು ಬಸವರಾಜ ಬೊಮ್ಮಾಯಿ ಅವರ ಸಾಧನೆಯಾಗಿದೆ. ಅವರ ಕಾಲದಲ್ಲಿ ಪಿಎಸ್​ಐ ಹಗರಣ, ಉಪನ್ಯಾಸಕರ ನೇಮಕಾತಿಯಲ್ಲಿ ಹಗರಣ, ಬಳಕೆಯಾಗದ ಅನುದಾನ, ಅಭಿವೃದ್ಧಿ ಕುಂಠಿತ, ಕೇಂದ್ರ ಸರ್ಕಾರದಿಂದ ಸರಿಯಾದ ಸಮಯಕ್ಕೆ ಬಾರದ ಅನುದಾನದ ಹಣ, ಮಳೆ ಪರಿಹಾರ ನೀಡುವಲ್ಲಿ ವಿಫಲ. ಕ್ರಿಮಿನಲ್​ಗಳ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದಿದ್ದು, ಸಂಘ-ಪರಿವಾರಗಳಿಗೆ ಸರ್ಕಾರಿ ಭೂಮಿಯನ್ನು ನೀಡಿದ್ದು ಹಾಗೂ ಸರ್ಕಾರದ ವಿರುದ್ಧ ಮಾತನಾಡುವವರ ವಿರುದ್ಧ ಕೇಸ್ ಹಾಕಿದ್ದು ಇದೇ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕವನ್ನು ಮಾಡುವ ಬದಲು ಕಮಿಷನ್ ಸರ್ಕಾರವನ್ನು ಹಾಗೂ ಕಮ್ಯುನಲ್ ಕರ್ನಾಟಕವನ್ನು ಮಾಡಿದ್ದೇ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆಯಾಗಿದ್ದು, ಇದನ್ನು ಹೇಳಲು ಜನೋತ್ಸವ ಕಾರ್ಯಕ್ರಮ ಏಕೆ ಬೇಕಿತ್ತು ಎಂದು ಧ್ರುವನಾರಾಯಣ್ ಟೀಕಿಸಿದರು.

ಕೋಮುಗಲಭೆ ಹೆಚ್ಚಾಗಿದೆ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಾಗಿದ್ದು, ಇದಕ್ಕೆ ಪುತ್ತೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಕೊಲೆ ಪ್ರಕರಣವೇ ಸಾಕ್ಷಿಯಾಗಿದೆ. ಇಂತಹ ಪ್ರಕರಣಗಳ ಸಂಖ್ಯೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾಗಿವೆ. ಈ ರೀತಿಯ ಘಟನೆಗಳು ನಡೆಯಬಾರದು. ಈ ಘಟನೆಯ ಹಿಂದೆ ಯಾರೇ ಇದ್ದರು ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಾತ್ಯಾತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿದ್ದು, ಯಾವುದೇ ಒಂದು ಧರ್ಮ ಅಥವಾ ಜಾತಿಯ ಪರವಾಗಿ ಮಾತನಾಡುವ ಪ್ರಶ್ನೆಯೇ ಇಲ್ಲ. ಪ್ರವೀಣ್ ಹತ್ಯೆಯ ಘಟನೆಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.

ಶಾಸಕ ಜಮೀರ್ ಪ್ರಕರಣದಲ್ಲಿ ಜಾತಿ ವಿಚಾರ ತಂದಿರುವುದು ಸರಿಯಲ್ಲ. ಈ ರೀತಿ ಆಗಬಾರದು, ಮುಂದೆ ಈ ರೀತಿ ಮಾಡದಂತೆ ಜಮೀರ್​ಗೆ ವರಿಷ್ಠರಿಂದ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ ನಡುವೆ ಯಾವುದೇ ವೈಮನಸ್ಸು ಇಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಮಾಜಿ ಸಂಸದರು ಉತ್ತರಿಸಿದರು.

ಇದನ್ನೂ ಓದಿ: Praveen Nettaru murder case.. ಹಂತಕರ ಶೀಘ್ರ ಬಂಧನ- ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.