ETV Bharat / state

'ಲೋಕಾಯುಕ್ತ ಮರುಸ್ಥಾಪಿಸಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ'

author img

By

Published : Oct 12, 2021, 7:18 AM IST

ಇಡೀ ದೇಶಕ್ಕೆ ಮಾದರಿಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಸಿದ್ದರಾಮಯ್ಯನವರು ಮುಚ್ಚಿಸಿದ್ರು. ಆ ಸಂಸ್ಥೆಯನ್ನು ಮರುಸ್ಥಾಪಿಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.

H.Vishwanath
ಹೆಚ್.ವಿಶ್ವನಾಥ್

ಮೈಸೂರು: ಲೋಕಾಯುಕ್ತ ಸಂಸ್ಥೆಯನ್ನು ಪುನಃ ಸ್ಥಾಪಿಸಿ ಭ್ರಷ್ಟಾಚಾರ ಆರೋಪಗಳಿರುವ 326 ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕೆಂದು ಎಂಎಲ್​ಸಿ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

‘ಮಾಜಿ ಸಿಎಂಗಳಿಬ್ಬರೂ ಭ್ರಷ್ಟಾಚಾರದ ಪರವೇ?’

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 'ಐಟಿ ದಾಳಿಯನ್ನು ಯಡಿಯೂರಪ್ಪನವರೇ ಸ್ವಾಗತಿಸಿದ್ದಾರೆ. ಇಂಥ ಸಂದರ್ಭದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ. ಸಾಂವಿಧಾನಿಕ ಸಂಸ್ಥೆಗಳು ಭ್ರಷ್ಟಾಚಾರ ಆರೋಪದ ಮೇಲೆ ದಾಳಿ ನಡೆಸುವಾಗ ಈ ರೀತಿ ಟೀಕೆಗಳು ಸರಿಯಲ್ಲ. ಮಾಜಿ ಮುಖ್ಯಮಂತ್ರಿಗಳಿಬ್ಬರೂ ಭ್ರಷ್ಟಾಚಾರದ ಪರವಿದ್ದಾರೆಯೇ' ಎಂದು ಪ್ರಶ್ನಿಸಿದರು.

‘ಟೆಂಡರ್ ಕ್ಲಿಯರ್ ಬಗ್ಗೆ ನಾನೇ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೆ’

'ಬೃಹತ್ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಐಟಿ ಮತ್ತು ಇಡಿ ದಾಳಿಗಳು ನಡೆಯುತ್ತಿದ್ದು, ಇದರಿಂದ ರಾಜಕೀಯ ವಾಸನೆ ಬರುತ್ತಿದೆ ಎಂಬುದು ಸರಿಯಲ್ಲ. ಯಡಿಯೂರಪ್ಪನವರು ಅಧಿಕಾರದಿಂದ ಇಳಿಯುವ ಮುನ್ನ ನೀರಾವರಿ ನಿಗಮಗಳಿಗೆ ಸಂಬಂಧಿಸಿದ 20 ಸಾವಿರ ಕೋಟಿ ರೂ.ಗೂ ಅಧಿಕ ಟೆಂಡರ್​ ಕ್ಲಿಯರ್ ಮಾಡಿದ್ದರು. ಈ ಬಗ್ಗೆ ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೆ. ಆ ನಂತರ ಐಟಿ‌ ಮತ್ತು ಇಡಿ ದಾಳಿಗಳು ನಡೆದಿವೆ' ಎಂದು ಹೇಳಿದರು.

‘ಲೋಕಾಯುಕ್ತ ಸಂಸ್ಥೆ ಮುಚ್ಚಿಸಿದ್ದು ಸಿದ್ದರಾಮಯ್ಯ’

ಇಡೀ ರಾಷ್ಟ್ರಕ್ಕೆ ಮಾದರಿಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಸಿದ್ದರಾಮಯ್ಯ ಮುಚ್ಚಿಸಿದ್ರು. ಆ ಸಂಸ್ಥೆಯನ್ನು ಪುನಃ ಸ್ಥಾಪಿಸಿ, ಭ್ರಷ್ಟಾಚಾರ ಆರೋಪವಿರುವ 326 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ವಿಶ್ವನಾಥ್ ಆಗ್ರಹಿಸಿದರು.

‘ಸಿದ್ದರಾಮಯ್ಯಗೆ ಪುಕ್ಕಲು’

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶಕ್ಕೆ ನಿರಾಕರಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, 'ಇದು ಸಿದ್ದರಾಮಯ್ಯ ಅವರ ರಾಜಕೀಯ ಪುಕ್ಕಲುತನಕ್ಕೆ ಸಾಕ್ಷಿ. ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ.ದೇವೆೇಗೌಡ ಈ ದೇಶದ ಪ್ರಧಾನಿಯಾದರು. 3ನೇ ಬಾರಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಅವರು ಕಳೆದ 7 ವರ್ಷದಿಂದ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಹುದ್ದೆ ದೇಶದ ಪರಮೋಚ್ಛ ಸ್ಥಾನವಾಗಿದೆ. ನನಗೂ ಪ್ರಧಾನಿ ಹುದ್ದೆ ಕೊಟ್ಟರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಸೋನಿಯಾಗಾಂಧಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ದೇವೇಗೌಡ, ನರೇಂದ್ರ ಮೋದಿ ತೋರಿದ ಧೈರ್ಯ ಸಿದ್ದರಾಮಯ್ಯಗೆ ಇಲ್ಲ. ಸಿದ್ದರಾಮಯ್ಯ ಮತ್ತೇಕೆ ಮೋದಿ ವಿರುದ್ಧ ಗುಡುಗಬೇಕು?' ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದಿದ್ದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ

ಮೈಸೂರು: ಲೋಕಾಯುಕ್ತ ಸಂಸ್ಥೆಯನ್ನು ಪುನಃ ಸ್ಥಾಪಿಸಿ ಭ್ರಷ್ಟಾಚಾರ ಆರೋಪಗಳಿರುವ 326 ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕೆಂದು ಎಂಎಲ್​ಸಿ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

‘ಮಾಜಿ ಸಿಎಂಗಳಿಬ್ಬರೂ ಭ್ರಷ್ಟಾಚಾರದ ಪರವೇ?’

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 'ಐಟಿ ದಾಳಿಯನ್ನು ಯಡಿಯೂರಪ್ಪನವರೇ ಸ್ವಾಗತಿಸಿದ್ದಾರೆ. ಇಂಥ ಸಂದರ್ಭದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ. ಸಾಂವಿಧಾನಿಕ ಸಂಸ್ಥೆಗಳು ಭ್ರಷ್ಟಾಚಾರ ಆರೋಪದ ಮೇಲೆ ದಾಳಿ ನಡೆಸುವಾಗ ಈ ರೀತಿ ಟೀಕೆಗಳು ಸರಿಯಲ್ಲ. ಮಾಜಿ ಮುಖ್ಯಮಂತ್ರಿಗಳಿಬ್ಬರೂ ಭ್ರಷ್ಟಾಚಾರದ ಪರವಿದ್ದಾರೆಯೇ' ಎಂದು ಪ್ರಶ್ನಿಸಿದರು.

‘ಟೆಂಡರ್ ಕ್ಲಿಯರ್ ಬಗ್ಗೆ ನಾನೇ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೆ’

'ಬೃಹತ್ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಐಟಿ ಮತ್ತು ಇಡಿ ದಾಳಿಗಳು ನಡೆಯುತ್ತಿದ್ದು, ಇದರಿಂದ ರಾಜಕೀಯ ವಾಸನೆ ಬರುತ್ತಿದೆ ಎಂಬುದು ಸರಿಯಲ್ಲ. ಯಡಿಯೂರಪ್ಪನವರು ಅಧಿಕಾರದಿಂದ ಇಳಿಯುವ ಮುನ್ನ ನೀರಾವರಿ ನಿಗಮಗಳಿಗೆ ಸಂಬಂಧಿಸಿದ 20 ಸಾವಿರ ಕೋಟಿ ರೂ.ಗೂ ಅಧಿಕ ಟೆಂಡರ್​ ಕ್ಲಿಯರ್ ಮಾಡಿದ್ದರು. ಈ ಬಗ್ಗೆ ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೆ. ಆ ನಂತರ ಐಟಿ‌ ಮತ್ತು ಇಡಿ ದಾಳಿಗಳು ನಡೆದಿವೆ' ಎಂದು ಹೇಳಿದರು.

‘ಲೋಕಾಯುಕ್ತ ಸಂಸ್ಥೆ ಮುಚ್ಚಿಸಿದ್ದು ಸಿದ್ದರಾಮಯ್ಯ’

ಇಡೀ ರಾಷ್ಟ್ರಕ್ಕೆ ಮಾದರಿಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಸಿದ್ದರಾಮಯ್ಯ ಮುಚ್ಚಿಸಿದ್ರು. ಆ ಸಂಸ್ಥೆಯನ್ನು ಪುನಃ ಸ್ಥಾಪಿಸಿ, ಭ್ರಷ್ಟಾಚಾರ ಆರೋಪವಿರುವ 326 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ವಿಶ್ವನಾಥ್ ಆಗ್ರಹಿಸಿದರು.

‘ಸಿದ್ದರಾಮಯ್ಯಗೆ ಪುಕ್ಕಲು’

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶಕ್ಕೆ ನಿರಾಕರಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, 'ಇದು ಸಿದ್ದರಾಮಯ್ಯ ಅವರ ರಾಜಕೀಯ ಪುಕ್ಕಲುತನಕ್ಕೆ ಸಾಕ್ಷಿ. ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ.ದೇವೆೇಗೌಡ ಈ ದೇಶದ ಪ್ರಧಾನಿಯಾದರು. 3ನೇ ಬಾರಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಅವರು ಕಳೆದ 7 ವರ್ಷದಿಂದ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಹುದ್ದೆ ದೇಶದ ಪರಮೋಚ್ಛ ಸ್ಥಾನವಾಗಿದೆ. ನನಗೂ ಪ್ರಧಾನಿ ಹುದ್ದೆ ಕೊಟ್ಟರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆಂದು ಸೋನಿಯಾಗಾಂಧಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ದೇವೇಗೌಡ, ನರೇಂದ್ರ ಮೋದಿ ತೋರಿದ ಧೈರ್ಯ ಸಿದ್ದರಾಮಯ್ಯಗೆ ಇಲ್ಲ. ಸಿದ್ದರಾಮಯ್ಯ ಮತ್ತೇಕೆ ಮೋದಿ ವಿರುದ್ಧ ಗುಡುಗಬೇಕು?' ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದಿದ್ದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.