ETV Bharat / state

ವಿದ್ಯುತ್ ಬೆಲೆ ಏರಿಕೆ ಆದೇಶ ಮರುಪರಿಶೀಲಿಸಿ: ಸಿಎಂಗೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್

author img

By

Published : Jun 13, 2023, 8:06 PM IST

ಸಾರ್ವಜನಿಕರ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲನೆ ಮಾಡಬೇಕು. ಜನಸಾಮಾನ್ಯರಿಗೆ ಹೊರೆಯಾಗದ ರೀತಿ ವಿದ್ಯುತ್ ಬೆಲೆ ನಿಗದಿಗೊಳಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಸಿಎಂಗೆ ಪತ್ರ ಬರೆದಿದ್ದಾರೆ.

MLA Tanveer Seth appealed to the CM
ಶಾಸಕ ತನ್ವೀರ್ ಸೇಠ್ ಸಿಎಂಗೆ ಪತ್ರ ಬರೆದು ಮನವಿ

ಮೈಸೂರು: ವಿದ್ಯುತ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಬೆಲೆ ಏರಿಕೆಯನ್ನು ಪ್ರಸ್ತುತ ಸರ್ಕಾರ ಮಾಡಿದೆ ಎಂದು ತಿಳಿದುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲನೆ ಮಾಡಬೇಕು. ಜನಸಾಮಾನ್ಯರಿಗೆ ಹೊರೆಯಾಗದ ರೀತಿ ವಿದ್ಯುತ್ ಬೆಲೆಯನ್ನು ನಿಗದಿಗೊಳಿಸಬೇಕು ಮೈಸೂರು ನಗರದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದಾರೆ.

ಈಗಾಗಲೇ ಜನಸಾಮಾನ್ಯರು, ಹೋಟೆಲ್ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳು ವಿದ್ಯುತ್ ಬೆಲೆ ಏರಿಕೆ ಕುರಿತಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹೊಸ ಸರ್ಕಾರ ಮಾಡಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ಎಲ್ಲ ವಿದ್ಯುತ್ ನಿಗಮಗಳಲ್ಲಿ, 2023 ಏಪ್ರಿಲ್​​​ನಿಂದ ಪೂರ್ವ ಅನ್ವಯವಾಗುವಂತೆ ವಿದ್ಯುತ್ ದರಗಳನ್ನು ಏರಿಕೆ ಮಾಡಲಾಗಿದೆ. ಈಗಾಗಲೇ ಹಿಂದಿನ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಉಚಿತವಾಗಿ 200 ಯುನಿಿಟ್ ವಿದ್ಯುತ್ ನೀಡಿ, ಇದನ್ನು ಬೆಲೆ ಏರಿಕೆ ಮೂಲಕ ಕಿತ್ತುಕೊಂಡಂತಾಗಿದೆ ಎಂಬ ಭಾವನೆ ಜನರಲ್ಲಿದೆ.

ಇದರಿಂದ ಕಾಂಗ್ರೆಸ್ ಪಕ್ಷದ ಇಮೇಜಿಗೆ ಧಕ್ಕೆ ಆಗುತ್ತಿದೆ. ಇದರ ಬಗ್ಗೆ ಹಾಗೂ ಜನಸಾಮಾನ್ಯರಿಗೆ ವಿದ್ಯುತ್ ಬೆಲೆ ಏರಿಕೆಯನ್ನು ಈಗಿನ ಸರ್ಕಾರ ಮಾಡಿದೆ ಎಂಬ ಭಾವನೆ ಉಂಟಾಗುತ್ತಿದೆ. ಇದರಿಂದ ಪಕ್ಷಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರುಪರಿಶೀಲಿಸಿ, ಜನರಿಗೆ ತೊಂದರೆ ಆಗದ ರೀತಿ ಜಾರಿ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಮಂತ್ರಿ ತನ್ವೀರ್ ಸೇಠ್ ಒತ್ತಾಯಿಸಿದ್ದಾರೆ.

ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ಕೈಗಾರಿಕಾ ಹಾಗೂ ವಾಣಿಜ್ಯೋದ್ಯಮ ಸಂಸ್ಥೆ ನೇತೃತ್ವದಲ್ಲಿ ಹಲವು ಉದ್ಯಮಿಗಳು ಬೆಳಗಾವಿಯಲ್ಲಿ ಇಂದು ಮೌನ ಮೆರವಣಿಗೆ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದರು. ತಕ್ಷಣವೇ ವಿದ್ಯುತ್ ದರ ಇಳಿಸಿ, ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ನಾವೆಲ್ಲ ಮಹಾರಾಷ್ಟ್ರಕ್ಕೆ ವಲಸೆ ಹೋಗುವುದು ಅನಿವಾರ್ಯ ಆಗುತ್ತದೆ ಎಂದು ಉದ್ಯಮಿಗಳು ಎಚ್ಚರಿಸಿದರು. ಈ ವೇಳೆ ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಉದ್ಯಮಭಾಗ, ಮಚ್ಛೆ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ ನೂರಾರು ಉದ್ಯಮಿಗಳು ಮೌನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಹೇಮಂತ ಪೋರವಾಲ್, ಉದ್ಯಮಿಗಳಾದ ಡಾ‌. ಎಚ್. ಬಿ. ರಾಜಶೇಖರಪ್ಪ, ಮಹಾದೇವ ಚೌಗುಲೆ, ಆನಂದ ದೇಸಾಯಿ, ಪ್ರಭಾಕರ ನಾಗರಮುನ್ನೋಳಿ, ಸಂದೀಪ ಬಾಗೇವಾಡಿ, ಸ್ವಪ್ನೀಲ್ ಶಹಾ ಸೇರಿ ಮತ್ತಿತರರು ಇದ್ದರು.

ಇದನ್ನೂಓದಿ: ಉಚಿತ ವಿದ್ಯುತ್ ಗ್ಯಾರಂಟಿ ಬರೆ ಮಧ್ಯೆ ಎಸ್ಕಾಂಗಳಿಗೆ ವಿದ್ಯುತ್ ಖರೀದಿ ಹೊರೆ

ಮೈಸೂರು: ವಿದ್ಯುತ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಬೆಲೆ ಏರಿಕೆಯನ್ನು ಪ್ರಸ್ತುತ ಸರ್ಕಾರ ಮಾಡಿದೆ ಎಂದು ತಿಳಿದುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲನೆ ಮಾಡಬೇಕು. ಜನಸಾಮಾನ್ಯರಿಗೆ ಹೊರೆಯಾಗದ ರೀತಿ ವಿದ್ಯುತ್ ಬೆಲೆಯನ್ನು ನಿಗದಿಗೊಳಿಸಬೇಕು ಮೈಸೂರು ನಗರದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದಾರೆ.

ಈಗಾಗಲೇ ಜನಸಾಮಾನ್ಯರು, ಹೋಟೆಲ್ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳು ವಿದ್ಯುತ್ ಬೆಲೆ ಏರಿಕೆ ಕುರಿತಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹೊಸ ಸರ್ಕಾರ ಮಾಡಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ಎಲ್ಲ ವಿದ್ಯುತ್ ನಿಗಮಗಳಲ್ಲಿ, 2023 ಏಪ್ರಿಲ್​​​ನಿಂದ ಪೂರ್ವ ಅನ್ವಯವಾಗುವಂತೆ ವಿದ್ಯುತ್ ದರಗಳನ್ನು ಏರಿಕೆ ಮಾಡಲಾಗಿದೆ. ಈಗಾಗಲೇ ಹಿಂದಿನ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಉಚಿತವಾಗಿ 200 ಯುನಿಿಟ್ ವಿದ್ಯುತ್ ನೀಡಿ, ಇದನ್ನು ಬೆಲೆ ಏರಿಕೆ ಮೂಲಕ ಕಿತ್ತುಕೊಂಡಂತಾಗಿದೆ ಎಂಬ ಭಾವನೆ ಜನರಲ್ಲಿದೆ.

ಇದರಿಂದ ಕಾಂಗ್ರೆಸ್ ಪಕ್ಷದ ಇಮೇಜಿಗೆ ಧಕ್ಕೆ ಆಗುತ್ತಿದೆ. ಇದರ ಬಗ್ಗೆ ಹಾಗೂ ಜನಸಾಮಾನ್ಯರಿಗೆ ವಿದ್ಯುತ್ ಬೆಲೆ ಏರಿಕೆಯನ್ನು ಈಗಿನ ಸರ್ಕಾರ ಮಾಡಿದೆ ಎಂಬ ಭಾವನೆ ಉಂಟಾಗುತ್ತಿದೆ. ಇದರಿಂದ ಪಕ್ಷಕ್ಕೆ ಧಕ್ಕೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರುಪರಿಶೀಲಿಸಿ, ಜನರಿಗೆ ತೊಂದರೆ ಆಗದ ರೀತಿ ಜಾರಿ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಮಂತ್ರಿ ತನ್ವೀರ್ ಸೇಠ್ ಒತ್ತಾಯಿಸಿದ್ದಾರೆ.

ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ಕೈಗಾರಿಕಾ ಹಾಗೂ ವಾಣಿಜ್ಯೋದ್ಯಮ ಸಂಸ್ಥೆ ನೇತೃತ್ವದಲ್ಲಿ ಹಲವು ಉದ್ಯಮಿಗಳು ಬೆಳಗಾವಿಯಲ್ಲಿ ಇಂದು ಮೌನ ಮೆರವಣಿಗೆ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದರು. ತಕ್ಷಣವೇ ವಿದ್ಯುತ್ ದರ ಇಳಿಸಿ, ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ನಾವೆಲ್ಲ ಮಹಾರಾಷ್ಟ್ರಕ್ಕೆ ವಲಸೆ ಹೋಗುವುದು ಅನಿವಾರ್ಯ ಆಗುತ್ತದೆ ಎಂದು ಉದ್ಯಮಿಗಳು ಎಚ್ಚರಿಸಿದರು. ಈ ವೇಳೆ ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಉದ್ಯಮಭಾಗ, ಮಚ್ಛೆ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ ನೂರಾರು ಉದ್ಯಮಿಗಳು ಮೌನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಹೇಮಂತ ಪೋರವಾಲ್, ಉದ್ಯಮಿಗಳಾದ ಡಾ‌. ಎಚ್. ಬಿ. ರಾಜಶೇಖರಪ್ಪ, ಮಹಾದೇವ ಚೌಗುಲೆ, ಆನಂದ ದೇಸಾಯಿ, ಪ್ರಭಾಕರ ನಾಗರಮುನ್ನೋಳಿ, ಸಂದೀಪ ಬಾಗೇವಾಡಿ, ಸ್ವಪ್ನೀಲ್ ಶಹಾ ಸೇರಿ ಮತ್ತಿತರರು ಇದ್ದರು.

ಇದನ್ನೂಓದಿ: ಉಚಿತ ವಿದ್ಯುತ್ ಗ್ಯಾರಂಟಿ ಬರೆ ಮಧ್ಯೆ ಎಸ್ಕಾಂಗಳಿಗೆ ವಿದ್ಯುತ್ ಖರೀದಿ ಹೊರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.