ಮೈಸೂರು: ಹೃದಯಾಘಾತಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನ ತಮ್ಮ ಕಾರಿನಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಮಾನವೀಯತೆ ಮೆರೆದಿದ್ದಾರೆ.
ಕೆ.ಆರ್.ನಗರ ತಾಲೂಕಿನ ಜಪದಕಟ್ಟೆಯಲ್ಲಿ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮದಲ್ಲಿ ವ್ಯಕ್ತಿವೋರ್ವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕಾರ್ಯಕ್ರಮದಲ್ಲಿದ್ದ ಸಾ.ರಾ.ಮಹೇಶ್ ಅವರು ಕೂಡಲೇ ತಮ್ಮ ಕಾರಿನಲ್ಲಿಯೇ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಜೀವ ಉಳಿಸಿದ್ದಾರೆ.
ಹೃದಯಾಘಾತದಿಂದ ಒದ್ಡಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಸಾ.ರಾ.ಮಹೇಶ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.