ಮೈಸೂರು : ಮೂರು ದಿನಗಳ ಕಾಲ ತವರು ಜಿಲ್ಲೆಯ ಪ್ರವಾಸದಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ ಸ್ನೇಹಿತರ ಜೊತೆ ವಾಯು ವಿಹಾರ ನಡೆಸಿ , ತಮ್ಮ ಮನೆಯಲ್ಲಿ ಪಾಲಿಕೆ ಸದಸ್ಯರ ಸಭೆ ನಡೆಸಿದರು.
![siddaramaiah walking with closed ones in mysore](https://etvbharatimages.akamaized.net/etvbharat/prod-images/kn-mys-01-siddaramayya-news-7208092_20022021104025_2002f_1613797825_392.jpg)
ಫೆ. 24 ರಂದು ಮೈಸೂರು ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ನಗರ ಪಾಲಿಕೆ ಸದಸ್ಯರು ಭೇಟಿ ಮಾಡಿ ಚರ್ಚಿಸಿದರು. ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಸುವ ಬಗ್ಗೆ ಪಾಲಿಕೆ ಸದಸ್ಯರ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಯಾರ ಜೊತೆಯೂ ಮೈತ್ರಿ ಇಲ್ಲ ಎಂದು ಸಿದ್ದರಾಮಯ್ಯನವರು ಹೇಳಿದ್ದರು. ಆದರೆ, ಮೈತ್ರಿ ಮುಂದುವರೆಸಲು ಶಾಸಕ ತನ್ವೀರ್ ಸೇಠ್ ಸೇರಿ ಸ್ಥಳೀಯ ಮುಖಂಡರು ಒಲವು ತೋರಿದ್ದಾರೆ.
ಈ ವೇಳೆ ಮಾಜಿ ಸಚಿವರಾದ ಜಮೀರ್ ಅಹಮ್ಮದ್, ಶಾಸಕರಾದ ತನ್ವೀರ್ ಸೇಠ್, ಧರ್ಮಸೇನ್, ಪಕ್ಷದ ಮೈಸೂರು ಘಟಕದ ಅಧ್ಯಕ್ಷ ಮೂರ್ತಿ ಮತ್ತಿತರರ ಉಪಸ್ಥಿತಿ ಇದ್ದರು.