ETV Bharat / state

ಕೊರೊನಾ ಎಫೆಕ್ಟ್: ಇಸ್ಕಾನ್​​ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸರಳ‌ ಪೂಜೆ - Mysore Srikrishna Janmashtami ISKCON News

ರಾಧೆ-ಕೃಷ್ಣ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ, ಬೆಳಗ್ಗೆಯಿಂದ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್​​ ನೀಡಿ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.

ಇಸ್ಕಾನ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸರಳ‌ ಪೂಜೆ
ಇಸ್ಕಾನ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸರಳ‌ ಪೂಜೆ
author img

By

Published : Aug 11, 2020, 1:56 PM IST

ಮೈಸೂರು: ಕೊರೊನಾ ಅಬ್ಬರಕ್ಕೆ ಬೆರಳೆಣಿಕೆಯಷ್ಟೇ ಭಕ್ತರ ಸಮ್ಮುಖದಲ್ಲಿ ಜಯನಗರದಲ್ಲಿರುವ ಇಸ್ಕಾನ್ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.

ರಾಧೆ-ಕೃಷ್ಣ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿ, ಬೆಳಗ್ಗೆಯಿಂದ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್​​ ನೀಡಿ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.

ಇಸ್ಕಾನ್​​ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸರಳ‌ ಪೂಜೆ

ಇಸ್ಕಾನ್ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಮಂಗಳಾರತಿ ಮಾತ್ರ ನೀಡಲಾಗಿತ್ತು. ತೀರ್ಥ ಹಾಗೂ ಪ್ರಸಾದ ವಿತರಣೆಗೆ ಬ್ರೇಕ್ ನೀಡಲಾಗಿದೆ. ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಕೊರೊನಾ ಭಯದಿಂದ ಭಕ್ತಾದಿಗಳ ಸಂಖ್ಯೆ ವಿರಳವಾಗಿತ್ತು. ಮಕ್ಕಳು ಹಾಗೂ ವೃದ್ಧರಿಗೆ ಪ್ರವೇಶ ನಿಷೇಧಿಸಲಾಗಿದ್ದು,‌ ಪೂಜೆ ವೀಕ್ಷಣೆಗೆ ಆನ್​ಲೈನ್ ವ್ಯವಸ್ಥೆ ಮಾಡಲಾಗಿತ್ತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.