ETV Bharat / state

ಸೋನಿಯಾ, ರಾಹುಲ್ ಗಾಂಧಿಗೆ ಎಸ್​ಪಿಜಿ ಹಿಂಪಡೆದ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

author img

By

Published : Nov 9, 2019, 12:04 AM IST

Updated : Nov 9, 2019, 7:43 AM IST

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಎಸ್​ಪಿಜಿ ಭದ್ರತಾ ಪಡೆಯನ್ನುಕೇಂದ್ರ ಸರ್ಕಾರ ಹಿಂಪಡೆದಿದ್ದು, ಇದರ ವಿರುದ್ಧ ಗುಡುಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕೂಡಲೇ ಅವರಿಗೆ ನೀಡಿದ್ದ ಭದ್ರತೆಯನ್ನು ವಾಪಾಸ್​ ನೀಡಬೇಕು ಇಲ್ಲವಾದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Siddaramaiah, ಸಿದ್ದರಾಮಯ್ಯ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನೀಡಿರುವ ಎಸ್​ಪಿಜಿ (ಸ್ಪೆಷಲ್​ ಪ್ರೊಟೆಕ್ಷನ್​ ಗ್ರೂಪ್​) ಭದ್ರತಾ ಪಡೆಯನ್ನು ಉದ್ದೇಶಪೂರ್ವಕವಾಗಿ ಹಿಂಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ನಗರದ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ಸೂಚನೆ ನೀಡದೆ ಏಕಾಏಕಿ ಎಸ್​ಪಿಜಿ ಪಡೆಯನ್ನು ಹಿಂಪಡೆದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಇಂದಿರಾಗಾಂಧಿ ಅವರು ಆಪರೇಷನ್ ಬ್ಲೂಸ್ಟಾರ್ ಮಾಡದೆ ಇದ್ದಿದ್ದರೆ ಅವರ ಹತ್ಯೆಯಾಗುತ್ತಿರಲಿಲ್ಲ. ರಾಜೀವ್​ ಗಾಂಧಿ ಅವರ ಹತ್ಯೆಯೂ ನಡೆಯುತ್ತಿರಲಿಲ್ಲ. ನೆಹರೂ ಕುಟುಂಬದ ಮೇಲಿನ ದ್ವೇಷದಿಂದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು‌ ಕಿಡಿಕಾರಿದರು.

ರಾಹುಲ್ ಗಾಂಧಿ ಅವರು ಎಸ್​ಪಿಜಿ ಪಡೆ ಬಿಟ್ಟು ಎಲ್ಲಿಯೂ ಹೋಗಿಲ್ಲ. ವೈಯಕ್ತಿಕ ಕಾರಣಗಳಿಂದ ಅವರಿಗೆ ಈ ರೀತಿ ಮಾಡುವುದು ತಪ್ಪು. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ. ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೀನಿ ಎಂದರು.

ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಅವರಿಗೆ ಎಸ್​ಪಿಜಿ ಭದ್ರತೆ ವಾಪಸ್ ನೀಡದೆ ಹೋದರೆ ಉಗ್ರ ಹೋರಾಟ ಮಾಡಲಾಗುವುದು. ಇದರ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನೀಡಿರುವ ಎಸ್​ಪಿಜಿ (ಸ್ಪೆಷಲ್​ ಪ್ರೊಟೆಕ್ಷನ್​ ಗ್ರೂಪ್​) ಭದ್ರತಾ ಪಡೆಯನ್ನು ಉದ್ದೇಶಪೂರ್ವಕವಾಗಿ ಹಿಂಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ನಗರದ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ಸೂಚನೆ ನೀಡದೆ ಏಕಾಏಕಿ ಎಸ್​ಪಿಜಿ ಪಡೆಯನ್ನು ಹಿಂಪಡೆದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಇಂದಿರಾಗಾಂಧಿ ಅವರು ಆಪರೇಷನ್ ಬ್ಲೂಸ್ಟಾರ್ ಮಾಡದೆ ಇದ್ದಿದ್ದರೆ ಅವರ ಹತ್ಯೆಯಾಗುತ್ತಿರಲಿಲ್ಲ. ರಾಜೀವ್​ ಗಾಂಧಿ ಅವರ ಹತ್ಯೆಯೂ ನಡೆಯುತ್ತಿರಲಿಲ್ಲ. ನೆಹರೂ ಕುಟುಂಬದ ಮೇಲಿನ ದ್ವೇಷದಿಂದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು‌ ಕಿಡಿಕಾರಿದರು.

ರಾಹುಲ್ ಗಾಂಧಿ ಅವರು ಎಸ್​ಪಿಜಿ ಪಡೆ ಬಿಟ್ಟು ಎಲ್ಲಿಯೂ ಹೋಗಿಲ್ಲ. ವೈಯಕ್ತಿಕ ಕಾರಣಗಳಿಂದ ಅವರಿಗೆ ಈ ರೀತಿ ಮಾಡುವುದು ತಪ್ಪು. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ. ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೀನಿ ಎಂದರು.

ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಅವರಿಗೆ ಎಸ್​ಪಿಜಿ ಭದ್ರತೆ ವಾಪಸ್ ನೀಡದೆ ಹೋದರೆ ಉಗ್ರ ಹೋರಾಟ ಮಾಡಲಾಗುವುದು. ಇದರ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Intro:ಸಿದ್ದರಾಮಯ್ಯ ಪ್ರೆಸ್ ಮೀಟ್


Body:ಸಿದ್ದರಾಮಯ್ಯ ಪ್ರೆಸ್ ಮೀಟ್


Conclusion:ಸೋನಿಯಾಗಾಂಧಿ,ರಾಹುಲ್ ಗಾಂಧಿಗೆ ಎಸ್ ಪಿಜಿ ಹಿಂಪಡೆದ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಮೈಸೂರು: ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನೀಡಿರುವ ಎಸ್ ಪಿಜಿ ಭದ್ರತೆ ಪಡೆಯನ್ನು ಉದ್ದೇಶಪೂರ್ವಕವಾಗಿ ಹಿಂಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಮೈಸೂರಿನ‌ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಕರೆದು ಮಾತನಾಡಿದ ಅವರು,ಕೇಂದ್ರ ಸರ್ಕಾರ ಯಾವುದೇ ಸೂಚನೆ ನೀಡಿದ ಏಕಾಏಕಿ ಎಸ್ ಪಿಜಿ ಪಡೆಯನ್ನು ಹಿಂಪಡೆದು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇಂದಿರಾಗಾಂಧಿ ಅವರು ಆಪರೇಷನ್ ಬ್ಲೂಸ್ಟರ್ ಮಾಡದೇ ಇದ್ದರೆ ಅವರ ಹತ್ಯೆಯಾಗುತ್ತಿರಲಿಲ್ಲ.ರಾಜೀವ್ ಗಾಂಧಿ ಅವರ ಹತ್ಯೆವೂ ನಡೆಯುತ್ತಿರಲಿಲ್ಲ. ನೆಹರು ಕುಟುಂಬದ ಮೇಲಿನ ದ್ವೇಷದಿಂದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಮಾಡುತ್ತಿದೆ ಎಂದು‌ ಕಿಡಿಕಾರಿದರು.
ರಾಹುಲ್ ಗಾಂಧಿ ಅವರು ಎಸ್ ಪಿಜಿ ಪಡೆ ಬಿಟ್ಟು ಎಲ್ಲಿಯೂ ಹೋಗಿಲ್ಲ. ವೈಯಕ್ತಿಕ ಕಾರಣಗಳಿಂದ ಅವರಿಗೆ ಈ ರೀತಿ ಮಾಡುವುದು ತಪ್ಪು. ಏನಾದರು ಹೆಚ್ಚು ಕಡಿಮೆಯಾದರೆ ಯಾರು ಹೊಣೆ.ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೀನಿ ಎಂದರು.
ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಅವರಿಗೆ ಎಸ್ ಪಿಜಿ ಭದ್ರತೆ ವಾಪಸ್ ನೀಡದೇ ಹೋದರೆ ಉಗ್ರ ಹೋರಾಟ ಮಾಡಲಾಗುವುದು.ಇದರ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಚ್ಚರಿಸಿದರು.
Last Updated : Nov 9, 2019, 7:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.