ETV Bharat / state

ಎಪಿಎಂಸಿ ಭೋಜನ ಮಂದಿರಕ್ಕೆ ಖಾಯಂ ಜಾಗ: ಸಚಿವ ಎಸ್.ಟಿ.ಸೋಮಶೇಖರ್

author img

By

Published : May 8, 2020, 11:49 AM IST

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್​ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಇಲ್ಲಿ ಕ್ಯಾಂಟೀನ್ ನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ? ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ.

S.T.Somashekar
ಎಸ್ ಟಿ ಸೋಮಶೇಖರ್

ಮೈಸೂರು: ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮೈಸೂರು ಧಾನ್ಯ ವರ್ತಕರ ಸಂಘದ ವತಿಯಿಂದ ರೈತರಿಗಾಗಿ ಪ್ರಾರಂಭಿಸಲಾಗುತ್ತಿರುವ ಭೋಜನಾಯವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಉದ್ಘಾಟಿಸಿದರು.

S.T.Somashekar inaugurate APMC
ಭೋಜನ ಮಂದಿರವನ್ನು ಉದ್ಘಾಟಿಸಿದ ಸಚಿವರು

ರೈತರ ಕ್ಯಾಂಟೀನ್ ಆದ ಭೋಜನ ಮಂದಿರವನ್ನು ಪರಿಶೀಲಿಸಿದ ಸಚಿವದ್ವಯರು, ಆಹಾರ ತಯಾರಿಕೆಯ ಶುಚಿತ್ವ ಗಮನಿಸಿ, ರೈತರಿಗೆ ಸ್ವತಃ ಉಪಾಹಾರ ಬಡಿಸಿದರು.

ನಂತರ ಮಾತನಾಡಿದ ಸಚಿವ ಸೋಮಶೇಖರ್, ಎಪಿಎಂಸಿ ಭೇಟಿ ವೇಳೆ ಕೋಲ್ಡ್ ಸ್ಟೋರೇಜ್​ಗಾಗಿ ಅನುಮತಿ ಕೋರಲಾಗಿತ್ತು. ಅದಕ್ಕೂ ಈಗ ಅನುಮತಿ ನೀಡಲಾಗಿದೆ. ಎಪಿಎಂಸಿ ಅಭಿವೃದ್ಧಿಗೆ ಅನುದಾನ ಬೇಕೆಂದು ಸ್ಥಳೀಯ ಶಾಸಕ ಬಳಿ ಹಲವರು ಕೇಳಿಕೊಂಡಿದ್ದರು. ಅದಕ್ಕಾಗಿ ಸರ್ಕಾರದಿಂದ 4 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್​ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಇಲ್ಲಿ ಕ್ಯಾಂಟೀನ್​ನ ನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದು ಭರವಸೆ ನೀಡಿದರು.

ಮೃಗಾಲಯಕ್ಕೆ ಸುಧಾಮೂರ್ತಿ ಅವರಿಂದ 20 ಲಕ್ಷ:

ಮೃಗಾಲಯಕ್ಕೆ ದೇಣಿಗೆ ನೀಡುವ ಸಂಬಂಧ ಇನ್ಫೋಸಿಸ್ ಫೌಂಡೇಶನ್​ನ ಸುಧಾಮೂರ್ತಿ ಅವರಿಗೆ ಪತ್ರ ಬರೆದಿದ್ದೇನೆ. ಅವರೂ ಸಹ ಅದಕ್ಕೆ ಪ್ರತಿಯಾಗಿ ಪತ್ರ ಬರೆದು 20 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದಾರೆ. ಜೊತೆಗೆ ಅನಿವಾಸಿ ಭಾರತೀಯರು ಹಾಗೂ ಅಕ್ಕ ಸಂಸ್ಥೆಗೂ ಕೇಳಿಕೊಂಡಿದ್ದು, ಅವರಿಂದಲೂ ಕೊಡುಗೆ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮೈಸೂರು: ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮೈಸೂರು ಧಾನ್ಯ ವರ್ತಕರ ಸಂಘದ ವತಿಯಿಂದ ರೈತರಿಗಾಗಿ ಪ್ರಾರಂಭಿಸಲಾಗುತ್ತಿರುವ ಭೋಜನಾಯವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಉದ್ಘಾಟಿಸಿದರು.

S.T.Somashekar inaugurate APMC
ಭೋಜನ ಮಂದಿರವನ್ನು ಉದ್ಘಾಟಿಸಿದ ಸಚಿವರು

ರೈತರ ಕ್ಯಾಂಟೀನ್ ಆದ ಭೋಜನ ಮಂದಿರವನ್ನು ಪರಿಶೀಲಿಸಿದ ಸಚಿವದ್ವಯರು, ಆಹಾರ ತಯಾರಿಕೆಯ ಶುಚಿತ್ವ ಗಮನಿಸಿ, ರೈತರಿಗೆ ಸ್ವತಃ ಉಪಾಹಾರ ಬಡಿಸಿದರು.

ನಂತರ ಮಾತನಾಡಿದ ಸಚಿವ ಸೋಮಶೇಖರ್, ಎಪಿಎಂಸಿ ಭೇಟಿ ವೇಳೆ ಕೋಲ್ಡ್ ಸ್ಟೋರೇಜ್​ಗಾಗಿ ಅನುಮತಿ ಕೋರಲಾಗಿತ್ತು. ಅದಕ್ಕೂ ಈಗ ಅನುಮತಿ ನೀಡಲಾಗಿದೆ. ಎಪಿಎಂಸಿ ಅಭಿವೃದ್ಧಿಗೆ ಅನುದಾನ ಬೇಕೆಂದು ಸ್ಥಳೀಯ ಶಾಸಕ ಬಳಿ ಹಲವರು ಕೇಳಿಕೊಂಡಿದ್ದರು. ಅದಕ್ಕಾಗಿ ಸರ್ಕಾರದಿಂದ 4 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್​ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಇಲ್ಲಿ ಕ್ಯಾಂಟೀನ್​ನ ನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದು ಭರವಸೆ ನೀಡಿದರು.

ಮೃಗಾಲಯಕ್ಕೆ ಸುಧಾಮೂರ್ತಿ ಅವರಿಂದ 20 ಲಕ್ಷ:

ಮೃಗಾಲಯಕ್ಕೆ ದೇಣಿಗೆ ನೀಡುವ ಸಂಬಂಧ ಇನ್ಫೋಸಿಸ್ ಫೌಂಡೇಶನ್​ನ ಸುಧಾಮೂರ್ತಿ ಅವರಿಗೆ ಪತ್ರ ಬರೆದಿದ್ದೇನೆ. ಅವರೂ ಸಹ ಅದಕ್ಕೆ ಪ್ರತಿಯಾಗಿ ಪತ್ರ ಬರೆದು 20 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದಾರೆ. ಜೊತೆಗೆ ಅನಿವಾಸಿ ಭಾರತೀಯರು ಹಾಗೂ ಅಕ್ಕ ಸಂಸ್ಥೆಗೂ ಕೇಳಿಕೊಂಡಿದ್ದು, ಅವರಿಂದಲೂ ಕೊಡುಗೆ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.