ETV Bharat / state

ಸರ್ವೇ ಮಾಡಲು ಮನೀಶ್ ಮೌದ್ಗಿಲ್​ಗೆ ಅಧಿಕಾರ ಕೊಟ್ಟವರು‌ ಯಾರು?: ಸಚಿವ ಸೋಮಶೇಖರ್

ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡಬಾರದು. ಈಗಾಗಲೇ ಪ್ರಾದೇಶಿಕ ಆಯುಕ್ತರು ಸರ್ವೇ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೆ, ಅದೇ ಸ್ಥಳವನ್ನು ಮತ್ತೆ ಯಾಕೆ ಸರ್ವೇ ಮಾಡಬೇಕು ಎಂದು ಭೂ ಅಕ್ರಮ ಆರೋಪದ ಮರು ತನಿಖೆ ಸಚಿವ ಎಸ್.ಟಿ. ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

author img

By

Published : Sep 5, 2021, 12:20 PM IST

ST Somashekhar
ಸೋಮಶೇಖರ್

ಮೈಸೂರು: ಈಗಾಗಲೇ ಸರ್ವೇ ಮಾಡಿದ ಸ್ಥಳವನ್ನು ಮತ್ತೆ ಸರ್ವೇ ಮಾಡಲು ಮನೀಶ್ ಮೌದ್ಗಿಲ್​ಗೆ ಅಧಿಕಾರ ಕೊಟ್ಟವರು ಎಂದು ಪ್ರಶ್ನಿಸುವ ಮೂಲಕ ಶಾಸಕ ಸಾ.ರಾ‌. ಮಹೇಶ್ ಪರವಾಗಿ ಸಚಿವ ಎಸ್.ಟಿ. ಸೋಮಶೇಖರ್ ಬ್ಯಾಟಿಂಗ್ ಮಾಡಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಸರಸ್ವತಿಪುರಂನಲ್ಲಿರುವ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ಥಳಿಗೆ ಮಾರ್ಲಾಪಣೆ ಮಾಡಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡಬಾರದು. ಈಗಾಗಲೇ ಪ್ರಾದೇಶಿಕ ಆಯುಕ್ತರು ಸರ್ವೇ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೆ, ಅದೇ ಸ್ಥಳವನ್ನು ಮತ್ತೆ ಯಾಕೆ ಸರ್ವೇ ಮಾಡಬೇಕು‌. ರಾಜಕಾರಣಿಗಳು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅಪ್ರಾಮಾಣಿಕರು ಎಂದು ಬಿಂಬಿಸಲಾಗುತ್ತೆ. ಅಧಿಕಾರಿಗಳು ರಾಜಕಾರಣಿಗಳನ್ನು ಪ್ರಶ್ನಿಸಿದರೆ ಪ್ರಾಮಾಣಿಕರೆಂದು ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್

ಇದನ್ನೂ ಓದಿ: ಭೂ ಅಕ್ರಮ ಆರೋಪ: ಮರು ತನಿಖೆ ಮಾಡುವಂತೆ ಆದೇಶ ಹೊರಡಿಸಿದ ಸರ್ವೇ ಇಲಾಖೆ

ಈ ಬಾರಿ ಸರಳ ದಸರಾ:

ಕೊರೊನಾ ಮೂರನೇ ಅಲೆ ನೋಡಿಕೊಂಡು ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು‌‌. ಅದ್ಧೂರಿ ದಸರಾ ಮಾಡುವುದಿಲ್ಲ, ಸರಳವಾಗಿ ದಸರಾ ಆಚರಣೆ ಮಾಡುತ್ತೇವೆ. ಈಗಾಗಲೇ ಮುಖ್ಯಮಂತ್ರಿಗಳು ಸಭೆ ಮಾಡಿ ಮಾಹಿತಿ ನೀಡಿದ್ದಾರೆ. ಮೈಸೂರು, ಚಾಮರಾಜನಗರ, ಶ್ರೀರಂಗಪಟ್ಟಣ ದಸರಾಗೆ 6 ಕೋಟಿ ರೂ. ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಸೋಮಶೇಖರ್​ ತಿಳಿಸಿದರು.

ಮೈಸೂರು: ಈಗಾಗಲೇ ಸರ್ವೇ ಮಾಡಿದ ಸ್ಥಳವನ್ನು ಮತ್ತೆ ಸರ್ವೇ ಮಾಡಲು ಮನೀಶ್ ಮೌದ್ಗಿಲ್​ಗೆ ಅಧಿಕಾರ ಕೊಟ್ಟವರು ಎಂದು ಪ್ರಶ್ನಿಸುವ ಮೂಲಕ ಶಾಸಕ ಸಾ.ರಾ‌. ಮಹೇಶ್ ಪರವಾಗಿ ಸಚಿವ ಎಸ್.ಟಿ. ಸೋಮಶೇಖರ್ ಬ್ಯಾಟಿಂಗ್ ಮಾಡಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಸರಸ್ವತಿಪುರಂನಲ್ಲಿರುವ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ಥಳಿಗೆ ಮಾರ್ಲಾಪಣೆ ಮಾಡಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡಬಾರದು. ಈಗಾಗಲೇ ಪ್ರಾದೇಶಿಕ ಆಯುಕ್ತರು ಸರ್ವೇ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೆ, ಅದೇ ಸ್ಥಳವನ್ನು ಮತ್ತೆ ಯಾಕೆ ಸರ್ವೇ ಮಾಡಬೇಕು‌. ರಾಜಕಾರಣಿಗಳು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅಪ್ರಾಮಾಣಿಕರು ಎಂದು ಬಿಂಬಿಸಲಾಗುತ್ತೆ. ಅಧಿಕಾರಿಗಳು ರಾಜಕಾರಣಿಗಳನ್ನು ಪ್ರಶ್ನಿಸಿದರೆ ಪ್ರಾಮಾಣಿಕರೆಂದು ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್

ಇದನ್ನೂ ಓದಿ: ಭೂ ಅಕ್ರಮ ಆರೋಪ: ಮರು ತನಿಖೆ ಮಾಡುವಂತೆ ಆದೇಶ ಹೊರಡಿಸಿದ ಸರ್ವೇ ಇಲಾಖೆ

ಈ ಬಾರಿ ಸರಳ ದಸರಾ:

ಕೊರೊನಾ ಮೂರನೇ ಅಲೆ ನೋಡಿಕೊಂಡು ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು‌‌. ಅದ್ಧೂರಿ ದಸರಾ ಮಾಡುವುದಿಲ್ಲ, ಸರಳವಾಗಿ ದಸರಾ ಆಚರಣೆ ಮಾಡುತ್ತೇವೆ. ಈಗಾಗಲೇ ಮುಖ್ಯಮಂತ್ರಿಗಳು ಸಭೆ ಮಾಡಿ ಮಾಹಿತಿ ನೀಡಿದ್ದಾರೆ. ಮೈಸೂರು, ಚಾಮರಾಜನಗರ, ಶ್ರೀರಂಗಪಟ್ಟಣ ದಸರಾಗೆ 6 ಕೋಟಿ ರೂ. ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಸೋಮಶೇಖರ್​ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.