ಮೈಸೂರು : ಪರೀಕ್ಷಾ ಭಯದಿಂದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ನಂಜನಗೂಡು ತಾಲೂಕಿನ ಬಿಳಿಗಿರಿ ಗ್ರಾಮದಲ್ಲಿ ಜರುಗಿದೆ.
ಪ್ರಿಯಾಂಕ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ತಿ.ನರಸೀಪುರ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮಾರ್ಚ್ 4ರಂದು ದ್ವಿತೀಯ ಪಿಯು ಪರೀಕ್ಷೆ ಇದೆ. ಈ ಪರೀಕ್ಷೆಗೆ ಸರಿಯಾಗಿ ಓದಿಲ್ಲ, ಫೇಲ್ ಆಗುತ್ತೇನೆ ಎಂದು ಆಗಾಗ ಮನೆಯಲ್ಲಿ ಹೇಳುತ್ತಿದ್ದಳಂತೆ.
ನಿನ್ನೆ ಸಂಜೆ ಕಾಲೇಜು ಮುಗಿಸಿಕೊಂಡು ಮನೆಗೆ ಬಂದ ಈಕೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮೃತಳ ತಂದೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.