ETV Bharat / state

ಮೈಸೂರು: ವಿಚಾರಣೆಗೆ ಕರೆತಂದಿದ್ದ ಯುವಕ ಆತ್ಮಹತ್ಯೆ, ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

author img

By ETV Bharat Karnataka Team

Published : Nov 22, 2023, 12:05 PM IST

Updated : Nov 22, 2023, 12:24 PM IST

ವಿಚಾರಣೆಗೆ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ ಪ್ರಕರಣದ ಹಿನ್ನೆಲೆ ಬಿಳಿಗೆರೆ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

Suicide case: Two police Constable suspended in Mysore
ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಮೈಸೂರು: ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ನಂಜೇಶ್ ಹಾಗೂ ಕಾನ್​ಸ್ಟೇಬಲ್​ ಪ್ರಸನ್ನ ಕುಮಾರ್ ಅಮಾನತಾಗಿರುವ ಸಿಬ್ಬಂದಿ.

ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಎಸ್​ಐ, ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತಂದಿದ್ದರು. ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಸಬ್ ಇನ್ಸ್‌ಪೆಕ್ಟರ್ ತೆರಳಿದ್ದರು. ಈ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ಅವರದ್ದಾಗಿತ್ತು.

ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಅಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಸಿಬ್ಬಂದಿಯನ್ನು ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಏನಿದು ಘಟನೆ?: ನವೆಂಬರ್ 12 ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ಸ್ನೇಹಿತರು ಯುವಕರೊಂದಿಗೆ ಸಣ್ಣಪುಟ್ಟ ಗಲಾಟೆ ಮಾಡಿಕೊಂಡಿದ್ದರು. ಬಳಿಕ ಮತ್ತೊಂದು ಗುಂಪಿನ ಯುವಕರಿಗೆ ಕಿರಣ್​ ಹಾಗೂ ಆತನ ಸ್ನೇಹಿತರು ಹೊಡೆದಿದ್ದರು. ಈ ಬಗ್ಗೆ ಯುವಕನೊಬ್ಬ ಬಿಳಿಗೆರೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದ. ಈ ದೂರಿನ ಸಂಬಂಧ ಪೊಲೀಸರು ಕಿರಣ್​ ಹಾಗೂ ಆತನ ಸ್ನೇಹಿತರನ್ನು ಭಾನುವಾರ ಸಂಜೆ 6 ಗಂಟೆಗೆ ಠಾಣೆಗೆ ಕರೆಸಿದ್ದರು.

ಅಂದು ರಾತ್ರಿ 8.30ರ ಸುಮಾರಿಗೆ ಮೂತ್ರವಿಸರ್ಜನೆಗೆ ಎಂದು ಠಾಣೆಯಿಂದ ಹೊರಹೋಗಿದ್ದ ಕಿರಣ್​ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ತಮ್ಮ ಸ್ವಗ್ರಾಮ ನಗರ್ಲೆಗೆ ಬಂದು ತಾನು ಪ್ರೀತಿಸುತ್ತಿದ್ದ ಹುಡುಗಿಯ ಮನೆ ಬಾಗಿಲು ಬಡಿದಿದ್ದ. ಅವರು ಬಾಗಿಲು ತೆರೆಯದಿದ್ದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಮೈಸೂರಿನ ಕೆ.ಆರ್​ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೋಮವಾರ (ನ.13) ಸಂಜೆ ಕಿರಣ್​ ಸಾವನ್ನಪ್ಪಿದ್ದ.

ಪೊಲೀಸರ ಮೇಲೆ ಕುಂಟುಬಸ್ಥರ ಆರೋಪ: ಈ ಬಗ್ಗೆ ಕಿರಣ್​ ಕುಟುಂಬಸ್ಥರು ಪೊಲೀಸರ ಮೇಲೆಯೇ ಆರೋಪಿಸಿದ್ದರು. ಬಿಳಿಗೆರೆ ಪೊಲೀಸರು ಠಾಣೆಗೆ ಕರೆಸಿ, ವಿಚಾರಣೆ ನೆಪದಲ್ಲಿ ಕಿರಣ್​ಗೆ ಹೊಡೆದಿದ್ದಾರೆ. ಇದರಿಂದ ಹೆದರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಿರಣ್​ ಸಂಬಂಧಿ ವಿಜಯ್​ ಕುಮಾರ್​ ಆರೋಪಿಸಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹೆದರಿ ಪೊಲೀಸ್​ ಠಾಣೆಯಿಂದ ಪರಾರಿ, ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ಯುವಕ ಸಾವು

ಮೈಸೂರು: ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ನಂಜೇಶ್ ಹಾಗೂ ಕಾನ್​ಸ್ಟೇಬಲ್​ ಪ್ರಸನ್ನ ಕುಮಾರ್ ಅಮಾನತಾಗಿರುವ ಸಿಬ್ಬಂದಿ.

ಗಲಾಟೆ ವಿಚಾರದಲ್ಲಿ ನವೆಂಬರ್ 12 ರಂದು ಬಿಳಿಗೆರೆ ಠಾಣೆಯ ಎಸ್​ಐ, ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆತಂದಿದ್ದರು. ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಸಬ್ ಇನ್ಸ್‌ಪೆಕ್ಟರ್ ತೆರಳಿದ್ದರು. ಈ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ಅವರದ್ದಾಗಿತ್ತು.

ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಅಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಸಿಬ್ಬಂದಿಯನ್ನು ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಏನಿದು ಘಟನೆ?: ನವೆಂಬರ್ 12 ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ಸ್ನೇಹಿತರು ಯುವಕರೊಂದಿಗೆ ಸಣ್ಣಪುಟ್ಟ ಗಲಾಟೆ ಮಾಡಿಕೊಂಡಿದ್ದರು. ಬಳಿಕ ಮತ್ತೊಂದು ಗುಂಪಿನ ಯುವಕರಿಗೆ ಕಿರಣ್​ ಹಾಗೂ ಆತನ ಸ್ನೇಹಿತರು ಹೊಡೆದಿದ್ದರು. ಈ ಬಗ್ಗೆ ಯುವಕನೊಬ್ಬ ಬಿಳಿಗೆರೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದ. ಈ ದೂರಿನ ಸಂಬಂಧ ಪೊಲೀಸರು ಕಿರಣ್​ ಹಾಗೂ ಆತನ ಸ್ನೇಹಿತರನ್ನು ಭಾನುವಾರ ಸಂಜೆ 6 ಗಂಟೆಗೆ ಠಾಣೆಗೆ ಕರೆಸಿದ್ದರು.

ಅಂದು ರಾತ್ರಿ 8.30ರ ಸುಮಾರಿಗೆ ಮೂತ್ರವಿಸರ್ಜನೆಗೆ ಎಂದು ಠಾಣೆಯಿಂದ ಹೊರಹೋಗಿದ್ದ ಕಿರಣ್​ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ತಮ್ಮ ಸ್ವಗ್ರಾಮ ನಗರ್ಲೆಗೆ ಬಂದು ತಾನು ಪ್ರೀತಿಸುತ್ತಿದ್ದ ಹುಡುಗಿಯ ಮನೆ ಬಾಗಿಲು ಬಡಿದಿದ್ದ. ಅವರು ಬಾಗಿಲು ತೆರೆಯದಿದ್ದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಮೈಸೂರಿನ ಕೆ.ಆರ್​ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೋಮವಾರ (ನ.13) ಸಂಜೆ ಕಿರಣ್​ ಸಾವನ್ನಪ್ಪಿದ್ದ.

ಪೊಲೀಸರ ಮೇಲೆ ಕುಂಟುಬಸ್ಥರ ಆರೋಪ: ಈ ಬಗ್ಗೆ ಕಿರಣ್​ ಕುಟುಂಬಸ್ಥರು ಪೊಲೀಸರ ಮೇಲೆಯೇ ಆರೋಪಿಸಿದ್ದರು. ಬಿಳಿಗೆರೆ ಪೊಲೀಸರು ಠಾಣೆಗೆ ಕರೆಸಿ, ವಿಚಾರಣೆ ನೆಪದಲ್ಲಿ ಕಿರಣ್​ಗೆ ಹೊಡೆದಿದ್ದಾರೆ. ಇದರಿಂದ ಹೆದರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಿರಣ್​ ಸಂಬಂಧಿ ವಿಜಯ್​ ಕುಮಾರ್​ ಆರೋಪಿಸಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹೆದರಿ ಪೊಲೀಸ್​ ಠಾಣೆಯಿಂದ ಪರಾರಿ, ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ಯುವಕ ಸಾವು

Last Updated : Nov 22, 2023, 12:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.