ETV Bharat / state

ಸಿದ್ದರಾಮಯ್ಯಗೆ ಕೈ ಶಾಸಕರು, ಸಚಿವರ ಹೇಳಿಕೆಗಳಿಂದ ಬೇಸರ? - undefined

ಕಾಂಗ್ರೆಸ್ ಶಾಸಕರ ಹೇಳಿಕೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರು ಮಾತನಾಡಿಸಲು ಯತ್ನಿಸಿದಾಗ, ಮಾತನಾಡಲು ಏನು ಇಲ್ಲ ಎನ್ನುತ್ತ ಹೊರಟು ಹೋದರು.

ಸಿದ್ದರಾಮಯ್ಯ, ಮಾಜಿ ಸಿಎಂ
author img

By

Published : May 8, 2019, 2:18 PM IST

ಮೈಸೂರು: ಕಳೆದ 3 ದಿನಗಳಿಂದ ಕಾಂಗ್ರೆಸ್​ನ ಕೆಲ ಶಾಸಕರು ಮತ್ತು ಸಚಿವರು ನೀಡುತ್ತಿರುವ ಹೇಳಿಕೆಗಳಿಂದ ಬೇಸಗೊಂಡಿದ್ದಾರೆ ಎನ್ನಲಾಗ್ತಿರುವ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಮೂರು ದಿನಗಳಿಂದ ಮೈಸೂರು ಭಾಗದಲ್ಲೇ ಇರುವ ಸಿದ್ದರಾಮಯ್ಯ, 2 ದಿನ ಮಡಿಕೇರಿಯ ರೆಸಾರ್ಟ್​ನಲ್ಲಿ ಪುತ್ರನೊಂದಿಗೆ ವಿಶ್ರಾಂತಿಯಲ್ಲಿದ್ದರು. ನಿನ್ನೆ ರಾತ್ರಿ ಟಿ.‌ಕಾಟೂರಿನ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರು ಅವರನ್ನು ಮಾತನಾಡಿಸಲು ಯತ್ನಿಸಿದರು. ಆಗ ಮಾತನಾಡಲು ಏನು ಇಲ್ಲ ಎನ್ನುತ್ತ ಅವರು ಏರ್​ಪೋರ್ಟ್​ ಒಳಗೆ ಪ್ರವೇಶಿಸಿದರು.

ಸಿದ್ದರಾಮಯ್ಯ, ಮಾಜಿ ಸಿಎಂ

ಕಾಂಗ್ರೆಸ್​​ನ ಚಿಕ್ಕಬಳ್ಳಾಪುರ ಶಾಸಕ ಕೆ ಸುಧಾಕರ್, ಗೃಹ ಸಚಿವರು ಎಂ ಬಿ ಪಾಟೀಲ್​ ಅವರು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ ಡಿಸಿಎಂ ಪರಮೇಶ್ವರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರು ಹೆಚ್​ ಡಿ ಕುಮಾರಸ್ವಾಮಿಯೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳುತ್ತಿದ್ದಾರೆ.

ಇವೆಲ್ಲ ವ್ಯತಿರಿಕ್ತ ಹೇಳಿಕೆಗಳಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ ಎನ್ನಲಾಗ್ತಿದೆ. ನಿನ್ನೆ ಸಹ ಮಡಿಕೇರಿಯಲ್ಲಿ ಅವರು ಮಾಧ್ಯಮದವರ ಜೊತೆ ಮಾತನಾಡಲು ನಿರಾಕರಿಸಿದ್ದರು. ಸಿದ್ದರಾಮಯ್ಯರ ಈ ಮೌನ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರು: ಕಳೆದ 3 ದಿನಗಳಿಂದ ಕಾಂಗ್ರೆಸ್​ನ ಕೆಲ ಶಾಸಕರು ಮತ್ತು ಸಚಿವರು ನೀಡುತ್ತಿರುವ ಹೇಳಿಕೆಗಳಿಂದ ಬೇಸಗೊಂಡಿದ್ದಾರೆ ಎನ್ನಲಾಗ್ತಿರುವ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಮೂರು ದಿನಗಳಿಂದ ಮೈಸೂರು ಭಾಗದಲ್ಲೇ ಇರುವ ಸಿದ್ದರಾಮಯ್ಯ, 2 ದಿನ ಮಡಿಕೇರಿಯ ರೆಸಾರ್ಟ್​ನಲ್ಲಿ ಪುತ್ರನೊಂದಿಗೆ ವಿಶ್ರಾಂತಿಯಲ್ಲಿದ್ದರು. ನಿನ್ನೆ ರಾತ್ರಿ ಟಿ.‌ಕಾಟೂರಿನ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರು ಅವರನ್ನು ಮಾತನಾಡಿಸಲು ಯತ್ನಿಸಿದರು. ಆಗ ಮಾತನಾಡಲು ಏನು ಇಲ್ಲ ಎನ್ನುತ್ತ ಅವರು ಏರ್​ಪೋರ್ಟ್​ ಒಳಗೆ ಪ್ರವೇಶಿಸಿದರು.

ಸಿದ್ದರಾಮಯ್ಯ, ಮಾಜಿ ಸಿಎಂ

ಕಾಂಗ್ರೆಸ್​​ನ ಚಿಕ್ಕಬಳ್ಳಾಪುರ ಶಾಸಕ ಕೆ ಸುಧಾಕರ್, ಗೃಹ ಸಚಿವರು ಎಂ ಬಿ ಪಾಟೀಲ್​ ಅವರು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ ಡಿಸಿಎಂ ಪರಮೇಶ್ವರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರು ಹೆಚ್​ ಡಿ ಕುಮಾರಸ್ವಾಮಿಯೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳುತ್ತಿದ್ದಾರೆ.

ಇವೆಲ್ಲ ವ್ಯತಿರಿಕ್ತ ಹೇಳಿಕೆಗಳಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ ಎನ್ನಲಾಗ್ತಿದೆ. ನಿನ್ನೆ ಸಹ ಮಡಿಕೇರಿಯಲ್ಲಿ ಅವರು ಮಾಧ್ಯಮದವರ ಜೊತೆ ಮಾತನಾಡಲು ನಿರಾಕರಿಸಿದ್ದರು. ಸಿದ್ದರಾಮಯ್ಯರ ಈ ಮೌನ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

Intro:ಮೈಸೂರು: ಕಳೆದ ೩ ದಿನಗಳಿಂದ ಕಾಂಗ್ರೆಸ್ ಶಾಸಕರ ಹೇಳಿಕೆಯಿಂದ ಬೇಸಗೊಂಡಿರುವ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದ ಘಟನೆ ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.Body:ಕಳೆದ ೩ ದಿನಗಳಿಂದ ಮೈಸೂರು ಭಾಗದಲ್ಲೇ ಇದ್ದ ಸಿದ್ದರಾಮಯ್ಯ ೨ ದಿನಗಳ ಕಾಲ ಮಡಿಕೇರಿಯ ರೆಸಾರ್ಟ್ ನಲ್ಲಿ ಪುತ್ರನೊಂದಿಗೆ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ ನೆನ್ನೆ ರಾತ್ರಿ ಟಿ.‌ಕಾಟೂರಿನ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮಗಳು ಅವರನ್ನು ಮಾತನಾಡಿಸಲು ಯತ್ನಿಸಿದಾಗ ಇಲ್ಲಿ ಮಾತನಾಡಲು ಏನು ಇಲ್ಲ ಎಂದು ಹೇಳಿ ಹೊರಟು ಹೋದರು.
ಕಳೆದ ೨ ದಿನಗಳಿಂದ ಕಾಂಗ್ರೆಸ್ ನ ಶಾಸಕರು ಹಾಗೂ ಸಚಿವರ ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದು ಇದರಿಂದ ಬೇಸರಗೊಂಡಿರುವ ಸಿದ್ದರಾಮಯ್ಯ ನೆನ್ನೆ ಸಹ ಮಡಿಕೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದರು ಇಂದು ಸಹ ಮಾಧ್ಯಮಗಳ ಜೊತೆ ಮಾತನಾಡಲು ಸಿದ್ದರಾಮಯ್ಯ ನಿರಾಕರಿಸಿದ್ದು ಇವೆಲ್ಲವೂ ಈಗ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.