ETV Bharat / state

ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಬೈಕ್,​ ಮೂವರು ಸ್ಥಳದಲ್ಲೇ ಸಾವು‌ - T. Narasipura Police Station

ಬಸ್​ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.

fdfff
ಬಸ್​ಗಾಗಿ ಕಾಯುತ್ತಿದ್ವದವರ ಮೇಲೆ ಹರಿದ ಬೈಕ್,​ ಮೂವರು ಸ್ಥಳದಲ್ಲೇ ಸಾವು‌
author img

By

Published : Feb 21, 2020, 1:23 PM IST

ಮೈಸೂರು: ಬಸ್​ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಕಡೆಯಿಂದ ಕೇರಳ ನೋಂದಣಿ ಇದ್ದ ಬೈಕ್​ ಸವಾರ ಸಾಯಿಮಾನ್ ಸೇಠ್​ ಎಂಬಾತ ವೇಗವಾಗಿ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಅಡ್ಡಲಾಗಿ ಬಂದ ಮೊಪೆಡ್​ಗೆ ಗುದ್ದಿದ್ದಾನೆ. ನಿಯಂತ್ರಣ ತಪ್ಪಿದ ಬೈಕ್ ಬಸ್​ಗೆ ಕಾಯುತ್ತಿದ್ದ ಇನ್ನಿಬ್ಬರ ಮೇಲೆ ಹರಿದು ಚಿಕ್ಕಣ್ಣಮ್ಮ ,ಬಸವರಾಜು ಹಾಗೂ ದಾಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ವ್ಯಕ್ತಿ ಕೇರಳದವ ಎನ್ನಲಾಗಿದೆ. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಬಸ್​ಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರ ಮೇಲೆ ಬೈಕ್ ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಕಡೆಯಿಂದ ಕೇರಳ ನೋಂದಣಿ ಇದ್ದ ಬೈಕ್​ ಸವಾರ ಸಾಯಿಮಾನ್ ಸೇಠ್​ ಎಂಬಾತ ವೇಗವಾಗಿ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಅಡ್ಡಲಾಗಿ ಬಂದ ಮೊಪೆಡ್​ಗೆ ಗುದ್ದಿದ್ದಾನೆ. ನಿಯಂತ್ರಣ ತಪ್ಪಿದ ಬೈಕ್ ಬಸ್​ಗೆ ಕಾಯುತ್ತಿದ್ದ ಇನ್ನಿಬ್ಬರ ಮೇಲೆ ಹರಿದು ಚಿಕ್ಕಣ್ಣಮ್ಮ ,ಬಸವರಾಜು ಹಾಗೂ ದಾಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಿಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ವ್ಯಕ್ತಿ ಕೇರಳದವ ಎನ್ನಲಾಗಿದೆ. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.