ಮೈಸೂರು : ಜಾನುವಾರುಗಳ ಮೈ ತೊಳೆಯಲು ಹೋಗಿ ಇಬ್ಬರು ಯುವಕರು ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನ ತರಿಕಲ್ಲು ಗ್ರಾಮದ ಬಾಲಕೆರೆಯಲ್ಲಿ ನಡೆದಿದೆ.
ಹಸುವಿನಕಾವಲು ಗ್ರಾಮದ ದರ್ಶನ್ (20), ರಂಜು (22) ಎಂಬುವರು ಮೃತ ಯುವಕರು. ಸೋಮವಾರ ಬೆಳಗ್ಗೆ ಕೆರೆಯಲ್ಲಿ ಜಾನುವಾರುಗಳ ಮೈ ತೊಳೆಯಲು ಹೋಗಿದ್ದಾಗ ದರ್ಶನ್ ಮತ್ತು ರಂಜು ಕಾಲುಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇವರ ಜೊತೆಯಲ್ಲಿದ್ದ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕದಳ ಹಾಗೂ ಈಜುಗಾರರ ಸಹಾಯದಿಂದ ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆಯಲಾಗಿದೆ. ಶವಗಳನ್ನು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.
ಇದನ್ನೂ ಓದಿ:ಸಾಲ ಕೊಟ್ಟು ಪ್ರಾಣ ಕಳೆದುಕೊಂಡ ಸ್ನೇಹಿತ: ಹಣ ಕೇಳಿದಕ್ಕೆ ಗೆಳೆಯನಿಗೆ ಮುಹೂರ್ತವಿಟ್ಟ ಪಾಪಿಗಳು