ಮೈಸೂರು: ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಜೊತೆ ಗ್ರಾಮಸ್ಥರು ತಳ್ಳಾಟ ನಡೆಸಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಸಿಬ್ಬಂದಿ ಕೈಯಲ್ಲಿದ್ದ ಬಂದೂಕು ಕಿತ್ತುಕೊಂಡು, ಅದನ್ನು ಮುರಿದು ಹಾಕಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಕಾಡಂಚಿನ ಗ್ರಾಮ ಬೂದನೂರಿಗೆ ಸೋಮವಾರ ಸಲಗವೊಂದು ನುಗ್ಗಿದ್ದು, ಹಲವು ಮನೆಗಳಿಗೆ ಹಾನಿ ಮಾಡಿದೆ. ಇದನ್ನು ಓಡಿಸಲು ಬಂದಿದ್ದ ಮೇಟಿಕುಪ್ಪೆ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಕಿಡಿ ಕಾರಿದರು.
ಸಿಬ್ಬಂದಿ ಜೊತೆ ಗ್ರಾಮಸ್ಥರು ವಾಗ್ವಾದ ನಡೆಸಿ, ಬಂದೂಕು ಕಸಿದುಕೊಂಡು ಮುರಿದು ಹಾಕಿದರು. ಗ್ರಾಮಕ್ಕೆ ನುಗ್ಗಿದ್ದ ಕಾಡಾನೆ ಓಡಿಸಲು ತಡವಾಗಿ ಬಂದರು ಎಂಬ ಕಾರಣಕ್ಕೆ ಗ್ರಾಮಸ್ಥರು ಈ ರೀತಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಹೆಚ್.ಡಿ.ಕೋಟೆ: ಗ್ರಾಮಕ್ಕೆ ನುಗ್ಗಿ ಒಂಟಿ ಸಲಗ ರಂಪಾಟ; ಮನೆ, ಎತ್ತಿನ ಗಾಡಿ ಜಖಂ