ETV Bharat / state

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಬಿಡುವುದಿಲ್ಲ: ಸಂಸದ ಪ್ರತಾಪ್ ಸಿಂಹ - ಮೈಸೂರು ವಿಮಾನ ನಿಲ್ದಾಣ

Tippu name to Mysore airport: ರಾಜ್ಯ ಕಾಂಗ್ರೆಸ್​ ಸರ್ಕಾರ ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್​ ಹೆಸರಿಡಲು ಚರ್ಚೆ ಶುರು ಮಾಡಿದೆ. ಇದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ ಎಂದು ಸಂಸದ ಪ್ರತಾಪ್​ ಹೇಳಿದ್ದಾರೆ.

MP Prathap Simha
ಸಂಸದ ಪ್ರತಾಪ್​ ಸಿಂಹ
author img

By ETV Bharat Karnataka Team

Published : Dec 16, 2023, 7:21 PM IST

ಮೈಸೂರು: ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ತೀರ್ಮಾನವನ್ನು ಬಿಜೆಪಿ ಸರ್ಕಾರವಿದ್ದಾಗಲೇ ತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಾಯಿಸಿ ಟಿಪ್ಪುವಿನ ಹೆಸರಿಡಲು ಕಾಂಗ್ರೆಸ್ ಸರ್ಕಾರದಲ್ಲಿ ಚರ್ಚೆಗಳು ಶುರುವಾಗಿದೆ. ಈ ರೀತಿಯ ಚರ್ಚೆ ಅಸಂಬದ್ಧ. ನಾವು ಯಾವುದೇ ಕಾರಣಕ್ಕೂ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪತ್ರದ ಮೂಲಕ ಕಿಡಿ ಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ಇಂದು ಪತ್ರ ಬರೆದು, "ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಕಾಂಗ್ರೆಸ್ ಸರ್ಕಾರ ಚರ್ಚೆ ಶುರು ಮಾಡಿದೆ. ಆದರೆ, ಈ ರೀತಿಯ ಚರ್ಚೆಯ ವಿಚಾರ ಹಾಗೂ ಪ್ರಸ್ತಾವನೆ ಅಸಂಬದ್ಧವಾಗಿದೆ. ಈಗಾಗಲೇ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿ ಇದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೇ ಬಸವರಾಜ ಬೊಮ್ಮಾಯಿ ಅವರಿಗೆ ಖುದ್ದಾಗಿ ಪತ್ರ ಬರೆದು, ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮೈಸೂರು ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ಸರ್ಕಾರದಲ್ಲಿ ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ. ಈ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿ ಇದೆ. ಈಗ ಕಾಂಗ್ರೆಸ್ ಸರ್ಕಾರ ಟಿಪ್ಪು ಹೆಸರನ್ನು ಮೈಸೂರಿನ ವಿಮಾನ ನಿಲ್ದಾಣಕ್ಕೆ ಇಡಲು ಪ್ರಯತ್ನಿಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಬಿಡುವುದಿಲ್ಲ" ಎಂದು ಹೇಳಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಮನವಿ ಮಾಡಿದ್ದ ಸಂಸದ: ಕಳೆದ ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್​ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಹಾಗೂ ಜನರ ಒತ್ತಾಯವಾಗಿತ್ತು. ಅದರಂತೆ 2021ರಲ್ಲಿ ಬಿ.ಎಸ್​.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ್ದಾಗಲೇ ಸಂಸದ ಪ್ರತಾಪ್​ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಬಿಎಸ್​ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹರದೀಪ್​ ಸಿಂಗ್​ ಪುರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ನಂತರ ಕಳೆದ ವರ್ಷ ಕೂಡ ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಮೈಸೂರಿನ ಸಂಸದ ಪ್ರತಾಪ್​ ಸಿಂಹ, ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಕ್ಯಾಬಿನೆಟ್​ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆಯನ್ನೂ ನೀಡಿದ್ದರು.

ಇದನ್ನೂ ಓದಿ: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಟ್ಟಲ್ಲಿ ಕ್ರಾಂತಿ: ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ

ಮೈಸೂರು: ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ತೀರ್ಮಾನವನ್ನು ಬಿಜೆಪಿ ಸರ್ಕಾರವಿದ್ದಾಗಲೇ ತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಾಯಿಸಿ ಟಿಪ್ಪುವಿನ ಹೆಸರಿಡಲು ಕಾಂಗ್ರೆಸ್ ಸರ್ಕಾರದಲ್ಲಿ ಚರ್ಚೆಗಳು ಶುರುವಾಗಿದೆ. ಈ ರೀತಿಯ ಚರ್ಚೆ ಅಸಂಬದ್ಧ. ನಾವು ಯಾವುದೇ ಕಾರಣಕ್ಕೂ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪತ್ರದ ಮೂಲಕ ಕಿಡಿ ಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ಇಂದು ಪತ್ರ ಬರೆದು, "ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಕಾಂಗ್ರೆಸ್ ಸರ್ಕಾರ ಚರ್ಚೆ ಶುರು ಮಾಡಿದೆ. ಆದರೆ, ಈ ರೀತಿಯ ಚರ್ಚೆಯ ವಿಚಾರ ಹಾಗೂ ಪ್ರಸ್ತಾವನೆ ಅಸಂಬದ್ಧವಾಗಿದೆ. ಈಗಾಗಲೇ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿ ಇದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೇ ಬಸವರಾಜ ಬೊಮ್ಮಾಯಿ ಅವರಿಗೆ ಖುದ್ದಾಗಿ ಪತ್ರ ಬರೆದು, ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮೈಸೂರು ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ಸರ್ಕಾರದಲ್ಲಿ ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ. ಈ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿ ಇದೆ. ಈಗ ಕಾಂಗ್ರೆಸ್ ಸರ್ಕಾರ ಟಿಪ್ಪು ಹೆಸರನ್ನು ಮೈಸೂರಿನ ವಿಮಾನ ನಿಲ್ದಾಣಕ್ಕೆ ಇಡಲು ಪ್ರಯತ್ನಿಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಬಿಡುವುದಿಲ್ಲ" ಎಂದು ಹೇಳಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಮನವಿ ಮಾಡಿದ್ದ ಸಂಸದ: ಕಳೆದ ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್​ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಹಾಗೂ ಜನರ ಒತ್ತಾಯವಾಗಿತ್ತು. ಅದರಂತೆ 2021ರಲ್ಲಿ ಬಿ.ಎಸ್​.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ್ದಾಗಲೇ ಸಂಸದ ಪ್ರತಾಪ್​ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಬಿಎಸ್​ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹರದೀಪ್​ ಸಿಂಗ್​ ಪುರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ನಂತರ ಕಳೆದ ವರ್ಷ ಕೂಡ ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಮೈಸೂರಿನ ಸಂಸದ ಪ್ರತಾಪ್​ ಸಿಂಹ, ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಕ್ಯಾಬಿನೆಟ್​ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆಯನ್ನೂ ನೀಡಿದ್ದರು.

ಇದನ್ನೂ ಓದಿ: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಟ್ಟಲ್ಲಿ ಕ್ರಾಂತಿ: ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.