ETV Bharat / state

ಪ್ರತ್ಯೇಕ ಘಟನೆ: ಕಾಡಾನೆ ಮತ್ತು ಕಾಡು ಹಂದಿ ದಾಳಿಯಿಂದ ಇಬ್ಬರು ಆಸ್ಪತ್ರೆಗೆ ದಾಖಲು

author img

By ETV Bharat Karnataka Team

Published : Sep 2, 2023, 2:57 PM IST

Updated : Sep 2, 2023, 3:05 PM IST

ಮೈಸೂರಿನಲ್ಲಿ ಪ್ರತ್ಯೇಕ ಕಾಡಾನೆ ಮತ್ತು ಹಂದಿ ದಾಳಿಯಿಂದ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಡಾನೆ ಮತ್ತು ಕಾಡು ಹಂದಿ ದಾಳಿ
ಕಾಡಾನೆ ಮತ್ತು ಕಾಡು ಹಂದಿ ದಾಳಿ

ಮೈಸೂರು: ಬಾಳೆ ಬೆಳೆ ಕಾಯಲು ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿರುವ ಹಾಗೂ ಹತ್ತಿ ಬಿಡಿಸಲು ಹೋಗಿದ್ದ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಪ್ರತ್ಯೇಕ ಎರಡು ಘಟನೆಗಳು ಎಚ್ ಡಿ ಕೋಟೆ ತಾಲೂಕಿನ ಕುಂದೂರು ಹಾಗೂ ಕೆ ಆರ್ ಪುರ ಗ್ರಾಮಗಳ ಜಮೀನಿನಲ್ಲಿ ನಡೆದಿವೆ.

ಕಾಡಾನೆ ದಾಳಿಗೆ ರೈತ ಆಸ್ಪತ್ರೆಗೆ ದಾಖಲು : ತಮ್ಮ ಜಮೀನಿನಲ್ಲಿ ಬಾಳೆ ಕಾಯಲು ಹೋಗಿದ್ದ ಸಿದ್ದರಾಜನಾಯಕ ಎಂಬುವರ ಮೇಲೆ ಶುಕ್ರವಾರ ರಾತ್ರಿ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ರೈತ ಪ್ರಜ್ಞಾಹೀನನಾಗಿ ಅಲ್ಲೇ ಬಿದ್ದಿದ್ದ. ಶನಿವಾರ ಬೆಳಗ್ಗೆ ಕುಟುಂಬದವರು ಜಮೀನಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಕುಟುಂಬದವರು ಈತನನ್ನು ಎಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿದ್ದರಾಜನಾಯಕ ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕಿನ ಮಧ್ಯೆ ಇರುವ ಕುಂದೂರು ಗ್ರಾಮದ ನಿವಾಸಿ.

ಮಹಿಳೆ ಮೇಲೆ ಕಾಡು ಹಂದಿ ದಾಳಿ : ಜಮೀನಿನಲ್ಲಿ ಹತ್ತಿ ಬಿಡಿಸಲು ಕೂಲಿ ಕೆಲಸಕ್ಕೆ ಹೋಗಿದ್ದ ಚಿಕ್ಕಮ್ಮ (55) ಎಂಬ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ಕೆ ಆರ್ ಪುರ ಹೊರವಲಯದ ಜಮೀನಿನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕಾಡು ಹಂದಿ ದಾಳಿಗೆ ಸಿಲುಕಿ ನೆಲಕ್ಕೆ ಬಿದ್ದ ಪರಿಣಾಮ ಮಹಿಳೆಯ ಭುಜದ ಮೂಳೆ ಮುರಿದಿದೆ. ಅವರನ್ನು ಎಚ್ ಡಿ ಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಜೊತೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ಇತರ ಕೂಲಿ ಕಾರ್ಮಿಕರು, ಕಾಡು ಹಂದಿ ದಾಳಿಯಿಂದ ಪಾರಾಗಿದ್ದಾರೆ.

ಈ ಎರಡು ಘಟನೆಗಳು ಎಚ್ ಡಿ ಕೋಟೆ ತಾಲೂಕಿನ ಕುಂದೂರು ಹಾಗೂ ಕೆ ಆರ್ ಪುರ ಗ್ರಾಮಗಳಲ್ಲಿ ನಡೆದಿದೆ. ಗಾಯಗೊಂಡ ಇಬ್ಬರನ್ನು ಎಚ್ ಡಿ ಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಹನೂರು ತಾಲೂಕಿನ ಪಿ ಜಿ‌ ಪಾಳ್ಯ ಸಮೀಪ ಆಲದಕೆರೆ ಕಾಡಿನಲ್ಲಿ ಜುಲೈ ತಿಂಗಳಿನಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದ. ಮಲೆಮಹದೇಶ್ವರ ವನ್ಯಜೀವಿಧಾಮ ಪಿ ಜಿ ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶಕ್ಕೆ ಪ್ರಭುಸ್ವಾಮಿ ಹಾಗೂ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಕೀಳಲು ತೆರಳಿದ್ದರು. ಅಪ್ಪ ಒಂದು ಭಾಗದಲ್ಲಿ ಮಗ ಮತ್ತೊಂದು ಭಾಗದಲ್ಲಿ ಕಡ್ಡಿ ಕೀಳುತ್ತಿದ್ದಾಗ ಆನೆ ದಾಳಿ ಮಾಡಿತ್ತು.

ಇದನ್ನೂ ಓದಿ: ಯುವಕರ ಬೈಕ್​ನತ್ತ ನುಗ್ಗಿದ ಕಾಡಾನೆ.. ಗಜರಾಜನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡ ಕರ್ನಾಟಕದ ನಿವಾಸಿಗಳು!!

ಮೈಸೂರು: ಬಾಳೆ ಬೆಳೆ ಕಾಯಲು ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿರುವ ಹಾಗೂ ಹತ್ತಿ ಬಿಡಿಸಲು ಹೋಗಿದ್ದ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಪ್ರತ್ಯೇಕ ಎರಡು ಘಟನೆಗಳು ಎಚ್ ಡಿ ಕೋಟೆ ತಾಲೂಕಿನ ಕುಂದೂರು ಹಾಗೂ ಕೆ ಆರ್ ಪುರ ಗ್ರಾಮಗಳ ಜಮೀನಿನಲ್ಲಿ ನಡೆದಿವೆ.

ಕಾಡಾನೆ ದಾಳಿಗೆ ರೈತ ಆಸ್ಪತ್ರೆಗೆ ದಾಖಲು : ತಮ್ಮ ಜಮೀನಿನಲ್ಲಿ ಬಾಳೆ ಕಾಯಲು ಹೋಗಿದ್ದ ಸಿದ್ದರಾಜನಾಯಕ ಎಂಬುವರ ಮೇಲೆ ಶುಕ್ರವಾರ ರಾತ್ರಿ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ರೈತ ಪ್ರಜ್ಞಾಹೀನನಾಗಿ ಅಲ್ಲೇ ಬಿದ್ದಿದ್ದ. ಶನಿವಾರ ಬೆಳಗ್ಗೆ ಕುಟುಂಬದವರು ಜಮೀನಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಕುಟುಂಬದವರು ಈತನನ್ನು ಎಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿದ್ದರಾಜನಾಯಕ ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕಿನ ಮಧ್ಯೆ ಇರುವ ಕುಂದೂರು ಗ್ರಾಮದ ನಿವಾಸಿ.

ಮಹಿಳೆ ಮೇಲೆ ಕಾಡು ಹಂದಿ ದಾಳಿ : ಜಮೀನಿನಲ್ಲಿ ಹತ್ತಿ ಬಿಡಿಸಲು ಕೂಲಿ ಕೆಲಸಕ್ಕೆ ಹೋಗಿದ್ದ ಚಿಕ್ಕಮ್ಮ (55) ಎಂಬ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ಕೆ ಆರ್ ಪುರ ಹೊರವಲಯದ ಜಮೀನಿನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕಾಡು ಹಂದಿ ದಾಳಿಗೆ ಸಿಲುಕಿ ನೆಲಕ್ಕೆ ಬಿದ್ದ ಪರಿಣಾಮ ಮಹಿಳೆಯ ಭುಜದ ಮೂಳೆ ಮುರಿದಿದೆ. ಅವರನ್ನು ಎಚ್ ಡಿ ಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಜೊತೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ಇತರ ಕೂಲಿ ಕಾರ್ಮಿಕರು, ಕಾಡು ಹಂದಿ ದಾಳಿಯಿಂದ ಪಾರಾಗಿದ್ದಾರೆ.

ಈ ಎರಡು ಘಟನೆಗಳು ಎಚ್ ಡಿ ಕೋಟೆ ತಾಲೂಕಿನ ಕುಂದೂರು ಹಾಗೂ ಕೆ ಆರ್ ಪುರ ಗ್ರಾಮಗಳಲ್ಲಿ ನಡೆದಿದೆ. ಗಾಯಗೊಂಡ ಇಬ್ಬರನ್ನು ಎಚ್ ಡಿ ಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಹನೂರು ತಾಲೂಕಿನ ಪಿ ಜಿ‌ ಪಾಳ್ಯ ಸಮೀಪ ಆಲದಕೆರೆ ಕಾಡಿನಲ್ಲಿ ಜುಲೈ ತಿಂಗಳಿನಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದ. ಮಲೆಮಹದೇಶ್ವರ ವನ್ಯಜೀವಿಧಾಮ ಪಿ ಜಿ ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶಕ್ಕೆ ಪ್ರಭುಸ್ವಾಮಿ ಹಾಗೂ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಕೀಳಲು ತೆರಳಿದ್ದರು. ಅಪ್ಪ ಒಂದು ಭಾಗದಲ್ಲಿ ಮಗ ಮತ್ತೊಂದು ಭಾಗದಲ್ಲಿ ಕಡ್ಡಿ ಕೀಳುತ್ತಿದ್ದಾಗ ಆನೆ ದಾಳಿ ಮಾಡಿತ್ತು.

ಇದನ್ನೂ ಓದಿ: ಯುವಕರ ಬೈಕ್​ನತ್ತ ನುಗ್ಗಿದ ಕಾಡಾನೆ.. ಗಜರಾಜನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡ ಕರ್ನಾಟಕದ ನಿವಾಸಿಗಳು!!

Last Updated : Sep 2, 2023, 3:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.