ETV Bharat / state

ಸಂಸದ ಪ್ರತಾಪ್‌ಸಿಂಹ ಕಚೇರಿ ಮುಂದೆ ಬಳೆ ಸುರಿದು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

author img

By

Published : Sep 12, 2021, 8:26 PM IST

ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದೀಪಕ್ ಶಿವಣ್ಣ ನೇತೃತ್ವದಲ್ಲಿ ಪ್ರತಾಪ್‌ ಸಿಂಹರ ಕಚೇರಿ ಮುಂದೆ 20 ಡಜನ್ ಬಳೆ ಸುರಿಯುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ನಗರದ ಹುಣಸೂರು ರಸ್ತೆಯ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿರುವ ಸಂಸದ ಪ್ರತಾಪ್ ಸಿಂಹರ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬಳೆಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಶಾಸಕ ತನ್ವೀರ್‌ ಸೇಠ್ ಬಗ್ಗೆ ಪ್ರತಾಪ್‌ಸಿಂಹ ಲೇವಡಿ ಮಾಡಿರುವ ವಿಚಾರವಾಗಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ತನ್ವೀರ್‌ ಸೇಠ್ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಕೊರೊನಾ ಸಂಕಷ್ಟದಲ್ಲಿ‌ ಜನ ಸಾಯುತ್ತಿರುವಾಗ ನಿಮಗೆ‌ ಕೋಮುವಾದ ಬೇಕಾ?ಪ್ರಚೋದನೆ ಮಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.

ಹೆಣ್ಣಿಗೆ ಗೌರವ ಕೊಡುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ಮೈಸೂರು ಜನ ನಿಮ್ಮ ರಾಸಲೀಲೆಗಳನ್ನು ನೋಡಿದ್ದಾರೆ. ನೀವು ಏನೆಂಬುದು ಜನರಿಗೆ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಮ್ಮ ಮನವಿಗೆ ಸ್ಪಂದಿಸದಿದ್ರೆ, ಜನಾಂದೋಲನದ ಮೂಲಕ ಉತ್ತರ ಕೊಡ್ತೀವಿ: ಪ್ರತಾಪ್ ಸಿಂಹ

ಮೈಸೂರು: ನಗರದ ಹುಣಸೂರು ರಸ್ತೆಯ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿರುವ ಸಂಸದ ಪ್ರತಾಪ್ ಸಿಂಹರ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬಳೆಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಶಾಸಕ ತನ್ವೀರ್‌ ಸೇಠ್ ಬಗ್ಗೆ ಪ್ರತಾಪ್‌ಸಿಂಹ ಲೇವಡಿ ಮಾಡಿರುವ ವಿಚಾರವಾಗಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ತನ್ವೀರ್‌ ಸೇಠ್ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಕೊರೊನಾ ಸಂಕಷ್ಟದಲ್ಲಿ‌ ಜನ ಸಾಯುತ್ತಿರುವಾಗ ನಿಮಗೆ‌ ಕೋಮುವಾದ ಬೇಕಾ?ಪ್ರಚೋದನೆ ಮಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.

ಹೆಣ್ಣಿಗೆ ಗೌರವ ಕೊಡುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ಮೈಸೂರು ಜನ ನಿಮ್ಮ ರಾಸಲೀಲೆಗಳನ್ನು ನೋಡಿದ್ದಾರೆ. ನೀವು ಏನೆಂಬುದು ಜನರಿಗೆ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಮ್ಮ ಮನವಿಗೆ ಸ್ಪಂದಿಸದಿದ್ರೆ, ಜನಾಂದೋಲನದ ಮೂಲಕ ಉತ್ತರ ಕೊಡ್ತೀವಿ: ಪ್ರತಾಪ್ ಸಿಂಹ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.