ETV Bharat / state

Mysore crime: ರಾಜ್ಯದಲ್ಲಿ ಮತ್ತೊಂದು ದುರಂತ.. ಮದುವೆ ಆಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ!

ವಿವಾಹವಾಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿ ಗ್ರಾಮದಲ್ಲಿ ಜರುಗಿದೆ.

author img

By

Published : Jul 3, 2023, 4:15 PM IST

Young man committed suicide
ಮದುವೆ ಆಗಲಿಲ್ಲವೆಂದು ಜಿಗುಪ್ಸೆಗೊಂಡ ಯುವಕ ಆತ್ಮಹತ್ಯೆ

ಮೈಸೂರು: ಮದುವೆ ಆಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಮಹದೇವಸ್ವಾಮಿ(30) ಮೃತ ಯುವಕನಾಗಿದ್ದಾನೆ. ಜುಲೈ 1 ರಂದು ರಾತ್ರಿ ಮಹದೇವಸ್ವಾಮಿ ಮನೆಯಿಂದ ಹೋದವರು ವಾಪಸ್ ಬಂದಿರಲಿಲ್ಲ ಎಂದು, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಯುವಕನ ತಂದೆ ಚಿನ್ನಪ್ಪ ದೂರು ನೀಡಿದ್ದರು.

ಸೋಮವಾರ ಸಿದ್ದೇಗೌಡನ ಹುಂಡಿ ಗ್ರಾಮದ ತಮ್ಮ ಜಮೀನಿನಲ್ಲಿ ನಾಪತ್ತೆಯಾಗಿದ್ದ ಮಹದೇವಸ್ವಾಮಿಯ ಮೃತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದಿದೆ. ಮೃತನಿಗೆ ಅಕ್ಕ ಮತ್ತು ತಂಗಿ ಇದ್ದಾರೆ. ಅವರಿಗೂ ಮದುವೆ ಆಗಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಹುಲ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದರು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮದುವೆ ಆಗಲಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ: ಮದುವೆಯಾಗಲು ಹೆಣ್ಣು ಸಿಗದೇ ಇರುವ ಕಾರಣಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರದಲ್ಲಿ ಇತ್ತೀಚೆಗೆ ನಡೆದಿತ್ತು. ಕಿರಗಾರಿಮನೆಯ ನಾಗರಾಜ್​ ಗಣಪತಿ ಗಾಂವ್ಕರ್​(35) ಮೃತಪಟ್ಟಿರುವ ಯುವಕ. ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ನೊಂದಿದ್ದ ಯುವಕ ಮನೆಯ ಸಮೀಪದ ಗುಡ್ಡದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಮೃತ ಯುವಕ ನಾಗರಾಜ್ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದ. ಈ ಯುವಕನ ಮದುವೆಯಾಗಲು ವಿಳಂಬವಾಗಿತ್ತು. ಅದೇ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದರು. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಕನ್ಯೆ ಸಿಗುತ್ತಿಲ್ಲವೆಂದು ಆತ್ಮಹತ್ಯೆ: ಕೆಲವು ದಿನಗಳ ಹಿಂದೆ ಹಾವೇರಿಯಲ್ಲಿ ಮದುವೆಗೆ ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದನು. ಮಂಜುನಾಥ ನಾಗನೂರು ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಜುನಾಥ್​ಗೆ ಏಳೆಂಟು ವರ್ಷಗಳಿಂದ ಯಾರೊಬ್ಬರೂ ಮದುವೆಗೆ ಕನ್ಯೆ ಕೊಟ್ಟಿರಲಿಲ್ಲ. ತನ್ನಿಂದ ತಂದೆ ಹಾಗೂ ತಾಯಿಗೆ ತೊಂದರೆಯಾಗುತ್ತಿದೆ ಎಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮದುವೆಯಾಗಲು ಕನ್ಯೆ ಲಭಿಸದಿರುವುದಕ್ಕೆ ಆತ್ಮಹತ್ಯೆಗೆ ಯತ್ನ: ವಯಸ್ಸಾದರೂ ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತ್ತು. ಯುವಕ ಸ್ಮಶಾನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ. ವಯಸ್ಸಾದರೂ ತನಗೆ ವಿವಾಹವಾಗಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯರು ತಕ್ಷಣವೇ ಆತನನ್ನು ರಕ್ಷಣೆ ಮಾಡಿದ್ದರು.

ಇದನ್ನೂ ಓದಿ: ಕನ್ಯೆ ಸಿಗದೆ ಮದುವೆ ಆಗಲಿಲ್ಲ.. ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ

ಮೈಸೂರು: ಮದುವೆ ಆಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಮಹದೇವಸ್ವಾಮಿ(30) ಮೃತ ಯುವಕನಾಗಿದ್ದಾನೆ. ಜುಲೈ 1 ರಂದು ರಾತ್ರಿ ಮಹದೇವಸ್ವಾಮಿ ಮನೆಯಿಂದ ಹೋದವರು ವಾಪಸ್ ಬಂದಿರಲಿಲ್ಲ ಎಂದು, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಯುವಕನ ತಂದೆ ಚಿನ್ನಪ್ಪ ದೂರು ನೀಡಿದ್ದರು.

ಸೋಮವಾರ ಸಿದ್ದೇಗೌಡನ ಹುಂಡಿ ಗ್ರಾಮದ ತಮ್ಮ ಜಮೀನಿನಲ್ಲಿ ನಾಪತ್ತೆಯಾಗಿದ್ದ ಮಹದೇವಸ್ವಾಮಿಯ ಮೃತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದಿದೆ. ಮೃತನಿಗೆ ಅಕ್ಕ ಮತ್ತು ತಂಗಿ ಇದ್ದಾರೆ. ಅವರಿಗೂ ಮದುವೆ ಆಗಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಹುಲ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದರು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮದುವೆ ಆಗಲಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ: ಮದುವೆಯಾಗಲು ಹೆಣ್ಣು ಸಿಗದೇ ಇರುವ ಕಾರಣಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರದಲ್ಲಿ ಇತ್ತೀಚೆಗೆ ನಡೆದಿತ್ತು. ಕಿರಗಾರಿಮನೆಯ ನಾಗರಾಜ್​ ಗಣಪತಿ ಗಾಂವ್ಕರ್​(35) ಮೃತಪಟ್ಟಿರುವ ಯುವಕ. ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ನೊಂದಿದ್ದ ಯುವಕ ಮನೆಯ ಸಮೀಪದ ಗುಡ್ಡದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಮೃತ ಯುವಕ ನಾಗರಾಜ್ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದ. ಈ ಯುವಕನ ಮದುವೆಯಾಗಲು ವಿಳಂಬವಾಗಿತ್ತು. ಅದೇ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದರು. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಕನ್ಯೆ ಸಿಗುತ್ತಿಲ್ಲವೆಂದು ಆತ್ಮಹತ್ಯೆ: ಕೆಲವು ದಿನಗಳ ಹಿಂದೆ ಹಾವೇರಿಯಲ್ಲಿ ಮದುವೆಗೆ ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದನು. ಮಂಜುನಾಥ ನಾಗನೂರು ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಜುನಾಥ್​ಗೆ ಏಳೆಂಟು ವರ್ಷಗಳಿಂದ ಯಾರೊಬ್ಬರೂ ಮದುವೆಗೆ ಕನ್ಯೆ ಕೊಟ್ಟಿರಲಿಲ್ಲ. ತನ್ನಿಂದ ತಂದೆ ಹಾಗೂ ತಾಯಿಗೆ ತೊಂದರೆಯಾಗುತ್ತಿದೆ ಎಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮದುವೆಯಾಗಲು ಕನ್ಯೆ ಲಭಿಸದಿರುವುದಕ್ಕೆ ಆತ್ಮಹತ್ಯೆಗೆ ಯತ್ನ: ವಯಸ್ಸಾದರೂ ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತ್ತು. ಯುವಕ ಸ್ಮಶಾನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ. ವಯಸ್ಸಾದರೂ ತನಗೆ ವಿವಾಹವಾಗಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯರು ತಕ್ಷಣವೇ ಆತನನ್ನು ರಕ್ಷಣೆ ಮಾಡಿದ್ದರು.

ಇದನ್ನೂ ಓದಿ: ಕನ್ಯೆ ಸಿಗದೆ ಮದುವೆ ಆಗಲಿಲ್ಲ.. ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.