ETV Bharat / state

ಯುವ ದಸರಾ ಸಂಭ್ರಮ ಹೆಚ್ಚಿಸಲಿರುವ ಸುದೀಪ್​​... ಅಪ್ಪು ನಮನ ಕಾರ್ಯಕ್ರಮಕ್ಕೆ ಒಂದು ದಿನ ಮೀಸಲು!

ಸೆ.27ರಿಂದ ಮಹರಾಜ ಕಾಲೇಜಿನಲ್ಲಿ ಯುವ ದಸರಾ ಪ್ರಾರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್​​​.ಟಿ ಸೋಮಶೇಖರ್​​ ಹಾಗೂ ಜನಪ್ರೀಯ ನಟ ಕಿಚ್ಚ ಸುದೀಪ್​ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಪ್ರಮುಖವಾಗಿ ಅಪ್ಪು ನಮನ ಕಾರ್ಯಕ್ರಮಕ್ಕಾಗಿ ಒಂದು ದಿನ ಮೀಸಲು ಇಡಲಾಗಿದೆ.

author img

By

Published : Sep 23, 2022, 9:06 AM IST

KN_MYS
ಯುವ ದಸರಾ ಸಂಭ್ರಮ ಉದ್ಘಾಟಿಸಲಿರುವ ಸುದೀಪ್​

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸೆ.27ರಿಂದ ಅ.3ರವರೆಗೆ ಯುವ ದಸರಾ ನಡೆಯಲಿದ್ದು, ನಟ ಸುದೀಪ್ ಉದ್ಘಾಟನೆ ಮಾಡಲಿದ್ದಾರೆಂದು ಯುವ ದಸರಾ ಉಪಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ತಿಳಿಸಿದರು.

ಎಸ್​ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 27ರಂದು ಸಂಜೆ 6ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ನಟ ಸುದೀಪ್​ ಕಾರ್ಯಕ್ರಮವನ್ನು ಉದ್ಘಾಟಿಸುವರು. ಉದ್ಘಾಟನೆ ಬಳಿಕ ಶ್ರೀಧರ್ ಜೈನ್ ನೃತ್ಯ ತಂಡ, ರಘುಧೀಕ್ಷಿತ್ ಹಾಗೂ ಗಾಯಕಿ ಮಂಗ್ಲಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

28ರಂದು ಅಪ್ಪು ನಮನ: ಯುವ ದಸರಾದ 2ನೇ ದಿನದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‍ಕುಮಾರ್​ಗೆ ಗೌರವ ಸಲ್ಲಿಸಲಾಗುತ್ತಿದ್ದು, ಗಾಯಕರಾದ ಗುರುಕಿರಣ್, ವಿಜಯಪ್ರಕಾಶ್, ಕುನಾಲ್ ಗಾಂಜಾವಾಲ ಗಾಯನದ ಮೂಲಕ ಅಪ್ಪು ಅವರಿಗೆ ನಮನ ಸಲ್ಲಿಸಲಿದ್ದಾರೆ. ಸೆ.29ರಂದು ಲೇಸರ್ ಶೋ, ಸಿಗ್ನೇಚರ್ ಗ್ರೂಪ್ ನೃತ್ಯ ತಂಡ, ಕನ್ನಿಕಾ ಕಪೂರ್ ಮತ್ತು ಅಸೆಂಟ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ. ಸೆ 30ರಂದು ಸ್ಯಾಂಡಲ್‍ವುಡ್ ನೈಟ್ ಇರಲಿದ್ದು, ಕನ್ನಡದ ನಟಿ ನಟಿಯರು ಭಾಗವಹಿಸಲಿದ್ದಾರೆ. ಚಿತ್ರೀಕರಣವಿರುವ ಕಾರಣ ಕೆಲ ಕಲಾವಿದರು ಬರುವುದು ನಿರ್ಧಾರವಾಗಿಲ್ಲ. ಎರಡು ಮೂರು ದಿನಗಳಲ್ಲಿ ಯವ್ಯಾವ ಕಲಾವಿದರು ಭಾಗವಹಿಸಲಿದ್ದಾರೆ ಎಂಬುದು ಅಂತಿಮವಾಗಲಿದೆ ಎಂದರು.

ಅ.1ರಂದು ಗಾಯಕಿ ಡಾ.ಶಮಿತ ಮಲ್ನಾಡ್ ತಮ್ಮ ಗಾಯನದ ಮೂಲಕ ರಂಜಿಸಲಿದ್ದಾರೆ. ಅ.2ರಂದು ಪವನ್ ಡ್ಯಾನ್ಸರ್, ನಟಿ ಹರ್ಷಿಕಾ ಪೂಣಚ್ಚ, ನಟ ವಿಜಯ ರಾಘವೇಂದ್ರ, ಅಮಿತ್ ತ್ರಿವೇದಿ ಯುವ ದಸರಾದಲ್ಲಿ ಪಾಲ್ಗೊಳ್ಳುವರು. ಅಂತಿಮ ದಿನವಾದ ಅ.3ರಂದು ಸುಪ್ರಿಯಾ ರಾಮ್ ಮತ್ತು ಮಹಿಳಾ ಬ್ಯಾಂಡ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ. ಬಳಿಕ ಪ್ಯಾಷನ್ ಶೋ ಇರಲಿದೆ ಎಂದು ಮಾಹಿತಿ ನೀಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನಟ ಸುದೀಪ್ ಅವರಿಗೆ ಯಾವುದೇ ಸಂಭಾವನೆ ನೀಡುತ್ತಿಲ್ಲ. ಉಳಿದ ಕಲಾವಿದರಿಗೆ ಸಂಭಾವನೆ ನೀಡಲಾಗುತ್ತಿದ್ದು, ದಸರಾ ಬಳಿಕ ಯಾವ್ಯಾವ ಕಲಾವಿದರಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂದು ತಿಳಿಸಲಾಗುವುದು ಎಂದರು.

ಇದನ್ನೂ ಓದಿ: ಮೈಸೂರು ದಸರಾ.. ಯುವ ಸಂಭ್ರಮಕ್ಕೆ ಚಾಲನೆ ನೀಡಿದ‌ ನಟ ಡಾಲಿ ಧನಂಜಯ್

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸೆ.27ರಿಂದ ಅ.3ರವರೆಗೆ ಯುವ ದಸರಾ ನಡೆಯಲಿದ್ದು, ನಟ ಸುದೀಪ್ ಉದ್ಘಾಟನೆ ಮಾಡಲಿದ್ದಾರೆಂದು ಯುವ ದಸರಾ ಉಪಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ತಿಳಿಸಿದರು.

ಎಸ್​ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 27ರಂದು ಸಂಜೆ 6ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ನಟ ಸುದೀಪ್​ ಕಾರ್ಯಕ್ರಮವನ್ನು ಉದ್ಘಾಟಿಸುವರು. ಉದ್ಘಾಟನೆ ಬಳಿಕ ಶ್ರೀಧರ್ ಜೈನ್ ನೃತ್ಯ ತಂಡ, ರಘುಧೀಕ್ಷಿತ್ ಹಾಗೂ ಗಾಯಕಿ ಮಂಗ್ಲಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

28ರಂದು ಅಪ್ಪು ನಮನ: ಯುವ ದಸರಾದ 2ನೇ ದಿನದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‍ಕುಮಾರ್​ಗೆ ಗೌರವ ಸಲ್ಲಿಸಲಾಗುತ್ತಿದ್ದು, ಗಾಯಕರಾದ ಗುರುಕಿರಣ್, ವಿಜಯಪ್ರಕಾಶ್, ಕುನಾಲ್ ಗಾಂಜಾವಾಲ ಗಾಯನದ ಮೂಲಕ ಅಪ್ಪು ಅವರಿಗೆ ನಮನ ಸಲ್ಲಿಸಲಿದ್ದಾರೆ. ಸೆ.29ರಂದು ಲೇಸರ್ ಶೋ, ಸಿಗ್ನೇಚರ್ ಗ್ರೂಪ್ ನೃತ್ಯ ತಂಡ, ಕನ್ನಿಕಾ ಕಪೂರ್ ಮತ್ತು ಅಸೆಂಟ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ. ಸೆ 30ರಂದು ಸ್ಯಾಂಡಲ್‍ವುಡ್ ನೈಟ್ ಇರಲಿದ್ದು, ಕನ್ನಡದ ನಟಿ ನಟಿಯರು ಭಾಗವಹಿಸಲಿದ್ದಾರೆ. ಚಿತ್ರೀಕರಣವಿರುವ ಕಾರಣ ಕೆಲ ಕಲಾವಿದರು ಬರುವುದು ನಿರ್ಧಾರವಾಗಿಲ್ಲ. ಎರಡು ಮೂರು ದಿನಗಳಲ್ಲಿ ಯವ್ಯಾವ ಕಲಾವಿದರು ಭಾಗವಹಿಸಲಿದ್ದಾರೆ ಎಂಬುದು ಅಂತಿಮವಾಗಲಿದೆ ಎಂದರು.

ಅ.1ರಂದು ಗಾಯಕಿ ಡಾ.ಶಮಿತ ಮಲ್ನಾಡ್ ತಮ್ಮ ಗಾಯನದ ಮೂಲಕ ರಂಜಿಸಲಿದ್ದಾರೆ. ಅ.2ರಂದು ಪವನ್ ಡ್ಯಾನ್ಸರ್, ನಟಿ ಹರ್ಷಿಕಾ ಪೂಣಚ್ಚ, ನಟ ವಿಜಯ ರಾಘವೇಂದ್ರ, ಅಮಿತ್ ತ್ರಿವೇದಿ ಯುವ ದಸರಾದಲ್ಲಿ ಪಾಲ್ಗೊಳ್ಳುವರು. ಅಂತಿಮ ದಿನವಾದ ಅ.3ರಂದು ಸುಪ್ರಿಯಾ ರಾಮ್ ಮತ್ತು ಮಹಿಳಾ ಬ್ಯಾಂಡ್ ತಂಡ ಕಾರ್ಯಕ್ರಮ ನಡೆಸಿಕೊಡಲಿದೆ. ಬಳಿಕ ಪ್ಯಾಷನ್ ಶೋ ಇರಲಿದೆ ಎಂದು ಮಾಹಿತಿ ನೀಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನಟ ಸುದೀಪ್ ಅವರಿಗೆ ಯಾವುದೇ ಸಂಭಾವನೆ ನೀಡುತ್ತಿಲ್ಲ. ಉಳಿದ ಕಲಾವಿದರಿಗೆ ಸಂಭಾವನೆ ನೀಡಲಾಗುತ್ತಿದ್ದು, ದಸರಾ ಬಳಿಕ ಯಾವ್ಯಾವ ಕಲಾವಿದರಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂದು ತಿಳಿಸಲಾಗುವುದು ಎಂದರು.

ಇದನ್ನೂ ಓದಿ: ಮೈಸೂರು ದಸರಾ.. ಯುವ ಸಂಭ್ರಮಕ್ಕೆ ಚಾಲನೆ ನೀಡಿದ‌ ನಟ ಡಾಲಿ ಧನಂಜಯ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.