ರಾಯಚೂರು: ಲೋಕಸಭೆ ಚುನಾವಣೆಗೆ ಜಿಲ್ಲೆಯಲ್ಲಿ ತಯಾರಿ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 15 ಲಕ್ಷ 91 ಸಾವಿರ 330 ಮತದಾರರಿದ್ದಾರೆ. ಈ ವರ್ಷ 25,468 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. 1833 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ 10 ವಾಹನಗಳು, 6.10 ಲಕ್ಷ ರೂಪಾಯಿ ನಗದು, 12,26,582 ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಕೆಲವೆಡೆ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ ಜನರೊಂದಿಗೆ ಮಾತನಾಡಲಾಗುತ್ತಿದೆ. ಎಲ್ಲರೂ ಮತದಾನ ಮಾಡುವಂತೆ ಶರತ್ ಮನವಿ ಮಾಡಿದ್ರು.