ETV Bharat / state

7ನೇ ಆರ್ಥಿಕ ಗಣತಿ ಕಾರ್ಯಕ್ರಮ: ಯಶಸ್ಸಿಗೆ ಶ್ರಮವಹಿಸಲು ಅಪರ ಜಿಲ್ಲಾಧಿಕಾರಿ ಕರೆ

author img

By

Published : Jul 13, 2019, 2:50 AM IST

ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 7 ನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಆರ್ಥಿಕ ಜನಗಣತಿ-2019

ರಾಯಚೂರು : 7ನೇ ಆರ್ಥಿಕ ಗಣತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ತರಬೇತಿದಾರರು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 7 ನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಪ್ರತಿಯೊಂದು ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. 10 ನೇ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ್ ಫೋನ್ ಹೊಂದಿರುವವರು ಈ ಗಣತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

7ನೇ ಆರ್ಥಿಕ ಗಣತಿ ಕಾರ್ಯಕ್ರಮ

ಸಹಾಯಕ ಆಯುಕ್ತರಾದ ಶಿಲ್ಪಾ ಶರ್ಮಾ ಮಾತನಾಡಿ, ದೇಶಾದ್ಯಂತ 7 ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದೆ. ಇದು ದೇಶದ ಎಲ್ಲಾ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವ ಜನರಿಗೆ ಅನ್ವಯಿಸುತ್ತದೆ. ಆದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯ ದತ್ತಾಂಶವನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ತರಬೇತುದಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೇಶ್‍ಕುಮಾರ್, ರಾಯಚೂರು ತಾಲೂಕು ತಹಶೀಲ್ದಾರರಾದ ಡಾ.ಹಂಪಣ್ಣ, ಕಾರ್ಮಿಕ ನಿರೀಕ್ಷಕರಾದ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿದಂತೆ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಉಪಸ್ಥಿತರಿದ್ದರು.

ರಾಯಚೂರು : 7ನೇ ಆರ್ಥಿಕ ಗಣತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ತರಬೇತಿದಾರರು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 7 ನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಪ್ರತಿಯೊಂದು ಹಳ್ಳಿಯಲ್ಲೂ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. 10 ನೇ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ್ ಫೋನ್ ಹೊಂದಿರುವವರು ಈ ಗಣತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

7ನೇ ಆರ್ಥಿಕ ಗಣತಿ ಕಾರ್ಯಕ್ರಮ

ಸಹಾಯಕ ಆಯುಕ್ತರಾದ ಶಿಲ್ಪಾ ಶರ್ಮಾ ಮಾತನಾಡಿ, ದೇಶಾದ್ಯಂತ 7 ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದೆ. ಇದು ದೇಶದ ಎಲ್ಲಾ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವ ಜನರಿಗೆ ಅನ್ವಯಿಸುತ್ತದೆ. ಆದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯ ದತ್ತಾಂಶವನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ತರಬೇತುದಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೇಶ್‍ಕುಮಾರ್, ರಾಯಚೂರು ತಾಲೂಕು ತಹಶೀಲ್ದಾರರಾದ ಡಾ.ಹಂಪಣ್ಣ, ಕಾರ್ಮಿಕ ನಿರೀಕ್ಷಕರಾದ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿದಂತೆ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಉಪಸ್ಥಿತರಿದ್ದರು.

Intro: ರಾಯಚೂರು ಜು.12
7ನೇ ಆರ್ಥಿಕ ಗಣತಿ ಕಾರ್ಯವನ್ನು ಜಿಲ್ಲಾ ಮಟ್ಟದ ತರಬೇತಿದಾರರು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರಿಂದು ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಏಳನೇ ಆರ್ಥಿಕ ಜನಗಣತಿ-2019 ರ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
.Body:ಮೊದಲ ಹಂತದ ತರಬೇತಿ ಕಾರ್ಯಾಗಾರ ಇದಾಗಿದ್ದು ಅSಅ ತರಬೇತಿದಾರರು ಚೆನ್ನಾಗಿ ತಿಳಿದುಕೊಂಡು ತಮಗೆ ವಹಿಸಿದ ಕಾರ್ಯವನ್ನು ಯಶಸ್ಸುಗೊಳಿಸಬೇಕೆಂದರು. ಪ್ರತಿಯೊಂದು ಹಳ್ಳಿಯಲ್ಲೂ ಮನೆ ಮನೆಗೆ ಬೇಟಿ ನೀಡಿ ಮಾಹಿತಿ ಪಡೆದು ದಿನನಿತ್ಯ ನವೀಕರಿಸಬೇಕು. ಹತ್ತನೆ ತರಗತಿವರೆಗೆ ಶಿಕ್ಷಣ ಪಡೆದವರು ಹಾಗೂ ಆಂಡ್ರಾಯ್ಡ್ ಫೋನ್ ಹೊಂದಿರುವವರು ಈ ಗಣತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.
ತರಬೇತಿಯಲ್ಲಿ ಮೊದಲು ಜಿಲ್ಲಾ ಮಟ್ಟದಲ್ಲಿ ನಂತರ ತಾಲೂಕ ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಇದರಲ್ಲಿ ಸರಿಯಾಗಿ ಮಾಹಿತಿ ತಿಳಿದು ನಿಮ್ಮ ಗೆಳೆಯರಿಗೆ ಈ ಸಂದೇಶವನ್ನು ರವಾನೆ ಮಾಡಿ. ಸರ್ವೆ ತರಬೇತುದಾರರು ಕೆಲಸ ಕಾರ್ಯನಿರ್ವಹಿಸಿದ ಮೇಲೆ ನಿಮ್ಮ ಖಾತೆಗೆ ನೇರವಾಗಿ ಹಣ ಸಂಗ್ರಹವಾಗುತ್ತದೆ. ಈ ಏಳನೇ ಆರ್ಥಿಕ ಗಣತಿ ಜವಾಬ್ದಾರಿಯುತವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಸರಕಾರದ ಯೋಜನೆಗಳು ನಿಮ್ಮ ವ್ಯಾಪ್ತಿಗೆ ಬರುತ್ತವೆ. ಅದಕ್ಕಾಗಿ ಎಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ತರಬೇತಿದಾರರು ಈ ಗಣತಿಯ ಕಾರ್ಯವನ್ನು ಯಶಸ್ವೀಯಾಗಿ ಕೈಗೊಂಡು ರಾಯಚೂರು ಜಿಲ್ಲೆಯನ್ನು ಪ್ರಥಮ ಹಂತದಲ್ಲಿ ತರುವ ಪ್ರಯತ್ನ ಮಾಡಬೇಕು ಎಂದರು.
ಸಹಾಯಕ ಆಯುಕ್ತರಾದ ಶಿಲ್ಪಾ ಶರ್ಮಾ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ದೇಶದಾದ್ಯಂತ 7ನೇ ಆರ್ಥಿಕ ಜನಗಣತಿ ಕಾರ್ಯಾಗಾರ ನಡೆಯುತ್ತಿದ್ದು, ಇದು ದೇಶದ ಎಲ್ಲಾ ಸಾಮಾನ್ಯ ಜನರಿಂದ ಹಿಡಿದು ವ್ಯವಹಾರ ಮಾಡುವ ಜನರಿಗೆ ಅನ್ವಯಿಸುತ್ತದೆ. ಅದ್ದರಿಂದ ತರಬೇತಿದಾರರು ಮನೆ ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯ ದತ್ತಾಂಶವನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಒಪ್ಪಿಸಬೇಕು ಎಂದು ತರಬೇತುದಾರರಿಗೆ ತಿಳಿಸಿದರು.
ಬಳ್ಳಾರಿಯಿಂದ ಆಗಮಿಸಿದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಚನ್ನಬಸವ ಅವರು ಮಾತನಾಡಿ ಆರ್ಥಿಕ ಚಟುವಟಿಕೆಗೆ ಸಂಬಂಧಿಸಿದ ಜನಗಣತಿ ಇದಾಗಿದ್ದು, ಯಾವ ಯಾವ ರಾಜ್ಯಗಳು ಹಾಗೂ ಜಿಲ್ಲೆಗಳು ಆರ್ಥಿಕವಾಗಿ ಹಿಂದುಳಿದ ಪ್ರದೇಶವಾಗಿವೆ ಎಂಬುದನ್ನು ಈ ಗಣತಿಯಲ್ಲಿ ನೋಡಬಹುದಾಗಿದೆ. ಕುಟುಂಬದಲ್ಲಿ ವಾಸಿಸುವ ಮನೆಗಳು. ವಾಸವೇತರ ಮನೆಗಳು ಮತ್ತು ವಾಣಿಜ್ಯ ಮನೆಗಳಿರುತ್ತವೆ. ಅದಕ್ಕಾಗಿ ಈ ತರಬೇತಿಯಲ್ಲಿ ಚೆನ್ನಾಗಿ ತಿಳಿದುಕೊಂಡು ಸರ್ವೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪ್ರೋಬೇಷನರಿ ಐಎಎಸ್ ಅಧಿಕಾರಿ ರಿತೇಶ್‍ಕುಮಾರ್, ರಾಯಚೂರು ತಾಲೂಕು ತಹಶೀಲ್ದಾರರಾದ ಡಾ.ಹಂಪಣ್ಣ, ಕಾರ್ಮಿಕ ನಿರೀಕ್ಷಕರಾದ ವೆಂಕಟಸ್ವಾಮಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶ್ರೀನಿವಾಸ, ಜಿಲ್ಲಾ ಮಟ್ಟದ ಅಧಿಕಾರಿ ನಾಗರಾಜ ಸೇರಿದಂತೆ ತರಬೇತಿಗೆ ಆಗಮಿಸಿದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸದಸ್ಯರು ಉಪಸ್ಥಿತರಿದ್ದರುConclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.