ETV Bharat / state

ಅಸ್ವಸ್ಥ ವಿದ್ಯಾರ್ಥಿನಿ ಸಾವು: ರಿಮ್ಸ್​​​​​ ವೈದ್ಯರ ನಿರ್ಲಕ್ಷ್ಯ ಆರೋಪ - undefined

ರಿಮ್ಸ್ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರಿಮ್ಸ್ ಆಸ್ಪತ್ರೆ
author img

By

Published : Apr 26, 2019, 10:41 PM IST

ರಾಯಚೂರು: ಸೂಕ್ತ ಚಿಕಿತ್ಸೆ ನೀಡದೆ ರಿಮ್ಸ್ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದ ವಿದ್ಯಾರ್ಥಿನಿ ನಾಗಮ್ಮ(14) ಮೃತ ವಿದ್ಯಾರ್ಥಿನಿ. ವಾಂತಿ, ಭೇದಿಯಿಂದ ನರಳುತ್ತಿದ್ದ ನಾಗಮ್ಮನನ್ನು ಮೊದಲು ಕವಿತಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಅಂತೆಯೇ ರಿಮ್ಸ್ ಆಸ್ಪತ್ರೆಗೆ ಕರೆತಂದಾಗ ಇಲ್ಲಿನ ವೈದ್ಯರು ಸೂಕ್ತ ಚಿಕಿತ್ಸೆ ನೀಡದ ಕಾರಣ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ರಿಮ್ಸ್ ಆಸ್ಪತ್ರೆ

ಚಿಕಿತ್ಸೆಗೆ ಕರೆತಂದ ವಿದ್ಯಾರ್ಥಿನಿಯನ್ನ ಓಪಿಡಿಯಿಂದ ತುರ್ತು ಚಿಕಿತ್ಸಾ ಘಟಕಕ್ಕೆ, ತುರ್ತು ಚಿಕಿತ್ಸೆಯಿಂದ ಓಪಿಡಿ ಅಲೆದಾಡಿಸಿದರು. ಮೂರು ಗಂಟೆಗಳ ಕಾಲ ಯಾವುದೇ ರೀತಿಯ ಚಿಕಿತ್ಸೆ ನೀಡಲಿಲ್ಲ ಎಂದು ಮೃತ ಬಾಲಕಿ ಪೋಷಕರು ದೂರಿದ್ದಾರೆ. ಬಾಲಕಿಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

RIMS hospital
ರಿಮ್ಸ್ ಆಸ್ಪತ್ರೆ

ಇನ್ನು ರಿಮ್ಸ್ ಆಸ್ಪತ್ರೆಯ ವೈದ್ಯರೆಲ್ಲ ಖಾಸಗಿ ಕ್ಲಿನಿಕ್​ನಲ್ಲಿ ಕೆಲಸ ಮಾಡುತ್ತಿದ್ದು, ಹೆಚ್ಚಿನ ಸಮಯ ಅಲ್ಲಿಯೇ ಕಳೆಯುತ್ತಾರೆ.‌ ಇದರಿಂದ ಸರ್ಕಾರಿ ಆಸ್ಪತ್ರೆಯನ್ನೇ ನಂಬಿಕೊಂಡು ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ವಿದ್ಯಾರ್ಥಿನಿ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಸಂಘಟನೆ ಮುಖಂಡ ಆರ್. ಮಾನಸಯ್ಯ ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು: ಸೂಕ್ತ ಚಿಕಿತ್ಸೆ ನೀಡದೆ ರಿಮ್ಸ್ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದ ವಿದ್ಯಾರ್ಥಿನಿ ನಾಗಮ್ಮ(14) ಮೃತ ವಿದ್ಯಾರ್ಥಿನಿ. ವಾಂತಿ, ಭೇದಿಯಿಂದ ನರಳುತ್ತಿದ್ದ ನಾಗಮ್ಮನನ್ನು ಮೊದಲು ಕವಿತಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಅಂತೆಯೇ ರಿಮ್ಸ್ ಆಸ್ಪತ್ರೆಗೆ ಕರೆತಂದಾಗ ಇಲ್ಲಿನ ವೈದ್ಯರು ಸೂಕ್ತ ಚಿಕಿತ್ಸೆ ನೀಡದ ಕಾರಣ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ರಿಮ್ಸ್ ಆಸ್ಪತ್ರೆ

ಚಿಕಿತ್ಸೆಗೆ ಕರೆತಂದ ವಿದ್ಯಾರ್ಥಿನಿಯನ್ನ ಓಪಿಡಿಯಿಂದ ತುರ್ತು ಚಿಕಿತ್ಸಾ ಘಟಕಕ್ಕೆ, ತುರ್ತು ಚಿಕಿತ್ಸೆಯಿಂದ ಓಪಿಡಿ ಅಲೆದಾಡಿಸಿದರು. ಮೂರು ಗಂಟೆಗಳ ಕಾಲ ಯಾವುದೇ ರೀತಿಯ ಚಿಕಿತ್ಸೆ ನೀಡಲಿಲ್ಲ ಎಂದು ಮೃತ ಬಾಲಕಿ ಪೋಷಕರು ದೂರಿದ್ದಾರೆ. ಬಾಲಕಿಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

RIMS hospital
ರಿಮ್ಸ್ ಆಸ್ಪತ್ರೆ

ಇನ್ನು ರಿಮ್ಸ್ ಆಸ್ಪತ್ರೆಯ ವೈದ್ಯರೆಲ್ಲ ಖಾಸಗಿ ಕ್ಲಿನಿಕ್​ನಲ್ಲಿ ಕೆಲಸ ಮಾಡುತ್ತಿದ್ದು, ಹೆಚ್ಚಿನ ಸಮಯ ಅಲ್ಲಿಯೇ ಕಳೆಯುತ್ತಾರೆ.‌ ಇದರಿಂದ ಸರ್ಕಾರಿ ಆಸ್ಪತ್ರೆಯನ್ನೇ ನಂಬಿಕೊಂಡು ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ವಿದ್ಯಾರ್ಥಿನಿ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಸಂಘಟನೆ ಮುಖಂಡ ಆರ್. ಮಾನಸಯ್ಯ ಆಕ್ರೋಶ ವ್ಯಕ್ತಪಡಿಸಿದರು.

Intro:ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿ ಸಾವ್ಬಪ್ಪಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.Body:ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದ ವಿದ್ಯಾರ್ಥಿನಿ ನಾಗಮ್ಮ(೧೪) ಮೃತ ವಿದ್ಯಾರ್ಥನಿ.
ವಾಂತಿ ಭೇದಿ ಕಾರಣದಿಂದ ಕವಿತಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲೆಯ ರಿಮ್ಸ್ ಆಸ್ಪತ್ರೆಗೆ ದಾಖಲಾಗಲು ಸ್ಥಳೀಯ ವೈಧ್ಯರು ಸೂಚಿಸಿದ್ದರು. ಹೀಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲು ಬಂದ ಪಾಲಕರಿಗೆ, ಸರಿಯಾದ ಮಾರ್ಗದರ್ಶನ, ಹಾಗೂ ಚಿಕಿತ್ಸೆ ನೀಡದ ಕಾರಣ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗುತ್ತಿದೆ. ಚಿಕಿತ್ಸೆಗೆ ಕರೆತಂದ ವಿದ್ಯಾರ್ಥಿನಿಯನ್ನ ಓಪಿಡಿಯಿಂದ- ತುರ್ತು ಚಿಕಿತ್ಸಾ ಘಟಕಕ್ಕೆ, ತುರ್ತು ಚಿಕಿತ್ಸೆಯಿಂದ-ಓಪಿಡಿ ಅಲೆದಾಡಿಸಿ, ಮೂರು ಗಂಟೆಗಳ ಕಾಲ ಯಾವುದೇ ಚಿಕಿತ್ಸೆ ನೀಡದ್ದರಿಂದ ಬಾಲಕಿ ಮರಣ ಎಂದು ಪೊಷಕರು ದೂರಿದ್ದಾರೆ. ಬಾಲಕಿಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.Conclusion:ಇನ್ನು ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರೆಲ್ಲ ಖಾಸಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಸಮಯ ವೈದ್ಯರಿ ಖಾಸಗಿ ಕ್ಲಿನಿಕ್ ನಲ್ಲಿ ಕಳೆಯುತ್ತಾರೆ.‌ಇದರಿಂದ ಸರಕಾರ ಸ್ವಾಮ್ಯದ ಆಸ್ಪತ್ರೆ ನಂಬಿಕೊಂಡ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಪ್ರಗತಿಪರ ಸಂಘಟನೆ ಮುಖಂಡರು ದೂರಿದ್ದಾರೆ.
ಬೈಟ್.೧: ಆರ್. ಮಾನಸಯ್ಯ, ಪ್ರಗತಿಪರ ಸಂಘಟನೆ ಮುಖಂಡ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.