ETV Bharat / state

ರಾಯಚೂರು: ಪರೀಕ್ಷೆಯಲ್ಲಿ ಕಾಪಿ, ಸಿಕ್ಕಿಬಿದ್ದಾಗ ಕಟ್ಟಡದ ಮೇಲಿಂದ ಹಾರಿದ ವಿದ್ಯಾರ್ಥಿನಿ

ರಾಯಚೂರು ವಿಶ್ವವಿದ್ಯಾಲಯ ಆವರಣದ ಕಟ್ಟಡವೊಂದರ ಮೇಲಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

author img

By ETV Bharat Karnataka Team

Published : Nov 29, 2023, 7:21 PM IST

Updated : Nov 29, 2023, 7:30 PM IST

ಕಟ್ಟಡ ಮೇಲಿಂದ ಹಾರಿದ  ವಿದ್ಯಾರ್ಥಿನಿ
ಕಟ್ಟಡ ಮೇಲಿಂದ ಹಾರಿದ ವಿದ್ಯಾರ್ಥಿನಿ

ರಾಯಚೂರು: ಸ್ನಾತಕೋತ್ತರ ಪದವಿ(ಪಿಜಿ) ವಿದ್ಯಾರ್ಥಿನಿಯೋರ್ವಳು ಕಟ್ಟಡದ ಮೇಲಿಂದ ಹಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ಇಂದು ನಡೆದಿದೆ.

ಕೆಮಿಸ್ಟ್ರಿ ವಿಭಾಗದ 4ನೇ ಸೆಮಿಸ್ಟರ್ ವಿದ್ಯಾರ್ಥಿನಿ ಮಹಡಿ ಮೇಲಿಂದ ಹಾರಿದ್ದು ಎಂದು ಗುರುತಿಸಲಾಗಿದೆ. ಕಳೆದ ಸೋಮವಾರದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಿದ್ದು, ಇಂದು ಕೂಡ ಬೆಳಗ್ಗೆ ಪರೀಕ್ಷೆ ನಡೆದಿತ್ತು. ಈ ವೇಳೆ ವಿದ್ಯಾರ್ಥಿನಿ ನಕಲು ಮಾಡಿದ್ದ ಕಾರಣ ಪರೀಕ್ಷೆ ಪತ್ರಿಕೆಯನ್ನು ಪಡೆದು ಕೊಠಡಿಯಿಂದ ಹೊರ ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ.

ಬಳಿಕ ಹೊರ ಬಂದ ವಿದ್ಯಾರ್ಥಿನಿ ವಿವಿ ಆವರಣದಲ್ಲಿ ಮಹಡಿಯೊಂದರ ಮೇಲೆ ತೆರಳಿ ಅಲ್ಲಿಂದ ಕೆಳಗೆ ಹಾರಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ವಿವಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಬಂಧ ರಾಯಚೂರು ವಿವಿಯ ಕುಲಪತಿ ಪ್ರೋ. ಹರಿಶ್ ರಾಮಸ್ವಾಮಿಯವರನ್ನ ದೂರವಾಣಿ ಮೂಲಕ ಸಂಪರ್ಕಿಸಿದಾಗ, ಪರೀಕ್ಷೆಯಲ್ಲಿ ಕಾಪಿ ಚೀಟಿ ಮಾಡುವ ವೇಳೆ ಸಿಕ್ಕಿಬಿದ್ದವರ ಉತ್ತರ ಪತ್ರಿಕೆ ಪಡೆದು ಹೊರಹಾಕಲಾಗಿದೆ. ಇಂದು ಮೂರ್ನಾಲ್ಕು ವಿದ್ಯಾರ್ಥಿಗಳು ನಕಲು ಮಾಡುವ ವೇಳೆ ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಹೊರ ಹಾಕಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ಮಹಡಿ ಮೇಲಿಂದ ಹಾರಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ವಿದ್ಯಾರ್ಥಿನಿಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಪ್ರಕರಣ, ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸನದಲ್ಲಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಯುವತಿ ಹಾಸನ ನಗರದ ಹೊರವಲಯದಲ್ಲಿರುವ ಕಾಲೇಜುವೊಂದರಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು, ಇದರಿಂದ ತನ್ನ ಮರ್ಯಾದೆ ಹಾಳಾಯ್ತು ಎಂಬ ಕಾರಣಕ್ಕೆ ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿ ಬಂದಿತ್ತು.

ಕಾಲೇಜಿಗೆ ಬೆಂಡ ಎಂದದಕ್ಕೆ ಆತ್ಮಹತ್ಯೆ; ರಾಯಚೂರು ಗದ್ವಾಲ್​ ರಸ್ತೆಯಲ್ಲಿನ ಎಮ್​ವಿಜಿ ಕಾಲೋನಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿತ್ತು. ಕಾಲೇಜಿಗೆ ಹೋಗಬೇಡ ಎಂದು ಪೋಷಕರು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು.. ರಾಷ್ಟ್ರೀಯ ರನ್ನಿಂಗ್ ರೇಸ್ ಸೋಲಿನಿಂದ ಖಿನ್ನತೆ: ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು: ಸ್ನಾತಕೋತ್ತರ ಪದವಿ(ಪಿಜಿ) ವಿದ್ಯಾರ್ಥಿನಿಯೋರ್ವಳು ಕಟ್ಟಡದ ಮೇಲಿಂದ ಹಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ಇಂದು ನಡೆದಿದೆ.

ಕೆಮಿಸ್ಟ್ರಿ ವಿಭಾಗದ 4ನೇ ಸೆಮಿಸ್ಟರ್ ವಿದ್ಯಾರ್ಥಿನಿ ಮಹಡಿ ಮೇಲಿಂದ ಹಾರಿದ್ದು ಎಂದು ಗುರುತಿಸಲಾಗಿದೆ. ಕಳೆದ ಸೋಮವಾರದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಿದ್ದು, ಇಂದು ಕೂಡ ಬೆಳಗ್ಗೆ ಪರೀಕ್ಷೆ ನಡೆದಿತ್ತು. ಈ ವೇಳೆ ವಿದ್ಯಾರ್ಥಿನಿ ನಕಲು ಮಾಡಿದ್ದ ಕಾರಣ ಪರೀಕ್ಷೆ ಪತ್ರಿಕೆಯನ್ನು ಪಡೆದು ಕೊಠಡಿಯಿಂದ ಹೊರ ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ.

ಬಳಿಕ ಹೊರ ಬಂದ ವಿದ್ಯಾರ್ಥಿನಿ ವಿವಿ ಆವರಣದಲ್ಲಿ ಮಹಡಿಯೊಂದರ ಮೇಲೆ ತೆರಳಿ ಅಲ್ಲಿಂದ ಕೆಳಗೆ ಹಾರಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ವಿವಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಬಂಧ ರಾಯಚೂರು ವಿವಿಯ ಕುಲಪತಿ ಪ್ರೋ. ಹರಿಶ್ ರಾಮಸ್ವಾಮಿಯವರನ್ನ ದೂರವಾಣಿ ಮೂಲಕ ಸಂಪರ್ಕಿಸಿದಾಗ, ಪರೀಕ್ಷೆಯಲ್ಲಿ ಕಾಪಿ ಚೀಟಿ ಮಾಡುವ ವೇಳೆ ಸಿಕ್ಕಿಬಿದ್ದವರ ಉತ್ತರ ಪತ್ರಿಕೆ ಪಡೆದು ಹೊರಹಾಕಲಾಗಿದೆ. ಇಂದು ಮೂರ್ನಾಲ್ಕು ವಿದ್ಯಾರ್ಥಿಗಳು ನಕಲು ಮಾಡುವ ವೇಳೆ ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಹೊರ ಹಾಕಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ಮಹಡಿ ಮೇಲಿಂದ ಹಾರಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ವಿದ್ಯಾರ್ಥಿನಿಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಪ್ರಕರಣ, ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸನದಲ್ಲಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಯುವತಿ ಹಾಸನ ನಗರದ ಹೊರವಲಯದಲ್ಲಿರುವ ಕಾಲೇಜುವೊಂದರಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು, ಇದರಿಂದ ತನ್ನ ಮರ್ಯಾದೆ ಹಾಳಾಯ್ತು ಎಂಬ ಕಾರಣಕ್ಕೆ ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿ ಬಂದಿತ್ತು.

ಕಾಲೇಜಿಗೆ ಬೆಂಡ ಎಂದದಕ್ಕೆ ಆತ್ಮಹತ್ಯೆ; ರಾಯಚೂರು ಗದ್ವಾಲ್​ ರಸ್ತೆಯಲ್ಲಿನ ಎಮ್​ವಿಜಿ ಕಾಲೋನಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿತ್ತು. ಕಾಲೇಜಿಗೆ ಹೋಗಬೇಡ ಎಂದು ಪೋಷಕರು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು.. ರಾಷ್ಟ್ರೀಯ ರನ್ನಿಂಗ್ ರೇಸ್ ಸೋಲಿನಿಂದ ಖಿನ್ನತೆ: ವಿದ್ಯಾರ್ಥಿನಿ ಆತ್ಮಹತ್ಯೆ

Last Updated : Nov 29, 2023, 7:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.