ETV Bharat / state

ಲೋಕಸಮರದ ಗೆಲುವಿನ ಬಳಿಕ ಮೈತ್ರಿ ಸರ್ಕಾರ ಪತನ: ಬಿಎಸ್​ವೈ ಭವಿಷ್ಯ - undefined

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಅವರು ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಬಿಎಸ್​ವೈ ಪ್ರಚಾರ
author img

By

Published : Apr 18, 2019, 4:59 PM IST

ರಾಯಚೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬಿರುಸಿನ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯಿಂದ ತಿರಸ್ಕೃತಗೊಂಡು ಕಡಿಮೆ ಸ್ಥಾನಗಳನ್ನು ಪಡೆದ ಜೆಡಿಎಸ್ ಸರ್ಕಾರ ನಡೆಸುತ್ತಿದೆ. ಆದರೆ, 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತಕೊಳ್ಳುವ ಪರಿಸ್ಥಿತಿ ಉಂಟಾಯಿತು ಎಂದರು.

ಕೊಪ್ಪಳ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಬಿಎಸ್​ವೈ ಮತಯಾಚನೆ

ಇದೇ ವೇಳೆ, ಚುನಾವಣೆಯ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ಯಡಿಯೂರಪ್ಪ, ಕೊಪ್ಪಳದ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಒಟ್ಟು 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದಾದ ಬಳಿಕ 24 ಗಂಟೆಗಳಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು‌ ಹೇಳಿದರು.

ಇದಕ್ಕೂ ಮುನ್ನ ಯಡಿಯೂರಪ್ಪ ಅವರು ಪ್ರಚಾರಕ್ಕೆ ಆಗಮಿಸಿದ ಹೆಲಿಕಾಪ್ಟರನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು.

ರಾಯಚೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬಿರುಸಿನ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯಿಂದ ತಿರಸ್ಕೃತಗೊಂಡು ಕಡಿಮೆ ಸ್ಥಾನಗಳನ್ನು ಪಡೆದ ಜೆಡಿಎಸ್ ಸರ್ಕಾರ ನಡೆಸುತ್ತಿದೆ. ಆದರೆ, 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತಕೊಳ್ಳುವ ಪರಿಸ್ಥಿತಿ ಉಂಟಾಯಿತು ಎಂದರು.

ಕೊಪ್ಪಳ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಬಿಎಸ್​ವೈ ಮತಯಾಚನೆ

ಇದೇ ವೇಳೆ, ಚುನಾವಣೆಯ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ಯಡಿಯೂರಪ್ಪ, ಕೊಪ್ಪಳದ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಒಟ್ಟು 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದಾದ ಬಳಿಕ 24 ಗಂಟೆಗಳಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು‌ ಹೇಳಿದರು.

ಇದಕ್ಕೂ ಮುನ್ನ ಯಡಿಯೂರಪ್ಪ ಅವರು ಪ್ರಚಾರಕ್ಕೆ ಆಗಮಿಸಿದ ಹೆಲಿಕಾಪ್ಟರನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು.

Intro:ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಪರವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಪ್ರಚಾರ ನಡೆಸಿದ್ರು. Body:ಪಟ್ಟಣದಲ್ಲಿ ಆಯೋಜಿಸಿದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರಕಾರ ವಿರುದ್ದ ಹರಿಹಾಯ್ದರು. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯಿಂದ ತಿರಸ್ಕೃತಗೊಂಡು ಕಡಿಮೆ ಸ್ಥಾನಗಳನ್ನ‌ ಗೆದ್ದಿರುವ ಜೆಡಿಎಸ್ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆ. ೧೦೪ ಸ್ಥಾನಗಳನ್ನ ಗೆದ್ದಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತಕೊಳ್ಳುವ ಪರಿಸ್ಥಿತಿಯಿದೆ. ಹೀಗಾಗಿ ಕೊಪ್ಪಳದ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಒಟ್ಟು ೨೨ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದೆ. ಇದಾದ ಬಳಿಕ ೨೪ ಗಂಟೆಗಳಲ್ಲಿ ಮೈತ್ರಿ ಸರಕಾರ ಪತನವಾಗಲಿದೆ ಎಂದು‌ ಭವಿಷ್ಯ ನುಡಿದ್ರು.Conclusion:ಕಾರ್ಯಕ್ರಮ ಬಿಜೆಪಿಯ ಮುಖಂಡರು, ಹಾಲಿ-ಮಾಜಿ ಶಾಸಕರು ಸೇರಿದಂತೆ ಇತರರು ಭಾಗವಹಿಸಿದ್ರು. ಇನ್ನು ಪ್ರಚಾರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಬಿಎಸ್‌ವೈ ಹೆಲಿಕಾಪ್ಟರ್ ನ್ನು ಚುನಾವಣೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.