ETV Bharat / state

ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಗುದ್ದಿದ ಸಾರಿಗೆ ಬಸ್‌.. ಸ್ಥಳದಲ್ಲೇ ಕಂಡಕ್ಟರ್‌ ಮತ್ತು ಡ್ರೈವರ್‌ ದುರ್ಮರಣ.. - Photos and script

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ಲಾರಿ ಮತ್ತು ಬಸ್​ ನಡುವೆ ಅಪಘಾತ ಸಂಭವಿಸಿದ್ದು, ಬಸ್​ ಚಾಲಕ ಹಾಗೂ ನಿರ್ವಾಹಕ ಮೃತಪಟ್ಟಿದ್ದಾರೆ.

ಕೆಟ್ಟು ನಿಂತಿದ್ದ ಲಾರಿಗೆ ಬಸ್​ ಡಿಕ್ಕಿ....ಇಬ್ಬರು ಸಾವು
author img

By

Published : Jun 23, 2019, 11:33 AM IST

Updated : Jun 23, 2019, 12:12 PM IST

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ ಚಾಲಕ ಹಾಗೂ ನಿರ್ವಾಹಕ ಮೃತಪಟ್ಟಿದ್ದಾರೆ.

ಚಾಲಕ ಶಿವನಗೌಡ ಬಾಗಲಕೋಟೆ, ನಿರ್ವಾಹಕ ಚಂದ್ರು ಲಿಂಗಸೂಗೂರು ಮೃತ ದುರ್ದೈವಿಗಳು. ಬೆಂಗಳೂರಿನಿಂದ ರಾಯಚೂರಿಗೆ ಬರುವ ವೇಳೆ ಮಾರ್ಗ ಮಧ್ಯೆ 5ಗಂಟೆ ಸುಮಾರಿಗೆ ಈ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೂ ಗಾಯಗಳಾಗಿವೆ. ಅದರಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನ ಹೆಚ್ಚಿನ‌ ಚಿಕಿತ್ಸೆಗಾಗಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

bus and lorry acciedent in raichur
ಕೆಟ್ಟು ನಿಂತಿದ್ದ ಲಾರಿಗೆ ಬಸ್​ ಡಿಕ್ಕಿ....ಇಬ್ಬರು ಸಾವು

ಕೆಟ್ಟು ಹೋದ ಲಾರಿಯನ್ನ ರಸ್ತೆ ಬದಿ ನಿಲ್ಲಿಸಲಾಗಿತ್ತು. ಆದರೆ, ಹಿಂದಿನಿಂದ ಬಂದ ಬಸ್​ ಲಾರಿಗೆ ಡಿಕ್ಕಿ ಹೊಡೆದಿದ್ದು, ಬಸ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಷ್ಟೇ ಅಲ್ಲ, ಲಾರಿಯಲ್ಲಿದ್ದ ಕಬ್ಬಿಣದ ರಾಡುಗಳು ನಿರ್ವಾಹಕ ಮತ್ತು ಚಾಲಕನ ದೇಹದೊಳಗೆ ಹೊಕ್ಕ ಪರಿಣಾಮ ಅವರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ ಚಾಲಕ ಹಾಗೂ ನಿರ್ವಾಹಕ ಮೃತಪಟ್ಟಿದ್ದಾರೆ.

ಚಾಲಕ ಶಿವನಗೌಡ ಬಾಗಲಕೋಟೆ, ನಿರ್ವಾಹಕ ಚಂದ್ರು ಲಿಂಗಸೂಗೂರು ಮೃತ ದುರ್ದೈವಿಗಳು. ಬೆಂಗಳೂರಿನಿಂದ ರಾಯಚೂರಿಗೆ ಬರುವ ವೇಳೆ ಮಾರ್ಗ ಮಧ್ಯೆ 5ಗಂಟೆ ಸುಮಾರಿಗೆ ಈ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೂ ಗಾಯಗಳಾಗಿವೆ. ಅದರಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನ ಹೆಚ್ಚಿನ‌ ಚಿಕಿತ್ಸೆಗಾಗಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

bus and lorry acciedent in raichur
ಕೆಟ್ಟು ನಿಂತಿದ್ದ ಲಾರಿಗೆ ಬಸ್​ ಡಿಕ್ಕಿ....ಇಬ್ಬರು ಸಾವು

ಕೆಟ್ಟು ಹೋದ ಲಾರಿಯನ್ನ ರಸ್ತೆ ಬದಿ ನಿಲ್ಲಿಸಲಾಗಿತ್ತು. ಆದರೆ, ಹಿಂದಿನಿಂದ ಬಂದ ಬಸ್​ ಲಾರಿಗೆ ಡಿಕ್ಕಿ ಹೊಡೆದಿದ್ದು, ಬಸ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಷ್ಟೇ ಅಲ್ಲ, ಲಾರಿಯಲ್ಲಿದ್ದ ಕಬ್ಬಿಣದ ರಾಡುಗಳು ನಿರ್ವಾಹಕ ಮತ್ತು ಚಾಲಕನ ದೇಹದೊಳಗೆ ಹೊಕ್ಕ ಪರಿಣಾಮ ಅವರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಇಬ್ಬರು ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೩-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ಲಾರಿಯಲ್ಲಿದ ಕಬ್ಬಣದ ರಾಡ್‌ಗಳು ದೇಹದೊಳಗೆ ಹೋಗಿ, ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.Body:ಜಿಲ್ಲೆಯ ಸಿಂಧನೂರು ತಾಲೂಕಿನ ದಢೇಸೂಗೂರು ಗ್ರಾಮ ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ಈ ದುರಂತ ಸಂಭವಿಸಿದೆ. ಚಾಲಕ ಶಿವನಗೌಡ ಬಾಗಲಕೋಟೆ, ನಿರ್ವಾಹಕ ಚಂದ್ರು ಲಿಂಗಸೂಗೂರು ಮೃತಪಟ್ಟ ಎಂದು ಗುರುತಿಸಲಾಗಿಸೆ. ಬೆಂಗಳೂರಿನಿಂದ ರಾಯಚೂರು ಗೆ ಬರುವ ವೇಳೆ ಮಾರ್ಗಮದ್ಯ ಈ ಭೀಕರ ದುರಂತ ಸಂಭವಿಸಿದ್ದು, ಐದಾರು ಜನ ಪ್ರಯಾಣಿಕರಿಗೆ ಗಾಯಗೊಂಡಿದ್ದು, ಓರ್ವ ಪ್ರಯಾಣಿಕೆ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬಳ್ಳಾರಿ ಜಿಲ್ಲೆಯ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಜರುಗಿದೆ. ಕಟ್ಟು ಹೋಗಿದ್ದ ಲಾರಿ ರಸ್ತೆಯ ಬದಿಯಲ್ಲಿ ನಿಂತಾಗ, ಬಸ್ ಲಾರಿಗೆ ಡಿಕ್ಕಿಗೆ ಹೊಡೆದ ಪರಿಣಾಮ, ಬಸ್ ಮುಂಭಾಗ ನುಜು ನುಜು ಆಗಿದೆ. ಅಲ್ಲದೆ ಲಾರಿಯಲ್ಲಿದ್ದ ಕಬ್ಬಿಣದ ರಾಡ್‌ಗಳು ಡ್ರೈವರ್ ಮತ್ತು ಚಾಲಕನಿಗೆ ದೇಹಗಳಿಗೆ ನುಗ್ಗಿರುವುದರಿಂದ ಚಾಲಕ, ನಿರ್ವಾಹಕನಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತದೆ. Conclusion:ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು‌ ಆಗಿದೆ.
Last Updated : Jun 23, 2019, 12:12 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.