ETV Bharat / state

ರಾಯಚೂರು, ವಿಜಯಪುರ, ಗದಗದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

author img

By

Published : Apr 13, 2023, 5:40 PM IST

ರಾಯಚೂರು, ವಿಜಯಪುರ ಮತ್ತು ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್​, ಬಿಜೆಪಿ ಸೇರಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

candidates-filed-nomination-in-raichur-vijayapur-gadag
ರಾಯಚೂರು, ವಿಜಯಪುರ, ಗದಗದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ರಾಯಚೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್​ನ ಇಬ್ಬರು ಹಾಲಿ ಶಾಸಕರು, ಬಿಜೆಪಿ ಮಾಜಿ ಶಾಸಕ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಎಸ್​​ಡಿಪಿಐ ಪಕ್ಷದ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ದದ್ದಲ್ ಅವರು ಬೆಂಬಲಿಗರು, ಮುಖಂಡರೊಂದಿಗೆ ಆಗಮಿಸಿ ತಮ್ಮ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಮುಂದಿನ ದಿನದಲ್ಲಿ ಮತ್ತೊಮ್ಮೆ ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿ ಮತ್ತೆ ನಾಮಪತ್ರ ಸಲ್ಲಿಕೆ ಮಾಡುವುದಾಗಿಯೂ ಹೇಳಿದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆರ್.ಬಸವನಗೌಡ ತುರುವಿಹಾಳ ಚುನಾವಣೆ ಅಧಿಕಾರಿಗೆ ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದರು. ಬಳಿಕ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಎಸ್​​ಡಿಪಿಐ ಪಕ್ಷದ ಮುಖಂಡ ಸೈಯದ್ ಇಸಾಕ್ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಿದರು. ನಗರದ ನೇತಾಜಿ ನಗರದಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿದ ಅವರು ಚುನಾವಣಾಧಿಕಾರಿ ನಾಮಪತ್ರವನ್ನು ಸಲ್ಲಿಸಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಮಾತನಾಡಿ, "ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದೇನೆ. ಕೆಲವೇ ದಿನಗಳಲ್ಲಿ ಜಿಲ್ಲಾ ಮುಖಂಡರು, ರಾಜ್ಯ ನಾಯಕರು, ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳೊಂದಿಗೆ ಆಗಮಿಸಿ ಭಿ-ಫಾರಂನೊಂದಿಗೆ ನಾಮಪತ್ರವನ್ನು ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ನೂರಕ್ಕೆ ನೂರು ಜಯಗಳಿಸುತ್ತೇನೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಮತ್ತು ಕಾಂಗ್ರೆಸ್​​ ಮುಖಂಡ ಅಶೋಕ ಮನಗೂಳಿ ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರ ನಾಮಪತ್ರ ಸಲ್ಲಿಕೆ ವೇಳೆ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಹಾಗೂ ಸಹಾಯಕ ಚುನಾವ ಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್​​ ಸಿಂದಗಿ ಮತಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡದಿದ್ದರೂ, ಕಾಂಗ್ರೆಸ್​ ಮುಖಂಡ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ.ಜಿ.ನೆಲ್ಲಗಿ, ರಮೇಶ ಭಂಟನೂರ, ಎಂ.ಕೆ.ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ ನಿಂಗಣ್ಣ ಬಿರಾದಾರ, ಸುರೇಶ ಚವಲರ ಮತ್ತಿತರರು ಉಪಸ್ಥಿತರಿದ್ದರು.

ಗದಗದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ: ಗದಗ ಜಿಲ್ಲೆಯ ನರಗುಂದ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ನರಗುಂದ ತಹಶಿಲ್ದಾರ ಕಚೇರಿಗೆ ಆಗಮಿಸಿದ ಅವರು, ಚುನಾವಣಾ ಅಧಿಕಾರಿ ಗಂಗಪ್ಪ ಎಂ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಎಡಿ ಅಮರವಾಧಗಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದು ಕೇವಲ ಸರಳವಾಗಿ ನಾಮಪತ್ರ ಸಲ್ಲಿಸಿರುವೆ. ಇದೇ 18ರಂದು ಮತ್ತೊಮ್ಮೆ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಲು ತೀರ್ಮಾನ ಮಾಡಿದ್ದೇನೆ. ಸದ್ಯ ಕ್ಷೇತ್ರದಲ್ಲಿ ಓಡಾಟ ಮಾಡುತ್ತಿದ್ದೇನೆ. ಅಲ್ಲದೇ ಕಾಂಗ್ರೆಸ್​ ಪಕ್ಷ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಮತದಾನ ಮಾಡುವಂತೆ ಮನವರಿಕೆ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪ್ರಚಾರ ಇನ್ನಷ್ಟು ಹೆಚ್ಚಾಗಲಿದೆ" ಎಂದರು.

ಗದಗ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ ಪಕ್ಷ ಈಗಾಗಲೇ ಟಿಕೆಟ್‌ ಘೋಷಣೆ ಮಾಡಿದೆ. ಅದರಲ್ಲಿ ನರಗುಂದ ಮತಕ್ಷೇತ್ರವೂ ಒಂದು. ಗದಗ ಮತಕ್ಷೇತ್ರದಿಂದ ಕೈ ಮುಖಂಡ ಹೆಚ್ ಕೆ ಪಾಟೀಲ್​ಗೆ ಟಿಕೆಟ್​ ನೀಡಿದರೆ, ರೋಣ ಮತಕ್ಷೇತ್ರದಿಂದ ಜಿಎಸ್‌ ಪಾಟೀಲ್ ಅವರಿಗೆ ಟಿಕೆಟ್​ ನೀಡಲಾಗಿದೆ. ಇನ್ನು ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಟಿಕೆಟ್‌ ಘೋಷಣೆ ಮಾಡಿದ್ದು, ಜೆಡಿಎಸ್‌ ಯಾವುದೇ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿಲ್ಲ.

ಇದನ್ನೂ ಓದಿ : ಪಕ್ಷದ ಮುಖಂಡರು, ಹಿರಿಯರು, ಸಂಘದ ಪ್ರಮುಖರ ಅಭಿಪ್ರಾಯ ಪಡೆದು ಮುಂದಿನ ನಡೆ: ಮಾಡಾಳ್ ಮಲ್ಲಿಕಾರ್ಜುನ್

ರಾಯಚೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್​ನ ಇಬ್ಬರು ಹಾಲಿ ಶಾಸಕರು, ಬಿಜೆಪಿ ಮಾಜಿ ಶಾಸಕ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಎಸ್​​ಡಿಪಿಐ ಪಕ್ಷದ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ದದ್ದಲ್ ಅವರು ಬೆಂಬಲಿಗರು, ಮುಖಂಡರೊಂದಿಗೆ ಆಗಮಿಸಿ ತಮ್ಮ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಮುಂದಿನ ದಿನದಲ್ಲಿ ಮತ್ತೊಮ್ಮೆ ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿ ಮತ್ತೆ ನಾಮಪತ್ರ ಸಲ್ಲಿಕೆ ಮಾಡುವುದಾಗಿಯೂ ಹೇಳಿದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆರ್.ಬಸವನಗೌಡ ತುರುವಿಹಾಳ ಚುನಾವಣೆ ಅಧಿಕಾರಿಗೆ ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದರು. ಬಳಿಕ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಎಸ್​​ಡಿಪಿಐ ಪಕ್ಷದ ಮುಖಂಡ ಸೈಯದ್ ಇಸಾಕ್ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಿದರು. ನಗರದ ನೇತಾಜಿ ನಗರದಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿದ ಅವರು ಚುನಾವಣಾಧಿಕಾರಿ ನಾಮಪತ್ರವನ್ನು ಸಲ್ಲಿಸಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಮಾತನಾಡಿ, "ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದೇನೆ. ಕೆಲವೇ ದಿನಗಳಲ್ಲಿ ಜಿಲ್ಲಾ ಮುಖಂಡರು, ರಾಜ್ಯ ನಾಯಕರು, ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳೊಂದಿಗೆ ಆಗಮಿಸಿ ಭಿ-ಫಾರಂನೊಂದಿಗೆ ನಾಮಪತ್ರವನ್ನು ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ನೂರಕ್ಕೆ ನೂರು ಜಯಗಳಿಸುತ್ತೇನೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಮತ್ತು ಕಾಂಗ್ರೆಸ್​​ ಮುಖಂಡ ಅಶೋಕ ಮನಗೂಳಿ ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರ ನಾಮಪತ್ರ ಸಲ್ಲಿಕೆ ವೇಳೆ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಹಾಗೂ ಸಹಾಯಕ ಚುನಾವ ಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್​​ ಸಿಂದಗಿ ಮತಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡದಿದ್ದರೂ, ಕಾಂಗ್ರೆಸ್​ ಮುಖಂಡ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ.ಜಿ.ನೆಲ್ಲಗಿ, ರಮೇಶ ಭಂಟನೂರ, ಎಂ.ಕೆ.ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ ನಿಂಗಣ್ಣ ಬಿರಾದಾರ, ಸುರೇಶ ಚವಲರ ಮತ್ತಿತರರು ಉಪಸ್ಥಿತರಿದ್ದರು.

ಗದಗದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ: ಗದಗ ಜಿಲ್ಲೆಯ ನರಗುಂದ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ನರಗುಂದ ತಹಶಿಲ್ದಾರ ಕಚೇರಿಗೆ ಆಗಮಿಸಿದ ಅವರು, ಚುನಾವಣಾ ಅಧಿಕಾರಿ ಗಂಗಪ್ಪ ಎಂ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಎಡಿ ಅಮರವಾಧಗಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದು ಕೇವಲ ಸರಳವಾಗಿ ನಾಮಪತ್ರ ಸಲ್ಲಿಸಿರುವೆ. ಇದೇ 18ರಂದು ಮತ್ತೊಮ್ಮೆ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಲು ತೀರ್ಮಾನ ಮಾಡಿದ್ದೇನೆ. ಸದ್ಯ ಕ್ಷೇತ್ರದಲ್ಲಿ ಓಡಾಟ ಮಾಡುತ್ತಿದ್ದೇನೆ. ಅಲ್ಲದೇ ಕಾಂಗ್ರೆಸ್​ ಪಕ್ಷ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಮತದಾನ ಮಾಡುವಂತೆ ಮನವರಿಕೆ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪ್ರಚಾರ ಇನ್ನಷ್ಟು ಹೆಚ್ಚಾಗಲಿದೆ" ಎಂದರು.

ಗದಗ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ ಪಕ್ಷ ಈಗಾಗಲೇ ಟಿಕೆಟ್‌ ಘೋಷಣೆ ಮಾಡಿದೆ. ಅದರಲ್ಲಿ ನರಗುಂದ ಮತಕ್ಷೇತ್ರವೂ ಒಂದು. ಗದಗ ಮತಕ್ಷೇತ್ರದಿಂದ ಕೈ ಮುಖಂಡ ಹೆಚ್ ಕೆ ಪಾಟೀಲ್​ಗೆ ಟಿಕೆಟ್​ ನೀಡಿದರೆ, ರೋಣ ಮತಕ್ಷೇತ್ರದಿಂದ ಜಿಎಸ್‌ ಪಾಟೀಲ್ ಅವರಿಗೆ ಟಿಕೆಟ್​ ನೀಡಲಾಗಿದೆ. ಇನ್ನು ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಟಿಕೆಟ್‌ ಘೋಷಣೆ ಮಾಡಿದ್ದು, ಜೆಡಿಎಸ್‌ ಯಾವುದೇ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿಲ್ಲ.

ಇದನ್ನೂ ಓದಿ : ಪಕ್ಷದ ಮುಖಂಡರು, ಹಿರಿಯರು, ಸಂಘದ ಪ್ರಮುಖರ ಅಭಿಪ್ರಾಯ ಪಡೆದು ಮುಂದಿನ ನಡೆ: ಮಾಡಾಳ್ ಮಲ್ಲಿಕಾರ್ಜುನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.