ರಾಯಚೂರು: ರಾಯಚೂರು ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲೂಕಿನ ಶಕ್ತಿನಗರದ ಎಂಪಿಸಿಎಲ್ ಬಳಿ ಈ ಅಪಘಾತ ಸಂಭವಿಸಿದೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ನಿವಾಸಿ ಕಿಶಾನರಾವ್(40) ಎಂಬಾತ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕಾರ್ನಲ್ಲಿದ್ದ ನಾಲ್ವರ ಪೈಕಿ ಸೂಗುರೇಶ, ಅನಂತ ಎಂಬಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಈ ಕುರಿತು ರಾಯಚೂರಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.