ETV Bharat / state

ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಹಿನ್ನೆಲೆ: ಸಚಿವರಿಂದ ಪರಿಶೀಲನೆ

ಜೂನ್ 28 ರಂದು ಸಿಎಂ ಕುಮಾರಸ್ವಾಮಿ ರಾಯಚೂರು ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಗ್ರಾಮ ಪರಿಶೀಲನೆ ನಡೆಸಲಾಯ್ತು.

author img

By

Published : Jun 10, 2019, 11:24 PM IST

ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ

ರಾಯಚೂರು: ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕೈಗೊಳ್ಳಲಿರುವ ಹಿನ್ನೆಲೆ ಗ್ರಾಮದಲ್ಲಿನ ಸಮಸ್ಯೆ ಮತ್ತು ವಾಸ್ತವ್ಯ ಮಾಡುವ ಸ್ಥಳವನ್ನ ಜಿಲ್ಲಾ ಉಸ್ತುವರಿ ಸಚಿವ, ಸ್ಥಳೀಯ ಶಾಸಕರು, ಅಧಿಕಾರಿಗಳು ಪರಿಶೀಲನೆ ನಡೆಸಿದ್ರು.

ಇದೇ ಜೂನ್ 28ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮವನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಸಮಸ್ಯಾತ್ಮಕ ಮತ್ತು ಕುಗ್ರಾಮ ಆಯ್ಕೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಳ್ಳುವ ಪರಿಕಲ್ಪನೆ ಹಿನ್ನೆಲೆ ರಾಯಚೂರಿನ ಕರೆಗುಡ್ಡ ಗ್ರಾಮವನ್ನು ಆರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ರಾಜಾ ವೆಂಕಟಪ್ಪ ನಾಯಕ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಸಿಇಒ ನಲೀನ್ ಆತುಲ್ ಹಾಗೂ ಅಧಿಕಾರಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ

ಇನ್ನು ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಗ್ರಾಮದಲ್ಲಿನ ಸಮಸ್ಯೆ, ಆಗಬೇಕಾದ ಕೆಲಸಗಳು, ಗ್ರಾಮಸ್ಥರ ಬೇಡಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಬಳಿಕ ಸಿಎಂ ತಂಗುವ ಶಾಲೆ, ಕಾರ್ಯಕ್ರಮ ಸ್ಥಳ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತನಾಡಿದ ಸ್ಥಳೀಯ ಶಾಸಕರು, ಸಿಎಂ ನಮ್ಮ ಕ್ಷೇತ್ರದ ಗ್ರಾಮವನ್ನ ಆಯ್ಕೆ ಮಾಡಿಕೊಂಡಿರುವುದು ಸಂತಸ ತಂದಿದೆ. ಗ್ರಾಮವನ್ನ ಅಭಿವೃದ್ಧಿ ಹೊಂದುವುದರ ಜತೆಗೆ ಕ್ಷೇತ್ರದಲ್ಲಿನ ಆಗಬೇಕಾದ ಕಾರ್ಯಗಳ ಬಗ್ಗೆ ಗಮನಕ್ಕೆ ತಂದು ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು. ಒಟ್ಟಿನಲ್ಲಿ ತೀರ ಹಿಂದುಳಿದ ರಾಯಚೂರು ಜಿಲ್ಲೆ ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಲಿದ್ದು, ಇದರಿಂದ ಕರೆಗುಡ್ಡ ಮತ್ತು ಜಿಲ್ಲೆಗೆ ಎಷ್ಟರ ಮಟ್ಟಿಗೆ ಪ್ರಯೋಜನವಾಗಲಿದೆ ಎನ್ನುವುದು ಕಾದು ನೋಡಬೇಕಾಗಿದೆ.

ರಾಯಚೂರು: ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕೈಗೊಳ್ಳಲಿರುವ ಹಿನ್ನೆಲೆ ಗ್ರಾಮದಲ್ಲಿನ ಸಮಸ್ಯೆ ಮತ್ತು ವಾಸ್ತವ್ಯ ಮಾಡುವ ಸ್ಥಳವನ್ನ ಜಿಲ್ಲಾ ಉಸ್ತುವರಿ ಸಚಿವ, ಸ್ಥಳೀಯ ಶಾಸಕರು, ಅಧಿಕಾರಿಗಳು ಪರಿಶೀಲನೆ ನಡೆಸಿದ್ರು.

ಇದೇ ಜೂನ್ 28ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮವನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಸಮಸ್ಯಾತ್ಮಕ ಮತ್ತು ಕುಗ್ರಾಮ ಆಯ್ಕೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಳ್ಳುವ ಪರಿಕಲ್ಪನೆ ಹಿನ್ನೆಲೆ ರಾಯಚೂರಿನ ಕರೆಗುಡ್ಡ ಗ್ರಾಮವನ್ನು ಆರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ರಾಜಾ ವೆಂಕಟಪ್ಪ ನಾಯಕ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಸಿಇಒ ನಲೀನ್ ಆತುಲ್ ಹಾಗೂ ಅಧಿಕಾರಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ

ಇನ್ನು ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಗ್ರಾಮದಲ್ಲಿನ ಸಮಸ್ಯೆ, ಆಗಬೇಕಾದ ಕೆಲಸಗಳು, ಗ್ರಾಮಸ್ಥರ ಬೇಡಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಬಳಿಕ ಸಿಎಂ ತಂಗುವ ಶಾಲೆ, ಕಾರ್ಯಕ್ರಮ ಸ್ಥಳ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತನಾಡಿದ ಸ್ಥಳೀಯ ಶಾಸಕರು, ಸಿಎಂ ನಮ್ಮ ಕ್ಷೇತ್ರದ ಗ್ರಾಮವನ್ನ ಆಯ್ಕೆ ಮಾಡಿಕೊಂಡಿರುವುದು ಸಂತಸ ತಂದಿದೆ. ಗ್ರಾಮವನ್ನ ಅಭಿವೃದ್ಧಿ ಹೊಂದುವುದರ ಜತೆಗೆ ಕ್ಷೇತ್ರದಲ್ಲಿನ ಆಗಬೇಕಾದ ಕಾರ್ಯಗಳ ಬಗ್ಗೆ ಗಮನಕ್ಕೆ ತಂದು ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು. ಒಟ್ಟಿನಲ್ಲಿ ತೀರ ಹಿಂದುಳಿದ ರಾಯಚೂರು ಜಿಲ್ಲೆ ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಲಿದ್ದು, ಇದರಿಂದ ಕರೆಗುಡ್ಡ ಮತ್ತು ಜಿಲ್ಲೆಗೆ ಎಷ್ಟರ ಮಟ್ಟಿಗೆ ಪ್ರಯೋಜನವಾಗಲಿದೆ ಎನ್ನುವುದು ಕಾದು ನೋಡಬೇಕಾಗಿದೆ.

Intro:ಸ್ಲಗ್: ಸಿಎಂ ವಾಸ್ತವ್ಯ ಮಾಡಲಿರುವ ಕರೆಗುಡ್ಡ ಗ್ರಾಮ
ಫಾರ್ಮೇಟ್: ಪ್ಯಾಕೇಜ್
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 10-೦6-2019
ಸ್ಥಳ: ರಾಯಚೂರು
ಆಂಕರ್: ನಾಡದೊರೆಯಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಗ್ರಾಮೀಣ ಪ್ರದೇಶ ಕಡೆ ಮುಖ ಮಾಡಿ, ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಇತ್ತ ರಾಯಚೂರು ಜಿಲ್ಲೆಯಲ್ಲಿ ಗ್ರಾಮವೊದನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಸಿಎಂ ವಾಸ್ತವ್ಯಕ್ಕೆ ಕುರಿತು ಸಿದ್ದತೆ ಗ್ರಾಮದಲ್ಲಿನ ಸಮಸ್ಯೆ ಮತ್ತು ವಾಸ್ತವ್ಯ ಮಾಡುವ ಸ್ಥಳವನ್ನ ಜಿಲ್ಲಾ ಉಸ್ತುವರಿ ಸಚಿವ, ಸ್ಥಳೀಯ ಶಾಸಕರು ಅಧಿಕಾರಿಗಳು ವರ್ಗ ಪರಿಶೀಲನೆ ನಡೆಸಿದ್ರು. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Body:ವಾಯ್ಸ್ ಓವರ್.1: ರಾಜ್ಯದ ತೀರ ಹಿಂದುಳಿದ ಪ್ರದೇಶವೆಂದು ಬಿಂಬಿತವಾಗಿರುವ ರಾಯಚೂರು ಜಿಲ್ಲೆಯಲ್ಲಿ 2019 ಜೂ.28ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ಮಾನವಿ ತಾಲೂಕಿನ ಕರೆಗುಡ್ಡ ಗ್ರಾಮವನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಸಮಸ್ಯಾತ್ಮಕ ಮತ್ತು ಕುಗ್ರಾಮ ಆಯ್ಕೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಳ್ಳುವ ಪರಿಕಲ್ಪನೆ ಹಿನ್ನಲೆಯಲ್ಲಿ ಸಮಸ್ಯಾತ್ಮಕ ಗ್ರಾಮವಾಗಿರುವ ಕರೆಗುಡ್ಡ ಗ್ರಾಮವನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನುತ್ತಾರೆ ಜಿಲ್ಲಾ ಉಸ್ತುವರಿ ಸಚಿವರು.
ವಾಯ್ಸ್ ಓವರ್.2: ಈ ಮೊದಲು ಸಿಎಂ ಗ್ರಾಮ ವಾಸ್ತವ್ಯವನ್ನ ಸಿಂಧನೂರು ತಾಲೂಕಿನ ಗ್ರಾಮವೊದರಲ್ಲಿ ವಾಸ್ತವ್ಯ ಮಾಡಿಲಿದೆ ಎಂದು ಹೇಳಲಾಗಿತ್ತು. ಆದ್ರೆ ಸಚಿವರು ಇರುವ ಕ್ಷೇತ್ರದ ಬದಲಿಗೆ ಶಾಸಕರು ಇರುವ ವಿಧಾನಸಭಾ ಕ್ಷೇತ್ರವನ್ನ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದವು. ಹೀಗಾಗಿ ಮಾನವಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾದ ರಾಜಾ ವೆಂಕಟಪ್ಪ ನಾಯಕ ಕ್ಷೇತ್ರದ ಕರೆಗುಡ್ಡ ಗ್ರಾಮದಲ್ಲಿ ವಾಸ್ತವ್ಯ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಹಿಟ್ಟಿನಲ್ಲಿ ಜಿಲ್ಲಾ ಉಸ್ತುವರಿ ಸಚಿವ ವೆಂಟಕರಾವ್ ನಾಡಗೌಡ, ಶಾಸಕ ರಾಜಾ ವೆಂಕಟಪ್ಪ ನಾಯಕ, ಜಿಲ್ಲಾ ಉಸ್ತುವರಿ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಸಿಇಒ ನಲೀನ್ ಆತುಲ್ ಹಾಗೂ ಅಧಿಕಾರಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ವಾಯ್ಸ್ ಓವರ್.3: ಇನ್ನು ಗ್ರಾಮಕ್ಕೆ ಭೇಟಿ ನೀಡಿದ ಸಚಿವರ ಅಲ್ಲಿನ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಗ್ರಾಮದಲ್ಲಿನ ಸಮಸ್ಯೆ, ಆಗಬೇಕಾದ ಕೆಲಸಗಳು, ಗ್ರಾಮಸ್ಥರ ಬೇಡಿಕೆ ಸೇರಿದಂತೆ ಹಲವು ವಿಚಾರಗಳ ಚರ್ಚೆ ನಡೆಸಿ, ಬಳಿಕ ಸಿಎಂ ತಗುವ ಶಾಲೆ, ಕಾರ್ಯಕ್ರಮ, ಸಾರ್ವಜನಿಕರು ನೀಡಲು ಮನವಿ ವ್ಯವಸ್ಥೆ ಸೇರಿದಂತೆ ಕೈಗೊಳ್ಳಬೇಕಾದ ವ್ಯವಸ್ಥೆ ಮತ್ತು ಸ್ಥಳ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತನಾಡಿದ ಸ್ಥಳೀಯ ಶಾಸಕರು ಸಿಎಂ ನಮ್ಮ ಕ್ಷೇತ್ರದ ಗ್ರಾಮವನ್ನ ಆಯ್ಕೆ ಮಾಡಿಕೊಂಡಿರುವುದು ಸಂತಸ ತಂದಿದೆ. ಗ್ರಾಮವನ್ನ ಅಭಿವೃದ್ದಿ ಹೊಂದವುದರ ಜತೆಗೆ ಕ್ಷೇತ್ರದಲ್ಲಿನ ಆಗಬೇಕಾದ ಕಾರ್ಯಗಳ ಬಗ್ಗೆ ಗಮನಕ್ಕೆ ತಂದು ಅಭಿವೃದ್ದಿಗೆ ಪೂರಕವಾಗಲಿದೆ ಎಂದರು.

ವಾಯ್ಸ್ ಓವರ್.4: ಸಿಎಂ ವಾಸ್ತವ್ಯ ಮಾಡುವಂತಹ ಗ್ರಾಮ ಕುಗ್ರಾಮದಲ್ಲಿ ಆಯ್ಕೆ ಮಾಡುವುದಾಗಿ ಹೇಳಿದ್ರು. ಕರೆಗುಡ್ಡ ಹೇಳಿಕೊಳ್ಳುವಂತಹ ಕುಗ್ರಾಮವಾಗದಿದ್ದರೂ, ಮೂಲಭೂತ ಸೌಲಭ್ಯಗಳು ಸಮಸ್ಯೆಗಳು ಕಾಣುತ್ತಿವೆ ಸ್ವಚ್ಚತೆ ಎನ್ನುವ ಕನಸಿನ ಮಾತಗಿದೆ. ಸಮಸ್ಯೆಗಳು ಪರಿಹಾರ ಆಗುವ ನಿರೀಕ್ಷೆಯಲ್ಲಿ ಜನರಿದ್ದು, ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಿರುವುದಕ್ಕೆ ಗ್ರಾಮಸ್ಥರ ಸ್ವಾಗತಿಸಿದು, ನಮ್ಮ ಗ್ರಾಮಕ್ಕೆ ಅಗತ್ಯ ಸೌಲಭ್ಯ ಸಿಗಲಿ ಎನ್ನುವುದು ಗ್ರಾಮಸ್ಥರು ಒತ್ತಾಸೆಯಾಗಿದೆ. ಒಟ್ನಿಲ್ಲಿ, ತೀರ ಹಿಂದುಳಿದ ರಾಯಚೂರು ಜಿಲ್ಲೆ ಕರೆಗುಡ್ಡ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಿಲಿದ್ದು, ಕಳೆದ ಬಾರಿ ಆಯ್ಕೆಯಾದ ಗ್ರಾಮದಲ್ಲಿ ಕೆಲವೊಂದು ಸಮಸ್ಯೆಗಳ ಮದ್ಯ ಪುನಃ ಎರಡನೇ ಬಾರಿಗೆ ಸಿಎಂ ಆದ್ಮೇಲೆ ಜಿಲ್ಲೆಯಲ್ಲಿ ವಾಸ್ತವ್ಯಕ್ಕೆ ಮುಂದಾಗಿದ್ದು, ಇದರಿಂದ ಕರೆಗುಡ್ಡ ಮತ್ತು ಜಿಲ್ಲೆಗೆ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎನ್ನುವುದು ಕಾದು ನೋಡಬೇಕಾಗಿದೆ.
Conclusion:ಬೈಟ್.1: ವೆಂಕಟರಾವ್ ನಾಡಗೌಡ, ಸಚಿವ, ಜಿಲ್ಲಾ ಉಸ್ತುವರಿ ಸಚಿವ
ಬೈಟ್.2: ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಶಾಸಕ, ಮಾನವಿ
ಬೈಟ್.3: ಮಹಾತೇಶ, ಗ್ರಾಮದ ಯುವಕ
ಬೈಟ್.4: ಮಹೆಬೂಬಿ, ಗ್ರಾಮಸ್ಥೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.