ರಾಯಚೂರು: ನಗರದ ಗ್ರಾಮೀಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಪಿಐ ಹನುಮರೆಡ್ಡಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನ ಪರಿಗಣಿಸಿ ಪ್ರತಿ ವರ್ಷ ಮುಖ್ಯಮಂತ್ರಿ ಚಿನ್ನದ ಪದಕ ನೀಡಲಾಗುತ್ತೆ. ಅದರಂತೆ 2017 ಮತ್ತು 2018ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಗ್ರಾಮೀಣ ಠಾಣೆಯ ಸಿಪಿಐ ಹನುಮರೆಡ್ಡಿ ಭಾಜನರಾಗಿದ್ದಾರೆ.
ಈ ಪದಕವನ್ನು ನವೆಂಬರ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಸಮಾರಂಭದಲ್ಲಿ ಸಿಎಂ ನೀಡಲಿದ್ದಾರೆ.