ETV Bharat / state

ರಾಯಚೂರು ಗ್ರಾಮೀಣ, ಮಸ್ಕಿ ಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿಗಳ ಘೋಷಣೆ

author img

By

Published : Mar 25, 2023, 1:43 PM IST

ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ರಾಯಚೂರು ಗ್ರಾಮೀಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಮಾತ್ರ ಕಾಂಗ್ರೆಸ್​ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದೆ.

ಬಸವನಗೌಡ ದದ್ದಲ್, ಬಸವನಗೌಡ ತುರುವಿಹಾಳ್​
ಬಸವನಗೌಡ ದದ್ದಲ್, ಬಸವನಗೌಡ ತುರುವಿಹಾಳ್​

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಪಕ್ಷ ಘೋಷಣೆ ಮಾಡಿದೆ. ರಾಯಚೂರು ಗ್ರಾಮೀಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ರಾಯಚೂರು ಗ್ರಾಮೀಣ ಎಸ್​ಟಿ ಮೀಸಲು ಕ್ಷೇತ್ರಕ್ಕೆ ಹಾಲಿ ಶಾಸಕ ಬಸವನಗೌಡ ದದ್ದಲ್ ಹಾಗೂ ಮಸ್ಕಿ ಕ್ಷೇತ್ರದ ಹಾಲಿ ಶಾಸಕ ಬಸವನಗೌಡ ತುರುವಿಹಾಳ್​ರ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಲಾಗಿದೆ.

ಎರಡು ಕ್ಷೇತ್ರಗಳ ಹಿಂದಿನ ಚುನಾವಣೆ ಫಲಿತಾಂಶ ಮತ್ತು ರಾಜಕೀಯ ಬೆಳವಣಿಗೆ: ಬಸವನಗೌಡ ದದ್ದಲ್ 2018ಕ್ಕೆ ಚುನಾವಣೆಗೆ ಪಾದಾರ್ಪಣೆ ಮಾಡಿದರು. ರಾಯಚೂರು ಗ್ರಾಮೀಣ ಕ್ಷೇತ್ರದಿಂದ 2018ರಲ್ಲಿ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಕ್ಷೇತ್ರದಲ್ಲಿ ಅಂದು ಹಾಲಿ ಶಾಸಕರಾಗಿದ್ದ ತಿಪ್ಪರಾಜ್ ಹವಾಲ್ದಾರ್ ಹಾಗೂ ಪ್ರಥಮ ಬಾರಿಗೆ ಸ್ಪರ್ಧಿಸಿದ ಬಸವನಗೌಡ ದದ್ದಲ್ ನಡುವೆ ನೇರಹಣಾಹಣಿ ನಡೆದಿತ್ತು. ಈ ಚುನಾವಣೆಯಲ್ಲಿ ಬಸನಗೌಡ ದದ್ದಲ್ 66,656 ಮತಗಳನ್ನು ಪಡೆದರೇ, ತಿಪ್ಪುರಾಜು ಹವಾಲ್ದಾರ್ 56,692 ಮತಗಳನ್ನು ಪಡೆದಿಕೊಂಡಿದ್ದರು. ಅಂತಿಮವಾಗಿ ಬಸವನಗೌಡ ದದ್ದಲ್ 9,964 ಮತಗಳ ಅಂತರದೊಂದಿಗೆ ಮೊದಲ ಚುನಾವಣೆಯಲ್ಲೆ ಗೆಲುವಿನ ನಗೆ ಬೀರಿದ್ದರು.

ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಬಸವನಗೌಡ ದದ್ದಲ್​ರಿಗೆ ಟಿಕೆಟ್ ತಪ್ಪಿಸಲು ಷಡ್ಯಂತ್ರ ನಡೆದಿತ್ತು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಅದೇ ಪಕ್ಷದ ಬೇರೆ ಅಭ್ಯರ್ಥಿಗಳು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡ ಹಿನ್ನೆಲೆ ಊಹಾಪೋಹಗಳಿಗೆ ತೆರೆಬಿದ್ದಿದೆ. ಈ ಮೂಲಕ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ದದ್ದಲ್​ ಇಳಿಯಲಿದ್ದಾರೆ.

ಇನ್ನು ಮಸ್ಕಿ ಕ್ಷೇತ್ರದಿಂದ ಹಾಲಿ ಶಾಸಕ ಬಸವನಗೌಡ ತುರುವಿಹಾಳ್​ಗೆ ಟಿಕೆಟ್ ಘೋಷಣೆಯಾಗಿದೆ. ಇದಕ್ಕೂ ಮೊದಲು ತುರುವಿಹಾಳ್​ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಈ ವೇಳೆ 60,174 ಮತಗಳನ್ನು ಪಡೆದಿದ್ದರು. ಇವರ ವಿರುದ್ಧ ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ 60,381 ಮತಗಳನ್ನು ಪಡೆದುಕೊಂಡು 207 ಮತಗಳ ಅಂತರದಿಂದ ಬಸವನಗೌಡ ತುರುವಿಹಾಳ್​ ಅವರನ್ನು ಪರಾಭವಗೊಳಿಸಿದ್ದರು. ಇದಾದ ಬಳಿಕ ಕಾಂಗ್ರೆಸ್​​ ನಿಂದ ಗೆದ್ದು ಸ್ಫರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿಯಿಂದ ಸ್ಫರ್ಧಿಸಿದ್ದ ಬಸವನಗೌಡ ತುರುವಿಹಾಳ ಪಕ್ಷಕ್ಕೆ ಗುಡ್​ಬೈ ಹೇಳಿ ಕಾಂಗ್ರೆಸ್​ ಸೇರಿದರು. 2020ರಲ್ಲಿ ಉಪಚುನಾವಣೆ ನಡೆಸಲಾಯಿತು. ಕಾಂಗ್ರೆಸ್​ನಿಂದ ಅಖಾಡಕ್ಕಿಳಿದಿದ್ದ ಬಸವನಗೌಡ ತುರುವಿಹಾಳ್​ 86,337 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್ ಗೌಡ ಪಾಟೀಲ್ 55,731 ಮತಗಳನ್ನು ಪಡೆದುಕೊಂಡು, 30,606 ಮತಗಳ ಅಂತರದಲ್ಲಿ ಸೋಲನುಭವಿಸಿದರು. ಈ ಮೂಲಕ ಮಸ್ಕಿ ಕಾಂಗ್ರೆಸ್​​ ಪಕ್ಷದ ಭದ್ರಕೋಟೆ ಎಂದು ಗುರುತಿಸಿಕೊಂಡಿತು.

ಇದೀಗ ಮತ್ತೊಮ್ಮೆ ಚುನಾವಣೆ ಟಿಕೆಟ್ ಘೋಷಣೆಯಾಗಿದ್ದು, ಎರಡನೇ ಬಾರಿಗೆ ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ಶಾಸಕ ಬಸವನಗೌಡ ಸ್ಪರ್ಧೆ ಮಾಡಲಿದ್ದಾರೆ. ಇನ್ನು ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಎರಡು ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಇನ್ನುಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಎರಡನೇ ಹಂತದಲ್ಲಿ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿರುವ ವೈಶಿಷ್ಟ್ಯಗಳೇನು ಗೊತ್ತಾ?

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಪಕ್ಷ ಘೋಷಣೆ ಮಾಡಿದೆ. ರಾಯಚೂರು ಗ್ರಾಮೀಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ರಾಯಚೂರು ಗ್ರಾಮೀಣ ಎಸ್​ಟಿ ಮೀಸಲು ಕ್ಷೇತ್ರಕ್ಕೆ ಹಾಲಿ ಶಾಸಕ ಬಸವನಗೌಡ ದದ್ದಲ್ ಹಾಗೂ ಮಸ್ಕಿ ಕ್ಷೇತ್ರದ ಹಾಲಿ ಶಾಸಕ ಬಸವನಗೌಡ ತುರುವಿಹಾಳ್​ರ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಲಾಗಿದೆ.

ಎರಡು ಕ್ಷೇತ್ರಗಳ ಹಿಂದಿನ ಚುನಾವಣೆ ಫಲಿತಾಂಶ ಮತ್ತು ರಾಜಕೀಯ ಬೆಳವಣಿಗೆ: ಬಸವನಗೌಡ ದದ್ದಲ್ 2018ಕ್ಕೆ ಚುನಾವಣೆಗೆ ಪಾದಾರ್ಪಣೆ ಮಾಡಿದರು. ರಾಯಚೂರು ಗ್ರಾಮೀಣ ಕ್ಷೇತ್ರದಿಂದ 2018ರಲ್ಲಿ ಕಾಂಗ್ರೆಸ್​ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಕ್ಷೇತ್ರದಲ್ಲಿ ಅಂದು ಹಾಲಿ ಶಾಸಕರಾಗಿದ್ದ ತಿಪ್ಪರಾಜ್ ಹವಾಲ್ದಾರ್ ಹಾಗೂ ಪ್ರಥಮ ಬಾರಿಗೆ ಸ್ಪರ್ಧಿಸಿದ ಬಸವನಗೌಡ ದದ್ದಲ್ ನಡುವೆ ನೇರಹಣಾಹಣಿ ನಡೆದಿತ್ತು. ಈ ಚುನಾವಣೆಯಲ್ಲಿ ಬಸನಗೌಡ ದದ್ದಲ್ 66,656 ಮತಗಳನ್ನು ಪಡೆದರೇ, ತಿಪ್ಪುರಾಜು ಹವಾಲ್ದಾರ್ 56,692 ಮತಗಳನ್ನು ಪಡೆದಿಕೊಂಡಿದ್ದರು. ಅಂತಿಮವಾಗಿ ಬಸವನಗೌಡ ದದ್ದಲ್ 9,964 ಮತಗಳ ಅಂತರದೊಂದಿಗೆ ಮೊದಲ ಚುನಾವಣೆಯಲ್ಲೆ ಗೆಲುವಿನ ನಗೆ ಬೀರಿದ್ದರು.

ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಬಸವನಗೌಡ ದದ್ದಲ್​ರಿಗೆ ಟಿಕೆಟ್ ತಪ್ಪಿಸಲು ಷಡ್ಯಂತ್ರ ನಡೆದಿತ್ತು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಅದೇ ಪಕ್ಷದ ಬೇರೆ ಅಭ್ಯರ್ಥಿಗಳು ಟಿಕೆಟ್​ಗಾಗಿ ಕಸರತ್ತು ನಡೆಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡ ಹಿನ್ನೆಲೆ ಊಹಾಪೋಹಗಳಿಗೆ ತೆರೆಬಿದ್ದಿದೆ. ಈ ಮೂಲಕ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ದದ್ದಲ್​ ಇಳಿಯಲಿದ್ದಾರೆ.

ಇನ್ನು ಮಸ್ಕಿ ಕ್ಷೇತ್ರದಿಂದ ಹಾಲಿ ಶಾಸಕ ಬಸವನಗೌಡ ತುರುವಿಹಾಳ್​ಗೆ ಟಿಕೆಟ್ ಘೋಷಣೆಯಾಗಿದೆ. ಇದಕ್ಕೂ ಮೊದಲು ತುರುವಿಹಾಳ್​ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಈ ವೇಳೆ 60,174 ಮತಗಳನ್ನು ಪಡೆದಿದ್ದರು. ಇವರ ವಿರುದ್ಧ ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ 60,381 ಮತಗಳನ್ನು ಪಡೆದುಕೊಂಡು 207 ಮತಗಳ ಅಂತರದಿಂದ ಬಸವನಗೌಡ ತುರುವಿಹಾಳ್​ ಅವರನ್ನು ಪರಾಭವಗೊಳಿಸಿದ್ದರು. ಇದಾದ ಬಳಿಕ ಕಾಂಗ್ರೆಸ್​​ ನಿಂದ ಗೆದ್ದು ಸ್ಫರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿಯಿಂದ ಸ್ಫರ್ಧಿಸಿದ್ದ ಬಸವನಗೌಡ ತುರುವಿಹಾಳ ಪಕ್ಷಕ್ಕೆ ಗುಡ್​ಬೈ ಹೇಳಿ ಕಾಂಗ್ರೆಸ್​ ಸೇರಿದರು. 2020ರಲ್ಲಿ ಉಪಚುನಾವಣೆ ನಡೆಸಲಾಯಿತು. ಕಾಂಗ್ರೆಸ್​ನಿಂದ ಅಖಾಡಕ್ಕಿಳಿದಿದ್ದ ಬಸವನಗೌಡ ತುರುವಿಹಾಳ್​ 86,337 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್ ಗೌಡ ಪಾಟೀಲ್ 55,731 ಮತಗಳನ್ನು ಪಡೆದುಕೊಂಡು, 30,606 ಮತಗಳ ಅಂತರದಲ್ಲಿ ಸೋಲನುಭವಿಸಿದರು. ಈ ಮೂಲಕ ಮಸ್ಕಿ ಕಾಂಗ್ರೆಸ್​​ ಪಕ್ಷದ ಭದ್ರಕೋಟೆ ಎಂದು ಗುರುತಿಸಿಕೊಂಡಿತು.

ಇದೀಗ ಮತ್ತೊಮ್ಮೆ ಚುನಾವಣೆ ಟಿಕೆಟ್ ಘೋಷಣೆಯಾಗಿದ್ದು, ಎರಡನೇ ಬಾರಿಗೆ ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ಶಾಸಕ ಬಸವನಗೌಡ ಸ್ಪರ್ಧೆ ಮಾಡಲಿದ್ದಾರೆ. ಇನ್ನು ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಎರಡು ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಇನ್ನುಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಎರಡನೇ ಹಂತದಲ್ಲಿ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿರುವ ವೈಶಿಷ್ಟ್ಯಗಳೇನು ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.