ETV Bharat / state

ಕಲುಷಿತ ಕುಡಿಯುವ ನೀರು ಪೂರೈಕೆ ಪ್ರಕರಣ : ರಾಯಚೂರಿನಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ

author img

By

Published : Jun 6, 2022, 5:51 PM IST

Updated : Jun 6, 2022, 7:21 PM IST

ರಾಯಚೂರಿನಲ್ಲಿ ನಗರಸಭೆಯಿಂದ ಪೂರೈಕೆಯಾದ ಕಲುಷಿತ ನೀರಿಗೆ ಈಗಾಗಲೇ ಮೂವರು ಬಲಿಯಾಗಿದ್ದಾರೆ. ಹಾಗಾಗಿ, ಈ ರೀತಿಯ ನೀರನ್ನು ಪೂರೈಕೆ ಮಾಡಿರುವುದನ್ನು ಖಂಡಿಸಿ ಮತ್ತು ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಂದ್​ಗೆ ಕರೆ ನೀಡಲಾಗಿತ್ತು..

Boring response to Bandh in Raichur
ರಾಯಚೂರಿನಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ

ರಾಯಚೂರು : ನಗರದಲ್ಲಿ ಕಲುಷಿತಗೊಂಡ ಕುಡಿಯುವ ನೀರನ್ನು ಪೂರೈಕೆ ಮಾಡಿರುವುದನ್ನು ಖಂಡಿಸಿ ಮತ್ತು ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಟಿಜನ್ ಫೋರಂನಿಂದ ಸೋಮವಾರ ಬಂದ್​ಗೆ ಕರೆ ನೀಡಲಾಗಿತ್ತು. ಈ ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಂದ್ ಹಿನ್ನೆಲೆ ಪ್ರತಿಭಟನಾಕಾರರು ನಗರದಲ್ಲಿ ಬೈಕ್‌ನಲ್ಲಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಗಡಿ-ಮುಂಗಟ್ಟುಗಳನ್ನ ಬಂದ್​ಗೊಳಿಸುವಂತೆ ಒತ್ತಾಯ ಮಾಡಿದ್ರು. ನಗರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಸ್ ಸಂಚಾರ, ಶಾಲೆ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು, ನಗರಸಭೆ ಮುಂದೆ ಪ್ರತಿಭಟನೆ ನಡೆಯುತ್ತಿದ್ದರಿಂದ ಪೊಲೀಸರು ವಾಹನ ಸಂಚಾರ ಸ್ಥಗಿತಗೊಳಿಸಿದ್ದರು. ಕೆಲವು ದಿನಗಳಿಂದ ನಗರದಲ್ಲಿ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ವಾಂತಿ,ಬೇಧಿ ಉಲ್ಬಣಗೊಂಡು ಮೂವರು ಮೃತಪಟ್ಟಿದ್ದಾರೆ.

ರಾಯಚೂರಿನಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ

ನೂರಾರು ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರುವಂತಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ. ಜತೆಗೆ ಸಾರ್ವಜನಿಕರಿಂದ ದೂರು ಬಂದರೂ ಅಧಿಕಾರಿಗಳು ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಲುಷಿತ ನೀರು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಕಿರಿಯ ಅಭಿಯಂತರ ಕೃಷ್ಣಾ ಅವರನ್ನು ಅಮಾನತುಗೊಳಿಸಲಾಗಿದೆ. ಎಇಇ ವೆಂಕಟೇಶ್ ಅಮಾನತಿಗೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಯಚೂರು : ಕಲುಷಿತ ನೀರಿಗೆ ಮತ್ತೋರ್ವ ವ್ಯಕ್ತಿ ಬಲಿ?

ರಾಯಚೂರು : ನಗರದಲ್ಲಿ ಕಲುಷಿತಗೊಂಡ ಕುಡಿಯುವ ನೀರನ್ನು ಪೂರೈಕೆ ಮಾಡಿರುವುದನ್ನು ಖಂಡಿಸಿ ಮತ್ತು ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಟಿಜನ್ ಫೋರಂನಿಂದ ಸೋಮವಾರ ಬಂದ್​ಗೆ ಕರೆ ನೀಡಲಾಗಿತ್ತು. ಈ ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಂದ್ ಹಿನ್ನೆಲೆ ಪ್ರತಿಭಟನಾಕಾರರು ನಗರದಲ್ಲಿ ಬೈಕ್‌ನಲ್ಲಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಗಡಿ-ಮುಂಗಟ್ಟುಗಳನ್ನ ಬಂದ್​ಗೊಳಿಸುವಂತೆ ಒತ್ತಾಯ ಮಾಡಿದ್ರು. ನಗರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಸ್ ಸಂಚಾರ, ಶಾಲೆ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು, ನಗರಸಭೆ ಮುಂದೆ ಪ್ರತಿಭಟನೆ ನಡೆಯುತ್ತಿದ್ದರಿಂದ ಪೊಲೀಸರು ವಾಹನ ಸಂಚಾರ ಸ್ಥಗಿತಗೊಳಿಸಿದ್ದರು. ಕೆಲವು ದಿನಗಳಿಂದ ನಗರದಲ್ಲಿ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ವಾಂತಿ,ಬೇಧಿ ಉಲ್ಬಣಗೊಂಡು ಮೂವರು ಮೃತಪಟ್ಟಿದ್ದಾರೆ.

ರಾಯಚೂರಿನಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ

ನೂರಾರು ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರುವಂತಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ. ಜತೆಗೆ ಸಾರ್ವಜನಿಕರಿಂದ ದೂರು ಬಂದರೂ ಅಧಿಕಾರಿಗಳು ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಜತೆಗೆ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಲುಷಿತ ನೀರು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಕಿರಿಯ ಅಭಿಯಂತರ ಕೃಷ್ಣಾ ಅವರನ್ನು ಅಮಾನತುಗೊಳಿಸಲಾಗಿದೆ. ಎಇಇ ವೆಂಕಟೇಶ್ ಅಮಾನತಿಗೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಯಚೂರು : ಕಲುಷಿತ ನೀರಿಗೆ ಮತ್ತೋರ್ವ ವ್ಯಕ್ತಿ ಬಲಿ?

Last Updated : Jun 6, 2022, 7:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.