ರಾಯಚೂರು : ಕೊರೊನಾ ಶಂಕಿತ ವ್ಯಕ್ತಿಯನ್ನ ಆರೋಗ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ನಗರದ ಬೇಸ್ತವಾರ ಪೇಟೆಯ ನಿವಾಸಿಯನ್ನ ವಶಕ್ಕೆ ಪಡಿಸಿಕೊಳ್ಳಲಾಗಿದೆ. ದೆಹಲಿಗೆ ಹೋಗಿ ಬಂದಿದ್ದ ಈ ವ್ಯಕ್ತಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿಕೊಂಡಿದ್ದ. ಆರೋಗ್ಯ ಇಲಾಖೆಯ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ತೆರಳಿ ಆಂಬುಲೆನ್ಸ್ ನಲ್ಲಿ ಕರೆ ತಂದಿದ್ದಾರೆ.
ಸದ್ಯ ಚಂದ್ರಬಂಡಾ ರಸ್ತೆಯಲ್ಲಿನ ಸರ್ಕಾರಿ ಕ್ವಾರೇಂಟೈನ್ ಕೇಂದ್ರದಲ್ಲಿ ಇಡಲಾಗಿದೆ.