ETV Bharat / state

ಲಿಂಗಸೂಗೂರಲ್ಲಿ ಬೃಹತ್​​​​​​ ಗಾತ್ರದ ಮೊಸಳೆ ಪ್ರತ್ಯಕ್ಷ

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬೋಗಾಪುರ ಗ್ರಾಮದ ಬಳಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

author img

By

Published : Aug 2, 2019, 12:27 PM IST

Updated : Aug 2, 2019, 12:36 PM IST

Crocodile,ಮೊಸಳೆ

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬೋಗಾಪುರ ಗ್ರಾಮದ ಬಳಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ.

ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕೆರೆ ತುಂಬಿಸಲಾಗುತ್ತಿದೆ. ಈ ವೇಳೆ ಕಾಲುವೆ ಮೂಲಕ ಮೊಸಳೆ ಕೆರೆಗೆ ಬಂದಿದೆ. ಇಂದು ಬೆಳಗ್ಗೆ ಕೆರೆಯಿಂದ ಹೊರ ಬಂದಿರುವ ಮೊಸಳೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬೃಹತ್​ ಗಾತ್ರದ ಮೊಸಳೆ

ಕಳೆದ 10 ದಿನಗಳ ಹಿಂದೆ ಗ್ರಾಮದಲ್ಲಿ ಎರಡು ಮೊಸಳೆಗಳನ್ನು ಹಿಡಿದು ನದಿಗೆ ಬಿಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಬೃಹತ್ ಗಾತ್ರದ ಮೊಸಳೆ ಬಂದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಜಮೀನು ಇರುವ ರೈತರು ಹೊಲಕ್ಕೆ ತೆರಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ ಇದುವರೆಗೆ ಯಾವೊಬ್ಬ ಅಧಿಕಾರಿಯೂ ಇತ್ತ ಸುಳಿದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬೋಗಾಪುರ ಗ್ರಾಮದ ಬಳಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ.

ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕೆರೆ ತುಂಬಿಸಲಾಗುತ್ತಿದೆ. ಈ ವೇಳೆ ಕಾಲುವೆ ಮೂಲಕ ಮೊಸಳೆ ಕೆರೆಗೆ ಬಂದಿದೆ. ಇಂದು ಬೆಳಗ್ಗೆ ಕೆರೆಯಿಂದ ಹೊರ ಬಂದಿರುವ ಮೊಸಳೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬೃಹತ್​ ಗಾತ್ರದ ಮೊಸಳೆ

ಕಳೆದ 10 ದಿನಗಳ ಹಿಂದೆ ಗ್ರಾಮದಲ್ಲಿ ಎರಡು ಮೊಸಳೆಗಳನ್ನು ಹಿಡಿದು ನದಿಗೆ ಬಿಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಬೃಹತ್ ಗಾತ್ರದ ಮೊಸಳೆ ಬಂದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಜಮೀನು ಇರುವ ರೈತರು ಹೊಲಕ್ಕೆ ತೆರಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ ಇದುವರೆಗೆ ಯಾವೊಬ್ಬ ಅಧಿಕಾರಿಯೂ ಇತ್ತ ಸುಳಿದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Intro:ಸ್ಲಗ್: ಬೃಹತ್ ಗ್ರಾತದ ಮೊಸಳೆ ಪ್ರತ್ಯಕ್ಷ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 02-೦8-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಜಿಲ್ಲೆಯಲ್ಲಿ ಬೃಹತ್ ಗಾತ್ರದ ಮೊಸಳೆ ಗ್ರಾಮಕ್ಕೆ ನುಗ್ಗಿದೆ. Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬೋಗಾಪುರ ಗ್ರಾಮದ ಬಳಿ ಈ ಮೊಸಳೆ ಪತ್ತೆಯಾಗಿದೆ. ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನಲೆಯಲ್ಲಿ ಕರೆಯನ್ನ ತುಂಬಿಸಲಾಗುತ್ತಿದೆ. ಈ ವೇಳೆ ಕಾಲುವ ಮೂಲಕ ಕೆರೆಗೆ ಬಂದಿರುವ ಮೊಸಳೆ ಬಂದಿರಬಹುದೆಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ ಕೆರೆಯಿಂದ ಹೊರ ಬಂದಿರುವ ಮೊಸಳೆ ಗ್ರಾಮ ಪತ್ತೆಯಾಗಿರುವುದು ಗ್ರಾಮಸ್ಥರನ್ನ ಆತಂಕ ಮೂಡಿಸಿದೆ. ಅಲ್ಲದೇ ಕಳೆದ 10 ದಿನಗಳ ಹಿಂದೆ ಗ್ರಾಮದಲ್ಲಿ ಎರಡು ಮೊಸಳೆಗಳ ಹಿಡಿದು ನದಿ ಬಿಡಲಾಗಿತ್ತು ಎನ್ನಲಾಗುತ್ತಿದೆ. Conclusion:ಇದರ ಮಧ್ಯ ಇದೀಗ ಬೃಹತ್ ಗಾತ್ರದ ಮೊಸಳೆ ಬಂದಿರುವುದು ಗ್ರಾಮಸ್ಥರನ್ನ ಆತಂಕ ಮೂಡಿಸಿದ್ದು, ಜಮೀನು ಇರುವ ರೈತರು ಹೊಲಕ್ಕೆ ತೆರಳದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದ್ರೆ ಇದುವರೆಗೆ ಬಂದಿಲ್ಲ ಸ್ಥಳಕ್ಕೆ ಆಗಮಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Last Updated : Aug 2, 2019, 12:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.