ರಾಯಚೂರು: ಕಟಾವು ಮಾಡಿ ಹೊಲದಲ್ಲಿ ಗೂಡು ಹಾಕಿದ್ದ ತೊಗರಿ ಬೆಳೆಗೆ ರಾತ್ರೋರಾತ್ರಿ ಬೆಂಕಿ ಬಿದ್ದು ಹೊತ್ತಿ ಉರಿದಿರುವ ಘಟನೆ, ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮಟ್ಟೂರು ಗ್ರಾಮದಲ್ಲಿ ನಡೆದಿದೆ.
ರೈತ ಸೂಗಪ್ಪ ಬಸಣ್ಣ ಎಂಬುವರ ಮೂರು ಎಕರೆ ಜಮೀನಿನಲ್ಲಿ ತೊಗರಿ ಬೆಳೆಯನ್ನ ಬೆಳೆಯಲಾಗಿತ್ತು. ಶನಿವಾರ ಬೆಳಗ್ಗೆಯಿಂದ ಸಂಜೆವರೆಗೆ ಬೆಳೆಯನ್ನ ಕಟಾವ್ ಮಾಡಿ ಹೊಲದಲ್ಲಿ ಗೂಡು ಹಾಕಲಾಗಿತ್ತು. ಆದ್ರೆ ರಾತ್ರೋರಾತ್ರಿ ಗೂಡಿಗೆ ಬೆಂಕಿ ಬಿದ್ದಿದೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಳೆ ಬೆಂಕಿಗೆ ಆಹುತಿಯಾಗಿದೆ.
ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.